ಕೊಡಗು: ಇತ್ತೀಚೆಗೆ ಜನರು ಹೃದಯಾಘಾತದಿಂದ ಸಾವಿಗೀಡಾಗುತ್ತಿರುವುದು ಹೆಚ್ಚಾಗಿದ್ದು, ಕರ್ತವ್ಯನಿರತ ಯೋಧರಲ್ಲೂ ಇಂಥ ಪ್ರಕರಣಗಳು ಮೇಲಿಂದ ಮೇಲೆ ಕಂಡುಬಂದಿವೆ. ಇದೀಗ ಆ ಪಟ್ಟಿಗೆ ಯೋಧರೊಬ್ಬರ ಸಾವು ಸೇರ್ಪಡೆಯಾಗಿದೆ. ಕೊಡಗು ಮೂಲದ ಸೈನಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ತಾಕೇರಿ ಗ್ರಾಮದ ಮಹೇಶ್ (46) ಸಾವಿಗೀಡಾದ ಯೋಧ. ಜೂನಿಯರ್ ಕಮಿಷನ್ ಆಫೀಸರ್ (ಜೆಸಿಒ) ಆಗಿ ಇವರು ಉತ್ತರಾಖಂಡದಲ್ಲಿ ಸೇವೆ ಸಲ್ಲಿಸುತ್ತಿದ್ದು, ಕರ್ತವ್ಯನಿರತರಾಗಿದ್ದಾಗಲೇ ಈ ಸಾವು ಸಂಭವಿಸಿದೆ. ಪತ್ನಿ, ಇಬ್ಬರು ಚಿಕ್ಕಮಕ್ಕಳನ್ನು ಅಗಲಿರುವ ಇವರು ಕಳೆದ ತಿಂಗಳಷ್ಟೇ ರಜೆಯಲ್ಲಿ ಊರಿಗೆ ಬಂದು ಹೋಗಿದ್ದರು.
ಮಹೇಶ್ 22 ವರ್ಷಗಳಿಂದ ಭಾರತೀಯ ಸೇನೆಯಲ್ಲಿ‌ ಸೇವೆ ಸಲ್ಲಿಸುತ್ತಿದ್ದರು. ಬೆಂಗಳೂರು, ಹೈದರಾಬಾದ್, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಇವರು ಸೇವೆ ಸಲ್ಲಿಸಿದ್ದರು. ಇನ್ನೆರಡು ದಿನಗಳಲ್ಲಿ ಹುಟ್ಟೂರಿಗೆ ಇವರ ಪಾರ್ಥಿವ ಶರೀರ ತಲುಪಲಿದೆ.
ಕರ್ತವ್ಯನಿರತ ಸೈನಿಕ ಹೃದಯಾಘಾತಕ್ಕೀಡಾಗಿ ಸಾವು, ಇಂದು ಹುಬ್ಬಳ್ಳಿಗೆ ಪಾರ್ಥಿವ ಶರೀರ ತಲುಪುವ ನಿರೀಕ್ಷೆ..
ಧ್ವಜಾರೋಹಣ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವು
ಹೃದಯಾಘಾತದಿಂದ ಸಾವಿಗೀಡಾದ ಮಾಜಿ ಯೋಧ-ಐಆರ್​ಬಿ ಪೊಲೀಸ್​
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 − 12 =
Remember me
