ಮುಂಬೈ:ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ಇತ್ತೀಚೆಗೆ ಛತ್ರಪತಿ ಶಿವಾಜಿ ಪ್ರತಿಮೆ ಕುಸಿದ ಘಟನೆಯ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಕುತೂಹಲಕಾರಿ ಪ್ರತಿಕ್ರಿಯೆ ನೀಡಿದ್ದಾರೆ. ಸಮುದ್ರ ತೀರವಾದ್ದರಿಂದ ಮೂರ್ತಿ ತಯಾರಿಕೆಗೆ ‘ಸ್ಟೈನ್ ಲೆಸ್ ಸ್ಟೀಲ್’ ಬಳಸಬೇಕಿತ್ತು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಅತ್ಯಾಚಾರ ಆರೋಪಿಗೆ ನಿರೀಕ್ಷಣಾ ಜಾಮೀನು: ನ್ಯಾಯಾಲಯ ಕೊಟ್ಟ ಕಾರಣ ಹೀಗಿದೆ ನೋಡಿ..
ಎಫ್‌ಐಸಿಸಿ ಸಮಾರಂಭದಲ್ಲಿ ಮಾತನಾಡಿದ ಗಡ್ಕರಿ, ಸಮುದ್ರ ಇರುವ ಕಡೆ ಯಾವುದೇ ನಿರ್ಮಾಣ ಕಾರ್ಯಗಳಿಗೆ ತುಕ್ಕು ತಡೆಗಟ್ಟಲು ಸ್ಟೇನ್ಲೆಸ್ ಸ್ಟೀಲ್ ಅನ್ನು ಬಳಸಲು ಶಿಫಾರಸು ಮಾಡಲಾಗಿದೆ. ಅದೇ ರೀತಿ ಸ್ಟೇನ್‌ಲೆಸ್ ಸ್ಟೀಲ್ ಬಳಸಿದ್ದರೆ ಛತ್ರಪತಿ ಶಿವಾಜಿ ಪ್ರತಿಮೆ ಎಂದಿಗೂ ಕುಸಿಯುತ್ತಿರಲಿಲ್ಲ.
ಮಹಾರಾಷ್ಟ್ರದಲ್ಲಿ ತಾನು ಈ ಹಿಂದೆ ಸಚಿವನಾಗಿದ್ದಾಗ 55 ಮೇಲ್ಸೇತುವೆಗಳನ್ನು ನಿರ್ಮಿಸಿದ್ದನ್ನು ಸ್ಮರಿಸಿದ ಅವರು, ಆ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಕಬ್ಬಿಣದ ಸರಳುಗಳಿಗೆ ಪೌಡರ್ ಲೇಪನ ಮಾಡಿ ತುಕ್ಕು ಹಿಡಿಯುವ ಸಾಧ್ಯತೆ ಇಲ್ಲ ಎಂದರು. ಆದರೆ ಅವು ತುಕ್ಕು ಹಿಡಿಯಬಹುದು ಎಂದು ಈಗಷ್ಟೇ ಹೇಳಿದ್ದೇನೆ ಎಂದರು. ಕರಾವಳಿಯ 30 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸ್ಟೇನ್‌ಲೆಸ್ ಸ್ಟೀಲ್ ಬಳಸಬೇಕು ಎಂದು ಅವರು ಪ್ರತಿಪಾದಿಸಿದರು.
ಛತ್ರಪತಿ ಶಿವಾಜಿ ಪ್ರತಿಮೆ 2024ರ ಆ.26ರಂದು ಕುಸಿದು ಬಿದ್ದಿತ್ತು. ಬಳಿಕ ಪ್ರತಿಮೆ ನಿರ್ಮಿಸಿದ ಜಯದೀಪ್ ಆಪ್ಟೆ ತಲೆಮರೆಸಿಕೊಂಡಿದ್ದು, ಪೊಲೀಸರು ಲುಕೌಟ್ ನೋಟಿಸ್ ಜಾರಿ ಮಾಡಿದ್ದಾರೆ.
ಪ್ರತಿಮೆ ಬಿದ್ದಿದ್ದಕ್ಕೆ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಟೀಕಾಪ್ರಹಾರ ನಡೆಸಿದ್ದವು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಕ್ಷಮೆಯಾಚಿಸಿದ್ದರು.
ಆಂಧ್ರದಲ್ಲಿ ಆಹಾರಕ್ಕೆ ಹಾಹಾಕಾರ..ಹೆಲಿಕಾಪ್ಟರ್​ನಿಂದ ಬಿದ್ದ ಕೆಸರಿನಲ್ಲಿ ಬಿದ್ದ ಪೊಟ್ಟಣಗಳಿಗಾಗಿ ನೂಕುನುಗ್ಗಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + six =
Remember me
