ನವದೆಹಲಿ:ಭಾರತೀಯ ಸಂವಿಧಾನಕ್ಕೆ ತಿದ್ದುಪಡಿ ತರುವ ಮೂಲಕ ‘ಇಂಡಿಯಾ” ಎಂಬ ಹೆಸರನ್ನು “ಭಾರತ” ಅಥವಾ “ಹಿಂದೂಸ್ಥಾನ” ಎಂದು ಬದಲಾಯಿಸುವಂತೆ ಕೋರಿ ದೆಹಲಿಯ ನಮಃ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​ ಇಂದು ಇತ್ಯರ್ಥಗೊಳಿಸಿದೆ.
ಈ ವಿವಾದವನ್ನು ನ್ಯಾಯಾಲಯದ ಮುಂದೆ ತರುವ ಬದಲು, ಈ ಅರ್ಜಿಯನ್ನು ಸಂಬಂಧಿಸಿದ ಸಚಿವಾಲಯದ ಮುಂದೆ ಇಟ್ಟು, ಸೂಕ್ತ ಕ್ರಮ ತೆಗೆದುಕೊಳ್ಳಲು ಮನವಿ ಮಾಡಿಕೊಳ್ಳುವಂತೆ ಮುಖ್ಯ ನ್ಯಾಯಮೂರ್ತಿಗಳಾದ ಎಸ್.ಎ. ಬೊಬ್ಡೆ, ಹಾಗೂ ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ, ಹೃಷಿಕೇಶ ರಾಯ್ ಅವರನ್ನೊಳಗೊಂಡ ಪೀಠ ಹೇಳಿದೆ.
“ಇಂಡಿಯಾ” ಎನ್ನುವುದು ಇಂಗ್ಲಿಷ್​ ಪದ. ಇದನ್ನು ತೆಗೆದು ಹಾಕಿ ಹಿಂದೂಸ್ಥಾನ ಅಥವಾ ಭಾರತ ಎಂದು ಮಾಡಿದರೆ ಎಲ್ಲರಲ್ಲಿಯೂ ರಾಷ್ಟ್ರೀಯತೆ ಭಾವ ಮೂಡುತ್ತದೆ. ಹೆಸರು ತೆಗೆಯುವುದು ಸಾಂಕೇತಿಕ ಎಂದು ಎನಿಸಿದರೂ ಹೆಸರು ಬದಲಾವಣೆಯಿಂದ ನಮ್ಮತನದ ಭಾವನೆ ಮೂಡುವ ಕಾರಣ ಇಂಗ್ಲಿಷರ ಶಬ್ದ ನಮಗೆ ಬೇಡ. ನಮ್ಮ ಪೂರ್ವಜರು ಸ್ವಾತಂತ್ರ್ಯ ತರಿಸಿಕೊಡಲು ಸಾಕಷ್ಟು ಹೋರಾಟ ನಡೆಸಿದ್ದಾರೆ. ಆದ್ದರಿಂದ ಇಂಗ್ಲಿಷರು ಆಳ್ವಿಕೆಯ ಹೆಸರನ್ನು ತೆಗೆದುಹಾಕಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.
ಇದನ್ನೂ ಓದಿ:ಶ್ರಮಿಕ್​ ರೈಲಿನಲ್ಲಿ ಸೀಟು ಸಿಕ್ಕಿಲ್ಲವೆಂದು ಬೇಸತ್ತ ಕಾರ್ಮಿಕ ಕಾರು ಷೋರೂಂಗೆ ಹೋದದ್ದೇಕೆ?
ಮುಘಲ್​ ದೊರೆಗಳ ಆಡಳಿತದಲ್ಲಿ ಹಿಂದೂಸ್ಥಾನವಾಗಿದ್ದ ನಮ್ಮ ದೇಶವು, ಬ್ರಿಟಿಷರ ಆಳ್ವಿಕೆಯ ಕಾಲದಲ್ಲಿ “ಇಂಡಿಯಾ” ಆಗಿ ಬದಲಾಗಿದೆ. ಆದರೆ ಬ್ರಿಟಿಷರ ಹೆಸರು ನಮಗೆ ಬೇಡ. ನಮ್ಮ ದೇಶ ಒಂದೋ ಭಾರತವಾಗಲೀ ಇಲ್ಲವೇ ಹಿಂದೂಸ್ಥಾನವಾಗಲಿ ಎಂದು ಅರ್ಜಿದಾರರು ಹೇಳಿದ್ದರು.
ಸಂವಿಧಾನದ 1 ನೇ ಪರಿಚ್ಛೇದವು “ಒಕ್ಕೂಟದ ಹೆಸರು ಮತ್ತು ಭೂಪ್ರದೇಶದೊಂದಿಗೆ ವ್ಯವಹಾರ” ಇದರ ಬಗ್ಗೆ ಉಲ್ಲೇಖಿಸಿದೆ. ಇದರಲ್ಲಿಯೇ ತಿದ್ದುಪಡಿ ತರುವ ಮೂಲಕ ನಮ್ಮ ದೇಶವನ್ನು “ಇಂಡಿಯಾ”ಮುಕ್ತ ಗೊಳಿಸುವಂತೆ ಅರ್ಜಿದಾರರ ಪರ ವಕೀಲರು ವಾದಿಸಿದರು. ಸಂವಿಧಾನಕ್ಕೆ ತಿದ್ದುಪಡಿ ತರಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸುವಂತೆ ಅವರು ಮನವಿ ಮಾಡಿಕೊಂಡರು.
ಇದನ್ನೂ ಓದಿ:ಅಬ್ಬಬ್ಬಾ! ಇದು ಪ್ರಪಂಚದ ದುಬಾರಿ ವಿಚ್ಛೇದನ!
ಅದಕ್ಕೆ ಪೀಠವು, ಇಂಡಿಯಾವನ್ನು ಭಾರತ ಎಂದೂ ಕರೆಯಲಾಗುತ್ತದೆ ಎಂಬ ಬಗ್ಗೆ ಸಂವಿಧಾನದಲ್ಲಿಯೇ ಉಲ್ಲೇಖವಾಗಿರುವ ಹಿನ್ನೆಲೆಯಲ್ಲಿ ಮತ್ತೆ ಈ ವಿಚಾರವನ್ನು ನ್ಯಾಯಾಲಯದ ಮುಂದೆ ತರುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿತು. ಇಂಥ ಅರ್ಜಿಗಳನ್ನು ಕೋರ್ಟ್​ ಮುಂದೆ ತರುವ ಅಗತ್ಯ ಇರಲಿಲ್ಲ. ಸಂಬಂಧಿತ ಸಚಿವಾಲಯದ ಮುಂದೆ ಮನವಿ ಸಲ್ಲಿಸಿ, ಅಲ್ಲಿಯೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳಿ ಎಂದು ನಿರ್ದೇಶಿಸುವ ಮೂಲಕ ಅರ್ಜಿಯನ್ನು ವಿಲೇವಾರಿ ಮಾಡಿತು.
ಲಾಕ್​ಡೌನ್​ನಲ್ಲಿ 46 ಉಗ್ರರ ಹೊಡೆದುರುಳಿಸಿದ ಸೇನೆ: ಇಂದು ಮೂವರ ಹತ್ಯೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 − eighteen =
Remember me
