ನವದೆಹಲಿ:ಮುಜಾಫರ್‌ನಗರದ ಶಾಲಾ ಶಿಕ್ಷಕಿಯೊಬ್ಬರು ಅಲ್ಪಸಂಖ್ಯಾತ ಸಮುದಾಯದ ಹುಡುಗನಿಗೆ ಕಪಾಳಮೋಕ್ಷ ಮಾಡುವಂತೆ ಇನ್ನೋರ್ವ ವಿದ್ಯಾರ್ಥಿಗೆ ಹೇಳಿರುವುದು ನಿರ್ದಿಷ್ಟವಾಗಿ ಒಂದು ಸಮುದಾಯವನ್ನು ಗುರಿಯಾಗಿಸಿದೆ. ಇದರ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕು ಎಂದು ಸುಪ್ರೀಂ ಕೋರ್ಟ್​ ಹೇಳಿದೆ.
ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿಗಳಾದ ಅಭಯ್​.ಎಸ್​. ಓಕಾ ಹಾಗೂ ಪಂಕಜ್​ ಮಿತ್ತಲ್​ ಅವರಿದ್ದ ದ್ವಿಸದಸ್ಯ ಪೀಠವು ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಮುಜಾಫರ್​ನಗರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.
ಶಿಕ್ಷಕಿ ನಿರ್ದಿಷ್ಟವಾಗಿ ಒಂದು ಸಮುದಾಯವನ್ನು ಗುರಿಯಾಗಿಸಿದ್ದಾರೆ. ಈ ವಿಚಾರವು ನಮಗೆ ಅಸಮಾಧನಾವನ್ನು ಉಂಟು ಮಾಡಿದ್ದು, ಒಬ್ಬ ಶಿಕ್ಷಕರಾಗಿ ವಿದ್ಯಾರ್ಥಿಗಳಿಗೆ ಕಲಿಸುವ ಗುಣಮಟ್ಟದ ಶಿಕ್ಷಣ ಈ ರೀತಿ ಇರುತ್ತದೆಯೇ. ಈ ಘಟನೆಯ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕಾಗಿದ್ದು, ಗಂಭೀರ ಸ್ವರೂಪದ ಪ್ರಕರಣ ಇದಾಗಿದೆ.
ಇದನ್ನೂ ಓದಿ:ಮಾಲೀಕನ ಮಗನನ್ನು ಅಪಹರಿಸಿ ಸುಲಿಗೆಗೆ ಯತ್ನ; ಹಣ ಕೊಡದಿದ್ದಕ್ಕೆ ಹತ್ಯೆ
FIRನಲ್ಲಿ ಮಗುವಿನ ತಂದೆ ಮಾಡಿರುವ ಆರೋಪಗಳನ್ನು ಉಲ್ಲೇಖಿಸಲಾಗಿಲ್ಲ. ಧರ್ಮದ ಕಾರಣಕ್ಕೆ ನನ್ನ ಮಗನನ್ನು ಥಳಿಸಲಾಗಿದೆ ಎಂದು ಮಗುವಿನ ತಂದೆ ಪೊಲೀಸರ ಬಳಿ ಹೇಳಿಕೆ ನೀಡಿದ್ದಾರೆ. ಆದರೆ, ಈ ವಿಚಾರವನ್ನು FIRನಲ್ಲಿ ಉಲ್ಲೇಖಿಸಲಾಗಿಲ್ಲ. ಈ ಪ್ರಕರಣವು ಶಿಕ್ಷಣ ಹಕ್ಕು ಕಾಯ್ದೆಯ ಉಲ್ಲಂಘನೆಯಾಗಿದ್ದು, ಉತ್ತರಪ್ರದೇಶ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ ಎಂದು ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಪ್ರಕರಣದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳನ್ನು ಕೌನ್ಸಿಲಿಂಗ್​ಗೆ ಒಳಪಡಿಸಿ ಅದರ ವರದಿಯನ್ನು ಸಲ್ಲಿಸುವಂತೆ ಸೂಚಿಸಿ ಸುಪ್ರೀಂ ಕೋರ್ಟ್​ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್​ 30ಕ್ಕೆ ಮುಂದೂಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − eighteen =
Remember me
