ಬೆಂಗಳೂರು:ಖ್ಯಾತ ಗಾಯಕ, ಗಾನ ಗಾರುಡಿಗ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರು ಶುಕ್ರವಾರ ನಿಧನರಾಗಿದ್ದಾರೆ.
ಕರೊನಾ ಸೋಂಕಿನಿಂದ ಬಳಲುತ್ತಿದ್ದ ಎಸ್​ಪಿಬಿ ಅವರನ್ನು ಆ.5ರಂದು ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಿಂಗಳ ನಂತರ ಕರೊನಾ ನೆಗೆಟಿವ್​ ಎಂದು ಬಂದಿತ್ತಾದರೂ ಆರೋಗ್ಯದ ಸ್ಥಿತಿಯಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆ ಮುಂದುವರಿಸಲಾಗಿತ್ತು. ಗುರುವಾರ ಸಂಜೆ ಆಸ್ಪತ್ರೆ ಬಿಡುಗಡೆ ಮಾಡಿದ ಹೆಲ್ತ್​ ಬುಲೆಟಿನ್​ನಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿತ್ತು. ಚಿಕಿತ್ಸೆ ಫಲಿಸದೆ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಕೊನೆಯುಸಿರೆಳೆದರು. ಈ ವಿಷಯವನ್ನು ಅವರ ಪುತ್ರ ಚರಣ್​ ತಿಳಿಸಿದರು.
ಸ್ವರ ಸಂಗೀತ ಲೋಕದ ಮೋಡಿಗಾರ ಎಂದೇ ಪ್ರಸಿದ್ಧರಾದ ಎಸ್​.ಪಿ. ಬಾಲಸುಬ್ರಹ್ಮಣ್ಯಂ ಅವರು 16 ಭಾಷಗಳಲ್ಲಿ ಸುಮಾರು 40 ಸಾವಿರ ಹಾಡುಗಳನ್ನು ಹಾಡಿದ್ದರು. 6 ಬಾರಿ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದಾರೆ. ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ್ದ ಇವರು ಗಾಯನದಲ್ಲಷ್ಟೇ ಅಲ್ಲ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯಲ್ಲೂ ಸಾಧನೆ ಮಾಡಿದ್ದರು.
ಶೂಟಿಂಗ್​ ಸ್ಪಾಟ್​ನಲ್ಲೇ ಪ್ರಾಣಬಿಟ್ಟ ಪೋಷಕ ನಟನ ಕೊನೇ ಫೋಟೋ ಇದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 2 =
Remember me
