ನವದೆಹಲಿ:ಋತುಚಕ್ರದ ವೇಳೆ ಮಹಿಳೆಯರಿಗೆ ರಜೆ ನೀಡುವುದು ಸರ್ಕಾರದ ನೀತಿಯ ವಿಷಯವಾಗಿದೆ ಎಂದು ಸುಪ್ರೀಕೋರ್ಟ್​ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ:ನೀಟ್ ಪರೀಕ್ಷೆ ರದ್ದಾಗುತ್ತಾ..? ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಇಂದು
ಇದು ಸರ್ಕಾರದ ನೀತಿ ಮತ್ತು ನಿರ್ಧಾರವಾಗಿದ್ದು, ಕೇಂದ್ರ ಮತ್ತು ರಾಜ್ಯಗಳು ಎಚ್ಚರಿಕೆಯಿಂದ ಚರ್ಚಿಸಬೇಕು ಎಂದು ಪ್ರಕರಣದ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ತ್ರಿ ಸದಸ್ಯ ಪೀಠ ಹೇಳಿದೆ.
ಮಹಿಳೆಯರನ್ನು ರಕ್ಷಿಸಲು ಉದ್ದೇಶಿಸಿರುವ ಕ್ರಮಗಳು ಅಜಾಗರೂಕತೆಯಿಂದ ಅವರ ಅನನುಕೂಲತೆಯನ್ನು ಉಂಟುಮಾಡಲು ನಾವು ಬಯಸುವುದಿಲ್ಲ. ಇದರ ಕುರಿತು ಅರ್ಜಿದಾರರು ತಮ್ಮ ಮನವಿಯೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವನ್ನು ಸಂಪರ್ಕಿಸುವಂತೆ ಸೂಚಿಸಿದ ನ್ಯಾಯಾಲಯ, ಈ ವಿಷಯಕ್ಕೆ ನ್ಯಾಯಾಂಗ ಆದೇಶಕ್ಕಿಂತ ಸಮಗ್ರ ನೀತಿಯ ಚೌಕಟ್ಟಿನ ಅಗತ್ಯವಿದೆ ಎಂದು ಒತ್ತಿ ಹೇಳಿದರು. ಪೀಠ ಸಲಹೆ ನೀಡಿದೆ.
ಮಹಿಳೆಯರಿಗೆ ಋತುಚಕ್ರದ ವೇಳೆ ರಜೆ ನೀಡಲು ನಿರ್ದೇಶನ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಪೀಠ, ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಲು ನಿರಾಕರಿಸಿತು. ಕಾರ್ಯದರ್ಶಿಯು ಈ ವಿಷಯವನ್ನು ನೀತಿ ರೂಪಿಸುವ ಮಟ್ಟದಲ್ಲಿ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳುವಂತೆ ನಾವು ವಿನಂತಿಸುತ್ತೇವೆ ಮತ್ತು ಮಾದರಿ ನೀತಿಯನ್ನು ರೂಪಿಸಬಹುದೇ ಎಂದು ನೋಡುತ್ತೇವೆ. ಮುಟ್ಟಿನ ರಜೆಗೆ ಸಂಬಂಧಿಸಿದಂತೆ ಸರ್ಕಾರ ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಡೆಯುವುದಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರದ ರಜೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಸುಪ್ರೀಂ ಕೋರ್ಟ್ ವಿಲೇವಾರಿ ಮಾಡಿದೆ.
ರಾಜ್ಯಪಾಲರ ದೂರು..ಇಬ್ಬರು ಐಪಿಎಸ್ ಅಧಿಕಾರಿಗಳ ವಿರುದ್ಧ ಕೇಂದ್ರ ಗೃಹ ಇಲಾಖೆ ಕ್ರಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − seven =
Remember me
