ಬೆಂಗಳೂರು/ನವದೆಹಲಿ : ನಾಡಿನಾದ್ಯಂತ ಇಂದು ಮಹಾಶಿವರಾತ್ರಿ ಆಚರಿಸಲಾಗುತ್ತಿದ್ದು, ವಿವಿಧೆಡೆ ಶಿವ ದೇಗುಲಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆದಿವೆ. ಭಕ್ತರು ಸರದಿಯಲ್ಲಿ ಭಗವಂತನ ದರ್ಶನ ಪಡೆಯುತ್ತಿದ್ದಾರೆ.
ಬೆಂಗಳೂರಿನ ಕೆಂಗೇರಿ, ಯಶವಂತಪುರ, ಮಲ್ಲೇಶ್ವರ, ಮನವರ್ತಪೇಟೆ ಶಿವ ದೇಗಲುಗಳಲ್ಲಿ, ಅದೇ ರೀತಿ, ಜಿಲ್ಲೆಗಳಲ್ಲಿ ಪ್ರಖ್ಯಾತ ಶಿವನ ದೇವಸ್ಥಾನಗಳಲ್ಲಿ ಮುಂಜಾನೆಯಿಂದಲೇ ಪೂಜೆಗಳು ಆರಂಭವಾದವು. ಉತ್ತರಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಶಿವರಾತ್ರಿ ಹಬ್ಬದ ಸಂಭ್ರಮ ಮುಗಿಲು ಮುಟ್ಟಿದೆ. ಶ್ರೀ ಮಹಾಬಲೇಶ್ವರ ದರ್ಶನಕ್ಕೆ ಲಕ್ಷಾಂತರ ಸಂಖ್ಯೆಯ ಭಕ್ತರು ಆಗಮಿಸಿ ಆತ್ಮಲಿಂಗಕ್ಕೆ ಪೂಜೆ ಅಭಿಷೇಕ ಸಲ್ಲಿಸುತ್ತಿದ್ದಾರೆ. ಮುರ್ಡೇಶ್ವರ, ಯಾಣ, ಕವಳೇಶ್ವರನ ಸನ್ನಿಧಿಯಲ್ಲೂ ವಿಶೇಷ ಪೂಜೆ ನಡೆಯುತ್ತಿದೆ.
ಇದೇ ರೀತಿ, ಚಾಮರಾಜನಗರ ಜಿಲ್ಲೆಯ ಮಹದೇಶ್ವರನ ಬೆಟ್ಟದಲ್ಲೂ ಮಹಾಶಿವರಾತ್ರಿ ಸಂಭ್ರಮ ಸಡಗರ ನೆಲೆಸಿದೆ. ಬೆಳಗಿನ ಜಾವ 3 ಗಂಟೆಯಿಂದಲೇ ಪೂಜಾ ಕೈಂಕರ್ಯ ಆರಂಭಗೊಂಡವು. ರುದ್ರಾಭಿಷೇಕ, ಕ್ಷೀರಾಭಿಷೇಕ, ಶತಬಿಲ್ವಾರ್ಚನೆ ಮೊದಲಾದ ಪೂಜೆಗಳು ನಡೆದವು. ಬೆಳಗ್ಗೆಯಿಂದಲೇ ಸಾಲುಗಟ್ಟಿದ ಭಕ್ತರು ಮಹದೇಶ್ವರನ ದರ್ಶನ ಪಡೆಯುತ್ತಿದ್ದಾರೆ.
Heartening to see masses that have gathered from all over the state, country & world for this divine night like no other – mark of a truly spiritual gathering that transcends every limitation of caste, creed, nationality or race that have been set by man. -Sg#DontYawnTillDawnpic.twitter.com/YQnqTeWYfI
— Sadhguru (@SadhguruJV)February 21, 2020


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 16 =
Remember me
