ತಿರುವನಂತಪುರ:ಕೇರಳದಲ್ಲಿ ಭಾರೀ ಕೋಲಾಹಲ ಎಬ್ಬಿಸಿದ್ದ ಶರೋನ್ ರಾಜ್​ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ನ್ಯಾಯಾಂಗ ಬಂಧನದಲ್ಲಿರುವ ಪ್ರಕರಣದ ಪ್ರಮುಖ ಆರೋಪಿ ಗ್ರೀಷ್ಮಾಳನ್ನು ಮರು ವಿಚಾರಣೆ ನಡೆಸಲು ನ್ಯಾಯಾಲಯ ಅನುಮತಿ ನೀಡಿದ್ದು, ಆಕೆಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವ ಕ್ರಮ ಅಪಾಯಕಾರಿ ಎಂಬ ಚರ್ಚೆ ನಡೆಯುತ್ತಿದೆ.
ತಿರುವನಂತಪುರದ ಗ್ರಾಮಾಂತರ ಅಪರಾಧ ವಿಭಾಗದ ಉಪ ಅಧೀಕ್ಷಕ ರಸಿತ್ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿದ ನೆಯ್ಯಟ್ಟಿಂಕರ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಮರು ವಿಚಾರಣೆಗೆ ಅನುಮತಿ ನೀಡಿದೆ.
ಮೊದಲ ಆರೋಪಿಗೆ ಜಾಮೀನು ನೀಡಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಅದು ವಿಚಾರಣೆ ಮೇಲೆ ಪರಿಣಾಮ ಬೀರುತ್ತದೆ. ಸಾಂದರ್ಭಿಕ ಸಾಕ್ಷ್ಯಗಳು ಕಳೆದುಹೋಗುವ ಸಾಧ್ಯತೆ ಇದೆ. ಈ ಬಗ್ಗೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವಿ.ಎಸ್. ವಿನೀತ್ ಕುಮಾರ್ ಮಾತನಾಡಿ, ಆತ್ಮಹತ್ಯೆ ಮಾಡಿಕೊಳ್ಳುವ ಪ್ರವೃತ್ತಿ ಹೊಂದಿರುವ ಗ್ರೀಷ್ಮಾ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಅಪಾಯಕಾರಿ ಎಂದರು. ಏಕೆಂದರೆ, ಈ ಹಿಂದೆ ಪೊಲೀಸ್​ ಠಾಣೆಯಲ್ಲೇ ಗ್ರೀಷ್ಮಾ ಆತ್ಮಹತ್ಯೆಗೆ ಯತ್ನಿಸಿದ್ದಳು. ವಿನೀತ್ ಕುಮಾರ್ ಅವರ ವಾದವನ್ನು ಸ್ವೀಕರಿಸಿದ ನ್ಯಾಯಾಲಯ ಸದ್ಯಕ್ಕೆ ಪೊಲೀಸ್​ ಕಸ್ಟಡಿಯಲ್ಲೇ ವಿಚಾರಣೆಗೆ ಅನುಮತಿ ನೀಡಿದೆ.
ಇದನ್ನೂ ಓದಿ:ನಿಮ್ಮ ಕಣ್ಣಿಗೊಂದು ಸವಾಲು: ಈ ಫೋಟೋದಲ್ಲಿ ಅಡಗಿರುವ ಬೆಕ್ಕನ್ನು 10 ಸೆಕೆಂಡ್​ನಲ್ಲಿ ಪತ್ತೆ ಹಚ್ಚುವಿರಾ?
ಗ್ರೀಷ್ಮಾ ಬಿಡುಗಡೆಗೆ ಜಾಮೀನು ಅರ್ಜಿ ಸಲ್ಲಿಸಲಾಗಿತ್ತು. ಆದರೆ ಅನಿರೀಕ್ಷಿತವಾಗಿ, ಆರೋಪಿ ಗ್ರೀಷ್ಮಾ ಪರ ವಕೀಲರು ಜಾಮೀನು ಅರ್ಜಿಯನ್ನು ಹಿಂತೆಗೆದುಕೊಂಡಿದ್ದಾರೆ. ಕಸ್ಟಡಿ ವಿಚಾರಣಾ ಅರ್ಜಿ ಇತ್ಯರ್ಥಗೊಂಡ ಬಳಿಕ ಮತ್ತೊಮ್ಮೆ ಜಾಮೀನು ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು ಎಂಬ ಪ್ರತಿವಾದಿ ವಾದವನ್ನು ನ್ಯಾಯಾಲಯ ಒಪ್ಪಿಕೊಂಡಿದೆ.
ಕೇರಳದ ತಿರುವನಂತಪುರದಲ್ಲಿ ಅ.25ರಂದು ರೇಡಿಯೋಲಜಿ ವಿದ್ಯಾರ್ಥಿ ಶರೋನ್ ರಾಜ್ ಮೃತಪಟ್ಟಿದ್ದ. ಆತನ ಪ್ರೇಯಸಿ ಗ್ರೀಷ್ಮಾ ಮೇಲೆ ಅನುಮಾನ ಮೂಡಿ ಪೊಲೀಸರು ಆಕೆಯನ್ನು ವಶಕ್ಕೆ ಪಡೆದುಕೊಂಡಿದ್ದರು. ಸಾಕಷ್ಟು ವಿಚಾರಣೆ ಬಳಿಕ ಅ.31 ರಂದು ಗ್ರೀಷ್ಮಾ, ವಿಷವುಣಿಸಿ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಳು. ಅ. 14ರಂದು ಶರೋನ್​ ರಾಜ್​ನನ್ನು ತನ್ನ ಮನೆಗೆ ಕರೆಸಿಕೊಂಡ ಗ್ರೀಷ್ಮಾ, ಆಯುರ್ವೇದದ ಔಷಧಿಯಲ್ಲಿ ಕ್ರಿಮಿನಾಶಕವನ್ನು ಬೆರೆಸಿ ಕುಡಿಸಿದ್ದಳು. ಬಳಿಕ ವಿಪರೀತ ವಾಂತಿ ಮಾಡಿಕೊಂಡಿದ್ದ ರಾಜ್​, ತನ್ನ ಸ್ನೇಹಿತನೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವು-ಬದುಕಿನ ನಡುವೆ ಹೋರಾಡಿ ಅ.25 ರಂದು ಆತ ಮೃತಪಟ್ಟನು. ಸಂಚು ರೂಪಿಸಿ ಆತನನ್ನು ಗ್ರೀಷ್ಮಾ ಕೊಲೆ ಮಾಡಿದ್ದಾಳೆ.
ಗ್ರೀಷ್ಮಾ 2022ರ ಮಾರ್ಚ್ 4ರಂದು ಯೋಧನೊಬ್ಬನ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಳು. ಬಳಿಕ ಶರೂನ್​ ಜತೆ ತನ್ನ ಸಂಬಂಧವನ್ನು ಕಡಿದುಕೊಂಡಿದ್ದಳು. ಆದರೆ, ಮೇ ತಿಂಗಳಲ್ಲಿ ಶರೂನ್​ ಮತ್ತೆ ಗ್ರೀಷ್ಮಾಗೆ ಹತ್ತಿರವಾಗಿದ್ದ.​ ಬಳಿಕ ನವೆಂಬರ್‌ನಲ್ಲಿ ಶರೋನ್ ಅವರ ಮನೆಯಲ್ಲಿ ಮತ್ತು ನಂತರ ವೆಟ್ಟುಕಾಡ್ ಚರ್ಚ್‌ನಲ್ಲಿ ವಿವಾಹವಾದರು. ಇದಾದ ಬಳಿಕ ಥ್ರಿಪ್ಪರಪುವಿನಲ್ಲಿ ರೂಮ್​ ಬುಕ್​ ಮಾಡಿ ಇಬ್ಬರು ಲೈಂಗಿಕ ಕ್ರಿಯೆ ನಡೆಸಿದರು. ಯೋಧನ ಜತೆ ತನ್ನ ಮದುವೆ ದಿನ ಹತ್ತಿರ ಬರುತ್ತಿದ್ದಂತೆ ಶರೂನ್​ನಿಂದ ದೂರಾಗಲು ಗ್ರೀಷ್ಮಾ ಬಯಸಿದಳು. ಲವ್​ ಬ್ರೇಕಪ್​ ಮಾಡಿಕೊಳ್ಳಲು ಸಾಕಷ್ಟು ಮನವೊಲಿಸಿದಳು. ಆದರೆ, ಅದಕ್ಕೆ ಆತ ಒಪ್ಪಲಿಲ್ಲ. ತನ್ನ ಜಾತಕದ ಪ್ರಕಾರ ಮೊದಲ ಪತಿ ಸಾಯುತ್ತಾನೆ ಎಂದು ಹೇಳುವ ಮೂಲಕ ರಾಜ್​ನನ್ನು ಬೆದರಿಸುವ ಪ್ರಯತ್ನ ಮಾಡಿದ್ದಳು. ಆದರೂ ಆತ ಆಕೆಯನ್ನು ಬಿಡಲು ತಯಾರಿರಲಿಲ್ಲ. ತನ್ನೆಲ್ಲ ಪ್ರಯತ್ನಗಳು ವಿಫಲವಾದ್ದರಿಂದ ಅಂತಿಮವಾಗಿ ಕೊಲೆಯನ್ನು ಆಯ್ಕೆ ಮಾಡಿಕೊಂಡಳು ಎಂದು ಪೊಲೀಸ್​ ಮೂಲಗಳು ತಿಳಿಸಿವೆ.
2022ರ ಅಕ್ಟೋಬರ್​ 13ರಂದು ಇಬ್ಬರು 1 ಗಂಟೆ 7 ನಿಮಿಷಗಳ ಕಾಲ ಸೆಕ್ಸ್​ ಬಗ್ಗೆ ಮಾತನಾಡಿದ್ದಾರೆ. ಸೆಕ್ಸ್​ಗಾಗಿ ಒತ್ತಾಯ ಮಾಡುತ್ತಿದ್ದರಿಂದ ಅಕ್ಟೋಬರ್​ 14ರಂದು ನಾನು ಗ್ರೀಷ್ಮಾ ಮನೆಗೆ ಹೋದೆ ಎಂದು ಶರೂನ್​ ತನ್ನ ಸಂಬಂಧಿಕರ ಮುಂದೆ ಹೇಳಿಕೊಂಡಿದ್ದಾನೆ. ಆಯುರ್ವೇದಿಕ್​ ಔಷಧದಲ್ಲಿ ವಿಷ ಬೆರೆಸಿ ನೀಡಿ ಕೊಲೆ ಮಾಡಿದ್ದಾಳೆ. ಬಳಿಕ ಆತನೊಂದಿಗೆ ನಡೆಸಿದ್ದ ಚಾಟ್​ ಅನ್ನು ಗ್ರೀಷ್ಮಾ ಡಿಲೀಟ್​ ಮಾಡಿದ್ದಾಳೆ. ಅಳಿಸಿದ ಸಂದೇಶಗಳನ್ನು ಹಿಂಪಡೆಯಬಹುದೇ ಎಂದು ನೋಡಲು ಅವಳು ಹಲವಾರು ಬಾರಿ ಗೂಗಲ್ ಮತ್ತು ಯೂಟ್ಯೂಬ್‌ನಲ್ಲಿಯೂ ಹುಡುಕಾಡಿದ್ದಾಳೆ.
ಇದನ್ನೂ ಓದಿ:ಬಿಕಿನಿ ತೊಟ್ಟು ಕ್ಯಾಮೆರಾಗೆ ಪೋಸ್​ ನೀಡಿದ ನಟಿ, ನಿರೂಪಕಿ ಅನಸೂಯ! ಫೋಟೋಗಳು ವೈರಲ್​
ಸಾಯುವ ಕೊನೆಯ ಕ್ಷಣದಲ್ಲಿ ಐಸಿಯು ಬೆಡ್​ನಲ್ಲಿದ್ದ ಶರೋನ್ ರಾಜ್, ನನಗೆ ವಿಷವನ್ನು ನೀಡಿ ವಂಚನೆ ಮಾಡಿದ್ದಾಳೆ ಎಂದು ಸಂಬಂಧಿಕರಿಗೆ ಹೇಳಿದ್ದಾನೆ. ಈ ಎಲ್ಲ ಅಂಶಗಳನ್ನು ಪೊಲೀಸರು ಚಾರ್ಜ್​ಶೀಟ್​ನಲ್ಲಿ ದಾಖಲಿಸಿದ್ದು, ನೆಯ್ಯಟ್ಟಿಂಕರ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.(ಏಜೆನ್ಸೀಸ್​)
ಲವ್​ ಬ್ರೇಕಪ್​ಗೆ ಒಪ್ಪದ ಪ್ರಿಯಕರನ ಹತ್ಯೆ​ ಪ್ರಕರಣ: ಚಾರ್ಜ್​ಶೀಟ್​ನಲ್ಲಿ ಬರೀ ಲೈಂಗಿಕ ಕ್ರಿಯೆಯದ್ದೇ ಉಲ್ಲೇಖ

ಲವ್​ ಬ್ರೇಕಪ್​ಗೆ ಒಪ್ಪದ ಪ್ರಿಯಕರನ ಹತ್ಯೆ​ ಪ್ರಕರಣ: ಪೊಲೀಸ್​ ಠಾಣೆಯ ಬಾತ್​ರೂಮ್​ನಲ್ಲಿ ಪ್ರೇಯಸಿಯ ಹೈಡ್ರಾಮ

ಲವ್​ ಬ್ರೇಕಪ್​ಗೆ ಒಪ್ಪದ ಪ್ರಿಯಕರನಿಗೆ ವಿಷವುಣಿಸಿದ ಪ್ರೇಯಸಿ! ಸಾಯೋ ಮುನ್ನ ಯುವಕ ಆಡಿದ ಮಾತು ಮನಕಲಕುವಂತಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − eight =
Remember me
