ನವದೆಹಲಿ: ಮುಂದಿನ ಆರು ತಿಂಗಳೊಳಗೆ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ಸೆಮಿಫೈನಲ್ ಸ್ಪರ್ಧೆ ಎಂದೇ ಪರಿಗಣಿಸಲಾಗಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಭಾನುವಾರ ನಡೆಯಲಿದೆ.
ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಮತ್ತು ಮಧ್ಯಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನಡುವೆ ಈ ಮೂರು ರಾಜ್ಯಗಳಲ್ಲಿ ನೇರ ಹಣಾಹಣಿ ಇದೆ. ಕೆ ಚಂದ್ರಶೇಖರ್ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ತೆಲಂಗಾಣದಲ್ಲಿ ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿದ್ದು, ಕಾಂಗ್ರೆಸ್​ ಇಲ್ಲಿ ತೀವ್ರ ಪೈಪೋಟಿ ಒಡ್ಡಿದೆ.
ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಲಾಭವಿದೆ ಎಂದು ಭವಿಷ್ಯ ನುಡಿದಿರುವ ಕೆಲವು ಮತಗಟ್ಟೆ ಸಮೀಕ್ಷೆಗಳು (ಎಕ್ಸಿಟ್​ ಪೋಲ್​) ಮಧ್ಯಪ್ರದೇಶದಲ್ಲಿ ಮತ್ತು ರಾಜಸ್ಥಾನದಲ್ಲಿ ಬಿಜೆಪಿಗೆ ಮುನ್ನಡೆ ಸಾಧ್ಯತೆ ಸೂಚಿಸಿವೆ. ಕೆಲವು ಮತಗಟ್ಟೆ ಸಮೀಕ್ಷೆಗಳಲ್ಲಿ ಕಾಂಗ್ರೆಸ್​ಗೆ ಹೆಚ್ಚಿನ ಸ್ಥಾನಗಳು ಸಿಗುವ ಅಂದಾಜು ವ್ಯಕ್ತವಾಗಿದೆ.
ಮಧ್ಯಪ್ರದೇಶದ 230, ಛತ್ತೀಸ್‌ಗಢದ 90, ತೆಲಂಗಾಣದ 119 ಮತ್ತು ರಾಜಸ್ಥಾನದ 199 ಸ್ಥಾನಗಳಿಗೆ ಬಿಗಿ ಭದ್ರತೆಯ ನಡುವೆ ಬೆಳಗ್ಗೆ 8ರಿಂದ ಮತ ಎಣಿಕೆ ಆರಂಭವಾಗಲಿದೆ. ಮೊದಲು ಅಂಚೆ ಮತಪತ್ರಗಳನ್ನು ಎಣಿಕೆ ಮಾಡಲಾಗುತ್ತದೆ.
ಮೂರು ಹಂತದ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು, ಪಾಸ್ ಹೊಂದಿರುವವರಿಗೆ ಮಾತ್ರ ಮತ ಎಣಿಕೆ ಕೇಂದ್ರಗಳಿಗೆ ಪ್ರವೇಶ ನೀಡಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿಯಿಂದ ಅಧಿಕಾರ ಕಿತ್ತುಕೊಂಡ ಕಾಂಗ್ರೆಸ್ ಪಕ್ಷವು ಮಧ್ಯಪ್ರದೇಶ ಮತ್ತು ತೆಲಂಗಾಣದ ಮೇಲೆ ಕಣ್ಣಿಟ್ಟಿದೆ. ಅಲ್ಲದೆ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳುವ ವಿಶ್ವಾಸ ತೋರಿದೆ. ಕಾಂಗ್ರೆಸ್​ನ ಈ ನಿರೀಕ್ಷೆಗಳು ನಿಜವಾದರೆ, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ರಚಿಸಲಾದ ವಿರೋಧ ಪಕ್ಷದ ಇಂಡಿಯಾ ಮೈತ್ರಿಕೂಟದಲ್ಲಿ ಆ ಪಕ್ಷದ ಸ್ಥಾನಮಾನ ಇನ್ನಷ್ಟು ಬಲಗೊಳ್ಳಲಿದೆ.
ಬಿಜೆಪಿಯು 1998 ರಿಂದ ಗುಜರಾತ್‌ನ ಗೆಲುವಿನ ಸರಣಿಯನ್ನು ಪುನರಾವರ್ತಿಸಲು ಪ್ರಯತ್ನಿಸುತ್ತಿದೆ, 1998 ರಿಂದ ಮಧ್ಯಪ್ರದೇಶದಲ್ಲಿ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಮತ್ತೆ ಸರ್ಕಾರ ರಚಿಸಲು ಆಶಿಸುತ್ತಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಹಿಂದಿ ಹೃದಯಭಾಗದ ರಾಜ್ಯಗಳಲ್ಲಿ ತನ್ನ ಹಿಡಿತವನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿರುವ ಬಿಜೆಪಿಯು ರಾಜಸ್ಥಾನ ಮತ್ತು ಛತ್ತೀಸ್‌ಗಢವನ್ನು ಮರಳಿ ಗೆಲ್ಲಲು ಉತ್ಸುಕವಾಗಿದೆ.

ಮಿಜೋರಾಂ ಮತ ಎಣಿಕೆ ಡಿ. 4ರಂದು:

ಮಿಜೋರಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆಯನ್ನು ಈ ಹಿಂದೆ ಡಿಸೆಂಬರ್ 3 ರಂದು ಕೈಗೊಳ್ಳಲು ನಿರ್ಧರಿಸಲಾಗಿತ್ತು. ಆದರೆ, ಇದನ್ನು ಡಿಸೆಂಬರ್ 4 ಕ್ಕೆ ಮುಂದೂಡಲಾಗಿದೆ. ರಾಜ್ಯದಲ್ಲಿ ಮಿಜೋರಾಂ ಎನ್‌ಜಿಒ ಸಮನ್ವಯ ಸಮಿತಿ (ಎನ್‌ಜಿಒಸಿಸಿ) ಪ್ರತಿಭಟನೆ ಹಿನ್ನೆಲೆಯಲ್ಲಿ ಎಣಿಕೆ ದಿನಾಂಕ ಪರಿಷ್ಕರಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಡಿಸೆಂಬರ್ 3 ಭಾನುವಾರ ಬರುತ್ತದೆ. ಭಾನುವಾರವು ಕ್ರಿಶ್ಚಿಯನ್ನರಿಗೆ ಪವಿತ್ರ ದಿನವಾಗಿದೆ. ಹೀಗಾಗಿ, ಮತ ಎಣಿಕೆ ದಿನ ಬದಲಿಸಬೇಕೆಂದು ಅನೇಕ ಸಂಘಟನೆಗಳು ಮನವಿ ಮಾಡಿದ್ದವು. ಮಿಜೋರಾಂನಲ್ಲಿ ಕ್ರಿಶ್ಚಿಯನ್​ ಸಮುದಾಯದವರು ಬಹುಸಂಖ್ಯಾತರಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + ten =
Remember me
