ಚಂಡೀಗಡ: ಪಂಜಾಬಿ ಗಾಯಕ ಶುಭದೀಪ್ ಸಿಂಗ್ ಸಿಧು ಮೂಸೆವಾಲಾ ಪಾಲಕರು ಗಂಡು ಮಗು ಪಡೆದ ಎರಡು ದಿನಗಳ ನಂತರ, ಅವರ ತಂದೆ ಬಲ್ಕೌರ್ ಸಿಂಗ್ ಅವರು ತಾವಿ ಸಂಕಷ್ಟಕ್ಕೆ ಸಿಲುಕಿರುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್​ ಹಾಕಿದ್ದಾರೆ. “ತನ್ನ ಮಗು ಅಸಲಿ ಎಂದು ಸಾಬೀತುಪಡಿಸಲು ಪಂಜಾಬ್​ ಸರ್ಕಾರ ಕಿರುಕುಳ ನೀಡುತ್ತಿದೆ” ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ದೂರು!
ತನ್ನ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೀಡಿ ಯೋ ಹಾಕಿರುವ ಬಲ್ಕೌರ್ ಸಿಂಗ್, ದಾಖಲೆಗಳನ್ನು ನೀಡಲು ಜಿಲ್ಲಾಡಳಿತವು ಕಿರುಕುಳ ನೀಡುತ್ತಿದೆ. ಹೀಗಾಗಿ ನಾನು ಬೆಳಿಗ್ಗೆಯಿಂದ ದುಃಖಿತನಾಗಿದ್ದೇನೆ. ಈ ಮಗುವಿನ ದಾಖಲೆಗಳನ್ನು ಪೂರೈಸಬೇಕು ಎಂದು ಜಿಲ್ಲಾಡಳಿತ ಬೆಳಗ್ಗೆಯಿಂದ ಸತಾಯಿಸುತ್ತಿದೆ. ಈ ಮಗು ಅಸಲಿ ಎಂದು ಸಾಬೀತುಪಡಿಸಲು ನನಗೆ ಎಲ್ಲಾ ರೀತಿಯ ಪ್ರಶ್ನೆಗಳನ್ನು ಕೇಳಲಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.
ಸಿದ್ದು ಮೂಸೆವಾಲಾ ಹತ್ಯೆಯಾದ 2 ವರ್ಷದ ನಂತರ, ಅವರ ಪಾಲಕರು ಗಂಡು ಮಗು ವನ್ನು ಪಡೆದಿದ್ದಾರೆ. ನನ್ನ ಪತ್ನಿಗೆ ಚಿಕಿತ್ಸೆ ಕೊಡಿಸುವಂತೆ ಸರ್ಕಾರಕ್ಕೆ ವಿಶೇಷವಾಗಿ ಮುಖ್ಯಮಂತ್ರಿಗೆ ಮನವಿ ಮಾಡಲು ನಾನು ಬಯಸುತ್ತೇನೆ ಎಂದು ಅವರು ಹೇಳಿದರು. ನಾನು ಇಲ್ಲಿ ವಾಸಿಸುತ್ತೇನೆ. ನಾನು ಇಲ್ಲಿ ವಾಸಿಸುವುದನ್ನು ಮುಂದುವರಿಸುತ್ತೇನೆ. ನೀವು ನನ್ನನ್ನು ಎಲ್ಲಿ ಕರೆದರೂ ನಾನು ಬರುತ್ತೇನೆ. ”
ಸಿಎಂಗೆ ಸಂದೇಶ ರವಾನಿಸಿದ ಅವರು, “ನಿಮಗೆ ಯು ಟರ್ನ್ ತೆಗೆದುಕೊಳ್ಳುವ ಅಭ್ಯಾಸವಿದೆ ಎಂದು ನಾನು ನಿಮಗೆ ಬಲವಾದ ಮಾತುಗಳಲ್ಲಿ ಹೇಳಲು ಬಯಸುತ್ತೇನೆ. ನೀವು ನನಗೆ ಕಿರುಕುಳ ನೀಡಲು ಪ್ರಯತ್ನಿಸುತ್ತಿದ್ದರೆ ನನ್ನನ್ನು ರಿಸೀವ್​ ಮಾಡಿಕೊಳ್ಳಲು ಸಂಪೂರ್ಣವಾಗಿ ಸಿದ್ಧರಾಗಿ ಬನ್ನಿ. ನಾನು ಯಾವುದೇ ಸಂದರ್ಭದಲ್ಲೂ ಕಾನೂನು ಉಲ್ಲಂಘಿಸಿಲ್ಲ. ನಾನು ತಪ್ಪು ಮಾಡಿದ್ದರೆ ನೀವು ನನ್ನನ್ನು ಜೈಲಿಗೆ ಹಾಕಿ. ನನ್ನ ಮೇಲೆ ನಂಬಿಕೆ ಇಲ್ಲದಿದ್ದರೆ ಎಫ್‌ಐಆರ್ ದಾಖಲಿಸಿ ನನ್ನನ್ನು ಕಂಬಿ ಹಿಂದೆ ಹಾಕಿ . ನಂತರ ನಿಮ್ಮ ತನಿಖೆಯನ್ನು ಮಾಡಿ. ಅದೇ ಸಮಯದಲ್ಲಿ ನಾನು ನಿಮಗೆ ಕಾನೂನು ದಾಖಲೆಗಳನ್ನು ನೀಡುತ್ತೇನೆ ಮತ್ತು ಈ ಆರೋಪದಿಂದ ಹೊರಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಭಾನುವಾರ ಬಟಿಂಡಾದ ಜಿಂದಾಲ್ ಆಸ್ಪತ್ರೆಯಲ್ಲಿ ಮಗು ಜನಿಸಿತ್ತು. ವಿವಿಧ ರಾಜಕೀಯ ಮುಖಂಡರು ಕುಟುಂಬಸ್ಥರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಮೂಸೆವಾಳ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದರು. ಬಾಲ್ಕೌರ್ ಸಿಂಗ್ ಅವರಿಗೆ ಶುಭದೀಪ್ ಎಂದು ಹೆಸರಿಟ್ಟಿದ್ದೇನೆ ಎಂದು ಹೇಳಿಕೆ ನೀಡಿದ್ದರು,
2022 ರಲ್ಲಿ ಮಾನ್ಸಾದಿಂದ ಕಾಂಗ್ರೆಸ್ ಟಿಕೆಟ್‌ ಪಡೆದು ಪಂಜಾಬ್ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಮೂಸೆವಾಲಾ, ಅದೇ ವರ್ಷ ಮೇ 29 ರಂದು ಕೊಲೆಯಾದರು. ಈ ಪ್ರಕರಣದಲ್ಲಿ ದರೋಡೆಕೋರರಾದ ಲಾರೆನ್ಸ್ ಬಿಷ್ಣೋಯ್ ಮತ್ತು ಗೋಲ್ಡಿ ಬ್ರಾರ್ ಸೇರಿದಂತೆ ಮೂವತ್ತೊಂದು ಆರೋಪಿಗಳನ್ನು ಹೆಸರಿಸಲಾಗಿದ್ದು, ಇದುವರೆಗೆ 25 ಮಂದಿಯನ್ನು ಬಂಧಿಸಲಾಗಿದೆ.
ಮೂಸೆವಾಲ ಅವರ ತಂದೆ ತಾಯಿಗೆ ಒಬ್ಬನೇ ಮಗು. ಚರಣ್ ಕೌರ್ ಅವರಿಗೆ 58 ವರ್ಷ ಮತ್ತು ಅವರ ತಂದೆ ಬಲ್ಕೌರ್ ಸಿಂಗ್ ಅವರಿಗೆ 60 ವರ್ಷ. ಅವರು ಈ ಹಿಂದೆ ಮೂಸಾ ಗ್ರಾಮದ ಸರಪಂಚ್ ಆಗಿ ಆಯ್ಕೆಯಾಗಿದ್ದರು. ಚರಣ್ ಕೌರ್ ಆರು ತಿಂಗಳಿನಿಂದ ಸಾರ್ವಜನಿಕರಿಂದ ದೂರ ಉಳಿದಿದ್ದಾರೆ.ಮೂಸೆವಾಲ ಪಾಲಕರು ಗರ್ಭಧಾರಣೆಗಾಗಿ ಐವಿಎಫ್ ತಂತ್ರವನ್ನು ಆಯ್ಕೆ ಮಾಡಿಕೊಂಡಿದ್ದರು. ಕಳೆದ ವರ್ಷ ವಿದೇಶಕ್ಕೆ ಹೋಗಿದ್ದರು ಎಂದು ಮೂಲಗಳು ತಿಳಿಸಿವೆ. ಕಾರ್ಯವಿಧಾನ ಯಶಸ್ವಿಯಾಗುವವರೆಗೆ ಸುದ್ದಿಯನ್ನು ಸಾರ್ವಜನಿಕಗೊಳಿಸಬಾರದು ಎಂದು ಕುಟುಂಬವು ಆ ಸಮಯದಲ್ಲಿ ವಿನಂತಿಸಿತ್ತು.
ಶಹನಾ ಆತ್ಮಹತ್ಯೆ: ರುವೈಸ್ ಗೆ ಹೈಕೋರ್ಟ್‌ನಲ್ಲಿ ಉಲ್ಟಾ ಹೊಡೆದಿದ್ದು, ವ್ಯಾಸಂಗ ಮುಂದುವರಿಸಲು ಸಾಧ್ಯವಿಲ್ಲ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × 2 =
Remember me
