ಮುಂಬೈ:2024ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಫೈಜಾಬಾದ್‌ನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋತಿದೆ. ಅಯೋಧ್ಯೆ ಕೂಡ ಈ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಕೆಲವು ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಇಲ್ಲಿ ಭವ್ಯ ರಾಮಮಂದಿರವನ್ನು ಉದ್ಘಾಟಿಸಿದ್ದರು. ವಿಮಾನ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳಿಗೂ ವ್ಯವಸ್ಥೆ ಮಾಡಲಾಗಿದೆ. ಆದರೆ ಸಮಾಜವಾದಿ ಪಕ್ಷದ ಅವಧೇಶ್ ಪ್ರಸಾದ್ ಇಲ್ಲಿ ಅಸಾಧಾರಣ ಗೆಲುವು ಸಾಧಿಸಿದ್ದಾರೆ. ಈ ಹಿನ್ನಲೆಯಲ್ಲಿ ಬಹುಭಾಷಾ ಗಾಯಕ ಸೋನು ನಿಗಮ್ ಅಯೋಧ್ಯೆಯ ಮತದಾರರನ್ನು ಕೆಟ್ಟದಾಗಿ ಅವಮಾನಿಸಿದ್ದಾರೆ ಎಂಬ ಪೋಸ್ಟಿಂಗ್ ಗಳು ಬರುತ್ತಿವೆ. ಇದರಿಂದಾಗಿ ಅವರ ಮೇಲೆ ಟೀಕೆಗಳ ಸುರಿಮಳೆಯಾಗುತ್ತಿದೆ. ಆದರೆ ಅಸಲಿ ಸಂಗತಿಯೇ ಬೇರೆ ಇದೆ…

ಸೋನು ನಿಗಮ್‌ ಅಯೋಧ್ಯೆ ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ಈ ಟ್ವೀಟ್‌ ಸಾಮಾಜಿಕ ತಾಣದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.
‘ಇಡೀ ಅಯೋಧ್ಯೆಯನ್ನು ಭವ್ಯವಾಗಿ ನಿರ್ಮಿಸಲಾಗಿದೆ. ಸರ್ಕಾರ ಹೊಸ ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣವನ್ನು ಮಂಜೂರು ಮಾಡಿದೆ. 500 ವರ್ಷಗಳ ನಂತರ ರಾಮಮಂದಿರ ನಿರ್ಮಾಣವಾಗಿದೆ. ದೇವಾಲಯವನ್ನು ಸುಂದರವಾಗಿ ನಿರ್ಮಿಸಲಾಗುತ್ತಿದೆ. ಅಂತಹ ಪಕ್ಷ ಅಯೋಧ್ಯೆಯಲ್ಲಿ ಗೆಲ್ಲಲಿಲ್ಲ. ಅಯೋಧ್ಯೆಯ ಜನರು ನಾಚಿಕೆಪಡಬೇಕು’ ಎಂದು ಸೋನು ನಿಗಮ್ ಸಿಂಗ್ ಎಂಬ ಖಾತೆಯಿಂದ ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್ ಕೆಲವೇ ಕ್ಷಣಗಳಲ್ಲಿ ವೈರಲ್ ಆಗಿದೆ.

ಈ ಪೋಸ್ಟ್ ಇಂಟರ್‌ನೆಟ್‌ನಲ್ಲಿ ಕಾಣಿಸಿಕೊಂಡ ತಕ್ಷಣ ಜನರು ಈ ಪೋಸ್ಟ್ ಅನ್ನು ಖ್ಯಾತ ಗಾಯಕ ಸೋನು ನಿಗಮ್ ಮಾಡಿದ್ದಾರೆ ಎಂದು ಭಾವಿಸಿದ್ದರು. ಇದು ಸಂಪೂರ್ಣ ಸುಳ್ಳು. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ಪೋಸ್ಟ್‌ಗೂ ಗಾಯಕ ಸೋನು ನಿಗಮ್‌ಗೂ ಯಾವುದೇ ಸಂಬಂಧವಿಲ್ಲ ಮತ್ತು ತಪ್ಪು ತಿಳುವಳಿಕೆಯಿಂದ ಗಾಯಕನ ಹೆಸರು ಅದರಲ್ಲಿ ಸಿಲುಕಿಕೊಂಡಿದೆ.
जिस सरकार ने पूरे अयोध्या को चमका दिया, नया एयरपोर्ट दिया, रेलवे स्टेशन दिया, 500 सालों के बाद राम मंदिर बनवाकर दिया, पूरी की पूरी एक टेंपल इकोनॉमी बनाकर दी उस पार्टी को अयोध्या जी सीट पर संघर्ष करना पड़ रहा है।
शर्मनाक है अयोध्यावासियों!
— Sonu Nigam (@SonuNigamSingh)June 4, 2024

ಈ ಪೋಸ್ಟ್ ಅನ್ನು ಹಂಚಿಕೊಳ್ಳಲಾದ X ನಲ್ಲಿ ಸೋನು ನಿಗಮ್ ಹೆಸರಿನ ಖಾತೆಯು ವಕೀಲರಿಗೆ ಸೇರಿದ್ದಾಗಿದೆ. ಅವರ ಯೂಸರ್ ಐಡಿ @SonuNigamSingh ಎಂಬ ಹೆಸರಿನಲ್ಲಿದೆ. ಆದಾಗ್ಯೂ, ಹೆಸರು ಒಂದೇ ಆಗಿರುವುದರಿಂದ, ತಪ್ಪು ತಿಳುವಳಿಕೆ ಉಂಟಾಗಿದೆ.ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಸೋನು ಬಿಹಾರದ ನಿವಾಸಿ ಮತ್ತು ವೃತ್ತಿಯಲ್ಲಿ ವಕೀಲರಾಗಿದ್ದಾರೆ. ಅವರು ತಮ್ಮ ಪ್ರೊಫೈಲ್‌ನಲ್ಲಿ ಕ್ರಿಮಿನಲ್ ಲಾಯರ್, ಬಿಹಾರ, ಭಾರತ ಎಂದು ಬರೆದುಕೊಂಡಿದ್ದಾರೆ. ಇದನ್ನು ಜನ ಗಮನಿಸಿದರೂ ಸೋಶಿಯಲ್ ಮೀಡಿಯಾದಲ್ಲಿ ಗಾಯಕ ಸೋನು ನಿಗಮ್ ಮೇಲೆ ಜನರ ಆಕ್ರೋಶ ಹೆಚ್ಚಾಗುತ್ತಿದೆ.
ಈ ಸಮಸ್ಯೆಗಳಿಂದಾಗಿ ನಾನು ಟ್ವಿಟರ್ ತ್ಯಜಿಸಿದ್ದೇನೆ. ಇಂತಹ ರಾಜಕೀಯ ಹೇಳಿಕೆ ನೀಡುವುದರಲ್ಲಿ ಅರ್ಥವಿಲ್ಲ. ಸದ್ಯ ಎಲ್ಲ ಗಮನ ನನ್ನ ಕೆಲಸದ ಮೇಲಿದೆ. ಈ ಘಟನೆ ಎಚ್ಚರಿಕೆಯ ಗಂಟೆಯಾಗಿದೆ. ನನಗಷ್ಟೇ ಅಲ್ಲ ನನ್ನ ಕುಟುಂಬಕ್ಕೂ’ ಎಂದು ಸೋನು ಸ್ಪಷ್ಟನೆ ನೀಡಿದ್ದಾರರೆ.
‘ನನಗೆ ಈ ರೀತಿಯ ಮಸಾಜ್ ಬೇಕು’ ಅನುಪಮಾ ಪರಮೇಶ್ವರನ್​ಗೆ ಇದೊಂತರ ಬಯಕೆ…

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:1 + 19 =
Remember me
