ನವದೆಹಲಿ:ದೆಹಲಿಯ ಆಪ್ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ಮಹಾನಗರದಲ್ಲಿ ನೀರಿನ ಕೊರತೆ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಎಎಪಿ ಸರ್ಕಾರವನ್ನು ಕೇಳಿದೆ.
ಇದನ್ನೂ ಓದಿ:ಷೇರುಪೇಟೆಯಲ್ಲಿ ಮತ್ತೆ ಗೂಳಿಯ ಗುಟುರು: ಹೊಸ ಸಾರ್ವಕಾಲಿಕ ಗರಿಷ್ಠ ಮಟ್ಟ ಮುಟ್ಟಿದ ನಿಫ್ಟಿ ಸೂಚ್ಯಂಕ
ರಾಷ್ಟ್ರ ರಾಜಧಾನಿಯಲ್ಲಿ ನೀರಿನ ಕೊರತೆಯ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಪ್ರಸನ್ನ ಬಿ ವರ್ಲೆ ಅವರನ್ನೊಳಗೊಂಡ ಪೀಠವು ಎಎಪಿ ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿದೆ. ಟ್ಯಾಂಕರ್ ಮಾಫಿಯಾವನ್ನು ನಿಯಂತ್ರಿಸುವ ಜತೆಗೆ ನೀರು ಪೋಲು ಮಾಡುವುದನ್ನು ತಡೆಯಲು ಏನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಶ್ನಿಸಿದೆ.
ಈ ಸಂದರ್ಭದಲ್ಲಿ ಟ್ಯಾಂಕರ್ ಮಾಫಿಯಾವನ್ನು ನಿಯಂತ್ರಿಸಲು ಸಾಧ್ಯವಾಗದ ಆಪ್ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಪೀಠ ಆಕ್ರೋಶ ವ್ಯಕ್ತಪಡಿಸಿದೆ.
ಈ ಮಾಫಿಯಾವನ್ನು ತಡೆಯಲು ಮಧ್ಯಪ್ರವೇಶಿಸುವಂತೆ ದೆಹಲಿ ಪೊಲೀಸರಿಗೆ ಆದೇಶ ನೀಡುತ್ತೀರಾ? ಎಂದು ಎಎಪಿ ಸರಕಾರವನ್ನು ಸುಪ್ರೀಂ ಕೋರ್ಟ್ ಪೀಠ ನೇರವಾಗಿ ಪ್ರಶ್ನಿಸಿದೆ. ಟ್ಯಾಂಕರ್ ಮಾಫಿಯಾ ವಿರುದ್ಧ ಇಲ್ಲಿಯವರೆಗೂ ಏನು ಕ್ರಮ ಕೈಗೊಳ್ಳಲಾಗಿದೆ? ಅವರ ವಿರುದ್ಧ ಒಂದಾದರೂ ಎಫ್‌ಐಆರ್ ದಾಖಲಾಗಿದೆಯೇ? ಎಂದು ಪೀಠ ಸರ್ಕಾರವನ್ನು ಪ್ರಶ್ನಿಸಿತು.
ಉತ್ತಮ ನೀರಿಲ್ಲದೆ ಜನರು ಪರದಾಡುತ್ತಿರುವುದನ್ನು ಈ ಸಂದರ್ಭದಲ್ಲಿ ಸ್ಮರಿಸಿದರು. ಬೇಸಿಗೆಯಲ್ಲಿ ನೀರಿಲ್ಲದ ಕಾರಣ ನೀರು ವ್ಯರ್ಥವಾಗುವುದನ್ನು ತಡೆಯಲು ಏನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೀಠ ಸರಕಾರವನ್ನು ಪ್ರಶ್ನಿಸಿತು. ಈ ಕುರಿತು ಗುರುವಾರ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.
ಮತ್ತೊಂದೆಡೆ, ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಮಂಗಳವಾರ ಹರಿಯಾಣ ಸಿಎಂ ಸೈನಿಗೆ ಕರೆ ಮಾಡಿ ನವದೆಹಲಿಗೆ ನೀರು ಸರಬರಾಜು ಮಾಡುವಂತೆ ಕೋರಿದ್ದಾರೆ. ಹಿಂದಿನ ದಿನ ಎಎಪಿ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಅವರು ಸಕ್ಸೇನಾರನ್ನು ಇದೇ ವಿಷಯದ ಕುರಿತು ಭೇಟಿಯಾಗಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿ ಎಲ್ಜಿ ಅವರು ಹರ್ಯಾಣ ಸಿಎಂಗೆ ಕರೆ ಮಾಡಿದ್ದಾರೆ.
ಇದಾಗುತ್ತಿದ್ದಂತೆ ನೀರು ಪೂರೈಸಲು ಸಿಎಂ ಸೈನಿ ಒಪ್ಪಿಕೊಂಡಿದ್ದಾರೆ ಎಂದು ಸಕ್ಸೇನಾ ಸ್ಪಷ್ಟಪಡಿಸಿದ್ದಾರೆ.
ಚುನಾವಣೆ ವೇಳೆ ಬಿಜೆಪಿ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ ಎಂದು ಆಪ್​ ನಾಯಕರು ಆರೋಪಿಸಿದ್ದರು. ಮತ್ತೊಂದೆಡೆ, ಹಿಮಾಚಲ ಪ್ರದೇಶವು ಒದಗಿಸುವ ಹೆಚ್ಚುವರಿ ನೀರನ್ನು ನವದೆಹಲಿಗೆ ಹರಿಸುವಂತೆ ಹರಿಯಾಣ ಸರ್ಕಾರಕ್ಕೆ ಆದೇಶ ನೀಡುವಂತೆ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಜೂನ್ 24 ರಂದು ಸಂಸತ್ ಅಧಿವೇಶನ: ಸದಸ್ಯರ ಪ್ರಮಾಣ ವಚನ ಸ್ವೀಕಾರಕ್ಕೆ ಹೊಸ ಲೋಕಸಭೆ ಸಜ್ಜು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 1 =
Remember me
