ನವದೆಹಲಿ:ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರನ್ನು ವೈದ್ಯಕೀಯ ತಪಾಸಣೆ ವೇಳೆ ನಡೆಸುತ್ತಿದ್ದ “ಎರಡು ಬೆರಳುಗಳ ಪರೀಕ್ಷೆ”ಯನ್ನು ನಿಷೇಧಿಸಿ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ಆದೇಶ ಹೊರಡಿಸಿದೆ. ಇಂತಹ ಪರೀಕ್ಷೆ ನಡೆಸುವವರನ್ನು ದುರ್ನಡತೆಯ ಅಪರಾಧಿ ಎಂದು ಪರಿಗಣಿಸುವುದಾಗಿ ಎಚ್ಚರಿಸಿದೆ.
ಇದೊಂದು ಅವೈಜ್ಞಾನಿಕ ಆಕ್ರಮಣಕಾರಿ ವಿಧಾನ. ಅತ್ಯಾಚಾರ ಸಂತ್ರಸ್ತೆಗೆ ಮರು ಆಘಾತ ಉಂಟು ಮಾಡುತ್ತದೆ. ಹಾಗಾಗಿ ಎರಡು ಬೆರಳುಗಳ ಪರೀಕ್ಷೆಯನ್ನು ಇನ್ಮುಂದೆ ಮಾಡಬಾರದು ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ. ಈ ಪರೀಕ್ಷೆಗೆ ಯಾವುದೇ ವೈಜ್ಞಾನಿಕ ಆಧಾರ ಇಲ್ಲ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಆಘಾತಕ್ಕೆ ಒಳಗಾಗಿ ನರಳುತ್ತಿರುತ್ತಾರೆ. ಇದರಿಂದ ಹೊರ ಬರಲು ತುಂಬಾ ಕಷ್ಟ ಪಡುತ್ತಿರುತ್ತಾರೆ. ಅಂತಹ ಸನ್ನಿವೇಶದಲ್ಲಿ ಎರಡು ಬೆರಳುಗಳ ಪರೀಕ್ಷೆಗೆ ಒಳಪಡಿಸಿದರೆ ಸಂತ್ರಸ್ತರಿಗೆ ಮತ್ತಷ್ಟು ಆಘಾತ ಉಂಟಾಗುತ್ತದೆ ಎಂದು ಅಭಿಪ್ರಾಯಪಟ್ಟಿರುವ ಕೋರ್ಟ್​, ಇನ್ಮುಂದೆ ವೈದ್ಯರು ಅತ್ಯಾಚಾರ ಸಂತ್ರಸ್ತೆಯರನ್ನು ಇಂತಹ ಪರೀಕ್ಷೆಗೆ ಒಳಪಡಿಸಬಾರದು ಎಂದು ತಾಕೀತು ಮಾಡಿದೆ. ಇದನ್ನೂ ಮೀರಿ ಈ ಪರೀಕ್ಷೆ ನಡೆಸುವ ವೈದ್ಯರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವುದಾಗಿ ಎಚ್ಚರಿಸಿದೆ.
ಜಾರ್ಖಂಡ್​ನ ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಹೈಕೋರ್ಟ್ ದೋಷಮುಕ್ತಗೊಳಿಸಿತ್ತು. ಈ ಪ್ರಕರಣದ ಮೊದಲ ವಿಚಾರಣೆ ನಡೆಸಿದ್ದ ಕೆಳ ಹಂತದ ನ್ಯಾಯಾಲಯವು ಆರೋಪಿಯನ್ನು ದೋಷಿ ಎಂದು ತೀರ್ಪು ನೀಡಿತ್ತು. ಪ್ರಕರಣ ಹೈಕೋರ್ಟ್​ ಮೆಟ್ಟಿಲೇರಿತ್ತು. ಎರಡು ಬೆರಳುಗಳ ಪರೀಕ್ಷೆಯ ವರದಿ ಆಧಾರಿಸಿ ಹೈಕೋರ್ಟ್​ ಆರೋಪಿಯನ್ನು ನಿರ್ದೋಷಿ ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತೆ ಸುಪ್ರೀಂ ಕೋರ್ಟ್​ನ ಮೆಟ್ಟಿಲೇರಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು “ಎರಡು ಬೆರಳುಗಳ ಪರೀಕ್ಷೆ”ಯ ವಿರುದ್ಧ ಅಸಮಾಧಾನ ಹೊರಹಾಕಿ ಜಾರ್ಖಂಡ್​ ಹೈಕೋರ್ಟ್​ನ ತೀರ್ಪನ್ನು ರದ್ದು ಮಾಡಿ, ಅತ್ಯಾಚಾರ ಪ್ರಕರಣದ ಆರೋಪಿಯನ್ನ ದೋಷಿ ಎಂದು ತೀರ್ಪು ನೀಡಿತು.
ಇಂದಿಗೂ “ಎರಡು ಬೆರಳು ಪರೀಕ್ಷೆ” ಪದ್ಧತಿ ಚಾಲ್ತಿಯಲ್ಲಿರುವುದು ಅತ್ಯಂತ ವಿಷಾದನೀಯ. ಲೈಂಗಿಕವಾಗಿ ಸಕ್ರಿಯವಾಗಿರುವ ಮಹಿಳೆಯ ಮೇಲೆ ಅತ್ಯಾಚಾರ ನಡೆದಾಗ ಕನ್ಯತ್ವ ಪರೀಕ್ಷೆಯಿಂದ ಯಾವ ವರದಿ ನಿರೀಕ್ಷೆ ಸಾಧ್ಯ? ಆಕೆ ಮೇಲೆ ಅತ್ಯಾಚಾರ ನಡೆದಿದ್ದರೂ ನಂಬಲು ಆಗದಂತೆ ಆಗುತ್ತೆ. ಇಂತಹ ಪರೀಕ್ಷೆಯನ್ನ ನಡೆಸಬಾರದು. ಇದೊಂದು ಅವೈಜ್ಞಾನಿಕ ಪದ್ಧತಿ ಎಂದಿರುವ ನ್ಯಾಯಪೀಠ, ಎರಡು ಬೆರಳುಗಳ ಪರೀಕ್ಷೆ ನಡೆಸದಂತೆ ನೋಡಿಕೊಳ್ಳಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರಿ- ಖಾಸಗಿ  ಆಸ್ಪತ್ರೆಗಳಿಗೂ ಸುತ್ತೋಲೆ ಹೊರಡಸಲು ನಿರ್ದೇಶನ ನೀಡಿದೆ.
ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ ದರ ಪರಿಷ್ಕರಣೆ: ಸಾಕು ನಾಯಿಗೆ ಅರ್ಧ ಟಿಕೆಟ್​! 30 ಕೆಜಿ ಲಗೇಜ್​ ಸಾಗಣೆ ಉಚಿತ

ಬ್ಯೂಟಿಷಿಯನ್​ ಕೋರ್ಸ್​ ತರಬೇತಿಗೆ ಅರ್ಜಿ ಆಹ್ವಾನ: ಸ್ವಂತ ಪಾರ್ಲರ್​ ಸ್ಥಾಪಿಸಲು ಸರ್ಕಾರದಿಂದ ಸಹಾಯಧನ

ಹೊಸದುರ್ಗದಲ್ಲಿ ಇಬ್ಬರು ಮಕ್ಕಳೊಂದಿಗೆ ಚೆಕ್​ ಡ್ಯಾಂಗೆ ಹಾರಿ ಪ್ರಾಣಬಿಟ್ಟ ತಾಯಿ! ಸಾವಿಗೂ ಮುನ್ನ ಆಕೆ ಮಾಡಿಟ್ಟ ವಿಡಿಯೋ ನೋಡಿದ್ರೆ ಮನಕಲಕುತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
