ಚೆನ್ನೈ:ತಮಿಳುನಾಡು ಮೂಲದ 29 ವರ್ಷದ ಯೋಧರೊಬ್ಬರು ಮೃತಪಟ್ಟಿರುವ ಘಟನೆ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ. ಆಡಳಿತಾರೂಢ ಡಿಎಂಕೆ ಪಕ್ಷದ ಕೌನ್ಸಿಲರ್​ ಒಬ್ಬರು ನಡೆಸಿದ ದಾಳಿಗೆ ಸೈನಿಕ ಸಾವಿಗೀಡಾಗಿರುವ ಎಂಬ ಆರೋಪ ಕೇಳಿಬಂದಿದೆ.
ಮೃತ ಯೋಧನನ್ನು ಪ್ರಭು ಎಂದು ಗುರುತಿಸಲಾಗಿದೆ. ಇವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಸಾರ್ವಜನಿಕ ನೀರಿನ ಟ್ಯಾಂಕ್​ನಲ್ಲಿ ಬಟ್ಟೆ ಒಗೆಯುವ ವಿಚಾರಕ್ಕೆ ಕೌನ್ಸಿಲರ್​ ಚಿನ್ನಸ್ವಾಮಿ ಮತ್ತು ಯೋಧ ಪ್ರಭು ನಡುವೆ ವಾಗ್ವಾದ ಆರಂಭವಾಯಿತು. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಈ ವೇಳೆ ಕೌನ್ಸಿಲರ್​ ಕಡೆಯವರು ಆಗಮಿಸಿ ಯೋಧ ಪ್ರಭು ಮತ್ತು ಆತನ ಸಹೋದರನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ.
ಈ ಘಟನೆ ಫೆ.8ರಂದು ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಪ್ರಭುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ (ಫೆ.15) ರಾತ್ರಿ ಪ್ರಭು ಕೊನೆಯುಸಿರೆಳೆದಿದ್ದಾರೆ. ಅಂದಹಾಗೆ ಆರೋಪಿ ಚಿನ್ನಸ್ವಾಮಿ ಮತ್ತು ಯೋಧ ಪ್ರಭು ಇಬ್ಬರು ಸಂಬಂಧಿಕರು. ಈ ಘಟನೆಯ ಬಗ್ಗೆ ಆಡಳಿತಾರೂಢ ಡಿಎಂಕೆ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಫೆ.9ರಂದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಬಂಧಿಸಲಾಗಿದೆ. ಕೌನ್ಸಿಲರ್​ ಸೇರಿದಂತೆ ಉಳಿದ ಆರೋಪಿಗಳನ್ನು ನಿನ್ನೆ ಬಂಧಿಲಾಗಿದೆ. ಯೋಧನ ಮೇಲೆ ದಾಳಿ ಮಾಡಲು ಕೌನ್ಸಿಲರ್​ ಬೆಂಬಲಿಗರು ಮರದ ದಿಮ್ಮಿಗಳನ್ನು ಬಳಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಪ್ರಭು ಸಹೋದರನಿಗೂ ಗಾಯಗಳಾಗಿವೆ.
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮಾತನಾಡಿ, ಸೇನಾ ಸಿಬ್ಬಂದಿಗೆ ಅವರ ಸ್ವಂತ ಊರಿನಲ್ಲಿ ಸುರಕ್ಷತೆ ಇಲ್ಲ, ಗೃಹ ಖಾತೆ ಹೊಂದಿರುವ ಮುಖ್ಯಮಂತ್ರಿಯನ್ನು ಜನರು ಗಮನಿಸುತ್ತಿದ್ದಾರೆ ಟೀಕಿಸಿದ್ದಾರೆ.(ಏಜೆನ್ಸೀಸ್​)
ಹನಿಮೂನ್​ ರಾತ್ರಿ ಪಕ್ಕದ ಮನೆಯಲ್ಲಿ ಬಚ್ಚಿಟ್ಟುಕೊಂಡ ವರ! ಕಾರಣ ಕೇಳಿ ದಂಗಾದ ಪಾಲಕರು

ಅಯ್ಯೋ ದುರ್ವಿಧಿಯೇ! ಮದುವೆಯಾದ ಮೂರೇ ದಿನದಲ್ಲಿ ದುರಂತ ಅಂತ್ಯ ಕಂಡ ನವದಂಪತಿ

ನಿರೀಕ್ಷೆ-ಪರೀಕ್ಷೆ: ರಾಜ್ಯ ಬಜೆಟ್ ಅವಲೋಕನ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
