ಅಯೋಧ್ಯಾ:ನಾವು ಬಿಜೆಪಿಯಿಂದ ದೂರವಾಗಿದ್ದೇವೆ ಹೊರತು ಹಿಂದುತ್ವವನ್ನು ಬಿಟ್ಟುಕೊಟ್ಟಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಹೇಳಿದರು.
ಅಯೋಧ್ಯೆಗೆ ಭೇಟಿ ನೀಡಿದ ಅವರು ಮಾತನಾಡಿ, ಬಿಜೆಪಿ ಎಂದರೆ ಹಿಂದುತ್ವ ಎಂದರ್ಥವಲ್ಲ. ಹಿಂದುತ್ವವೇ ಬೇರೆ, ಬಿಜೆಪಿಯೇ ಬೇರೆ ಎಂದರು.
ಅಯೋಧ್ಯಾ ರಾಮಮಂದಿರ ನಿರ್ಮಾಣಕ್ಕೆ ತಮ್ಮ ಟ್ರಸ್ಟ್​ನಿಂದ 1 ಕೋಟಿ ರೂಪಾಯಿ ನೀಡುವುದಾಗಿ ಭರವಸೆ ನೀಡಿದ ಅವರು, ನಾನಿಲ್ಲಿ ಶ್ರೀರಾಮನ ಆಶೀರ್ವಾದ ಪಡೆಯಲು ಬಂದಿದ್ದೇನೆ. ಇಂದು ನನ್ನ ಜತೆಗೆ ಭಗವಾ ಕುಟುಂಬದ ಹಲವು ಸದಸ್ಯರು ಬಂದಿದ್ದಾರೆ. ಕಳೆದ ಒಂದೂವರೆ ವರ್ಷದಲ್ಲಿ ಇದು ನನ್ನ ಮೂರನೇ ಭೇಟಿ ಎಂದು ತಿಳಿಸಿದರು.
2019ರ ನವೆಂಬರ್​ನಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಕಳೆದುಕೊಂಡ ಶಿವಸೇನೆ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್​-ಎನ್​ಸಿಪಿಯೊಂದಿಗೆ ಸೇರಿ ಸರ್ಕಾರ ರಚನೆ ಮಾಡಿದೆ. ಮಹಾ ಅಘಾಡಿ ಸರ್ಕಾರದ ಮುಖ್ಯಮಂತ್ರಿಯಾಗಿ ನವೆಂಬರ್​ 28ರಂದು ಪ್ರಮಾಣವಚನ ಸ್ವೀಕರಿಸಿದ ಬಳಿಕ ಉದ್ಧವ್​ ಠಾಕ್ರೆಯವರು ಇದೇ ಮೊದಲ ಬಾರಿಗೆ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ.
ಉದ್ಧವ್​ ಠಾಕ್ರೆಯವರು ಹಿಂದುತ್ವ ಅಜೆಂಡಾ ಇಟ್ಟುಕೊಂಡು ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ ಎಂಬ ಆರೋಪವನ್ನು ತಳ್ಳಿ ಹಾಕಿದ್ದ ಶಿವಸೇನಾ ನಾಯಕ ಸಂಜಯ್ ರಾವತ್ ಅವರು, ಶಿವಸೇನೆಗೆ ಹಿಂದುತ್ವದ ವಿಚಾರದಲ್ಲಿ ಗಿಮಿಕ್​ಗಳನ್ನು ಮಾಡುವ ಯಾವುದೇ ಅಗತ್ಯವೂ ಇಲ್ಲ ಎಂದಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − three =
Remember me
