ನವದೆಹಲಿ:ಕಾವೇರಿ ಕಣಿವೆ ಪ್ರದೇಶಗಳಲ್ಲಿ ನಿರೀಕ್ಷೆಗಿಂತ ಕಡಿಮೆ ಮಳೆ ಬಿದ್ದಿರುವುದರಿಂದ ಕರ್ನಾಟಕ ಮತ್ತು ತಮಿಳುನಾಡು ನಡುವೆ ಮತ್ತೆ ಕಾವೇರಿ ಕದನ ಶುರುವಾಗಿದೆ. ಕರ್ನಾಟಕ ನಿಗದಿತ ಪ್ರಮಾಣದಲ್ಲಿ ಮೆಟ್ಟೂರು ಜಲಾಶಯಕ್ಕೆ ಬಿಡುಗಡೆ ಮಾಡಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ದೂರು ನೀಡಿರುವ ತಮಿಳುನಾಡು ಸರ್ಕಾರ, ಕರ್ನಾಟಕ ನೀರು ಬಿಟ್ಟರಷ್ಟೇ ರಾಜ್ಯದ ಕುರುವೈ ಬೆಳೆ ಉಳಿಯಲಿದೆ. ಹೀಗಾಗಿ, ತಕ್ಷಣವೇ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ತಮಿಳುನಾಡಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದೆ.
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಅಲ್ಪಾವಧಿಯ ಕುರುವೈ ಬೆಳೆ ತಮಿಳುನಾಡಿನ ಕಾವೇರಿ ಕಣಿವೆ ಪ್ರದೇಶದ ರೈತರಿಗೆ ಅತ್ಯಂತ ಪ್ರಮುಖ ಬೆಳೆಯಾಗಿದೆ. ಅಂತಾರಾಜ್ಯ ಗಡಿಭಾಗ ಬಿಳಿಗುಂಡ್ಲುವಿನಲ್ಲಿ ಜೂನ್ 1ರಿಂದ ಜುಲೈ 17ರವರೆಗೆ 3.78 ಟಿಎಂಸಿ ನೀರನ್ನು ಮಾತ್ರ ತಮಿಳುನಾಡಿಗೆ ಖಚಿತಪಡಿಸಲಾಗಿದೆ. ಈ ಅವಧಿಯಲ್ಲಿ 26.32 ಟಿಎಂಸಿ ನೀರು ಬಿಡುಗಡೆಯಾಗಬೇಕು ಎಂಬ ಐತೀರ್ಪನ್ನು ಉಲ್ಲಂಘಿಸಲಾಗಿದೆ ಎಂದು ತಿಳಿದು ಬಂದಿದೆ ಎಂದು ಆರೋಪಿಸಿದ್ದಾರೆ.

22.54 ಟಿಎಂಸಿ ಬಾಕಿ ನೀರನ್ನು ಬಿಡಲಾಗಿಲ್ಲ. ಸಮಯಕ್ಕೆ ಸರಿಯಾಗಿ ಕುರುವೈ ಬೆಳೆಗೆ ನೀರು ಒದಗಿಸಲು ಜೂನ್ 12ರಂದು ಮೆಟ್ಟೂರು ಜಲಾಶಯ ತೆರೆಯಲಾಯಿತು. ನೈಋತ್ಯ ಮುಂಗಾರು ಆರಂಭ ತಡವಾಗಿದ್ದರೂ ಜುಲೈನಲ್ಲಿ ವೇಗ ಪಡೆದುಕೊಂಡಿದೆ. ಆದರೆ, ನಿಗದಿತ ಕಬಿನಿ ಮತ್ತು ಕೆಆರ್​ಎಸ್ ಜಲಾಶಯಗಳಿಂದ ತಮಿಳುನಾಡಿಗೆ ಕರ್ನಾಟಕ ನೀರು ಬಿಟ್ಟಿಲ್ಲ. ಇದರ ಪರಿಣಾಮವಾಗಿ ಸೇಲಂ ಜಿಲ್ಲೆಯ ಮೆಟ್ಟೂರು ಜಲಾಶಯದಲ್ಲಿ ನೀರು ಸಂಗ್ರಹಣೆ ಕ್ಷೀಣಿಸುತ್ತಿದೆ. ಪ್ರಸ್ತುತ ಸಂಗ್ರಹಣೆಯು 20 ದಿನಗಳ ನೀರಾವರಿಗಷ್ಟೇ ಸಾಕು ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ನೀರು ಬಿಡುಗಡೆ ಸಂಬಂಧ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಸೂಚನೆ ನೀಡಲು ನೀವು ನಿರ್ದೇಶಿಸಬೇಕು ಎಂದು ಸಿಎಂ ಸ್ಟಾಲಿನ್ ಕೇಂದ್ರ ಸಚಿವರಲ್ಲಿ ಕೋರಿದ್ದಾರೆ. ಜುಲೈ 19ರಂದು ಸಿಎಂ ಬರೆದ ಪತ್ರವನ್ನು ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈಮುರುಗನ್ ಗುರುವಾರದಂದು ದೆಹಲಿಯಲ್ಲಿ ಕೇಂದ್ರ ಸಚಿವರಿಗೆ ಹಸ್ತಾಂತರಿಸಿದ್ದಾರೆ.
ಸ್ಟಾಲಿನ್ ಪತ್ರದಲ್ಲೇನಿದೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − twelve =
Remember me
