ನವದೆಹಲಿ:ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಸುರೇಶ್ ಪಚೌರಿ ಶನಿವಾರ ಭೋಪಾಲ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಪಚೌರಿ ಜೊತೆಗೆ ಕಾಂಗ್ರೆಸ್ ಪಕ್ಷದ ಇತರ ನಾಯಕರು ಕೂಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಮತ್ತು ಮಾಜಿ ಧಾರ್ ಸಂಸದ ಗಜೇಂದ್ರ ಸಿಂಗ್ ರಾಜುಖೇಡಿ, ಮಾಜಿ ಶಾಸಕ ಸಂಜಯ್ ಶುಕ್ಲಾ, ವಿಶಾಲ್ ಪಟೇಲ್, ಅರ್ಜುನ್ ಪಾಲಿಯಾ ಮತ್ತು ಭೋಪಾಲ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೈಲಾಶ್ ಮಿಶ್ರಾ ಇಂದು ಬಿಜೆಪಿ ಸದಸ್ಯತ್ವ ಪಡೆದರು.
ಪಚೌರಿ ಅವರು ಗಾಂಧಿ ಕುಟುಂಬಕ್ಕೆ ಆಪ್ತರು. ಅವರು ನಾಲ್ಕು ಬಾರಿ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯರಾಗಿದ್ದಾರೆ ಮತ್ತು ರಕ್ಷಣಾ ಖಾತೆ ಸಚಿವರಾಗಿದ್ದಾರೆ. ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿಯವರ ನಿಕಟವರ್ತಿಯಾದ್ದರಿಂದ ಅವರು ಕಾಂಗ್ರೆಸ್ ಪಕ್ಷದೊಳಗೆ ವಿಶೇಷ ಪ್ರಭಾವವನ್ನು ಹೊಂದಿದ್ದರು.
#WATCH| Several Congress leaders, including former Union Minister Suresh Pachouri, join the BJP in Bhopal, Madhya Pradesh.
CM Mohan Yadav, former CM Shivraj Singh Chouhan, state BJP chief VD Sharma and minister Kailash Vijayvargiya present.pic.twitter.com/yNdfHnBK4V
— ANI (@ANI)March 9, 2024

ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಉಪಸ್ಥಿತರಿದ್ದರು. ಏತನ್ಮಧ್ಯೆ, ಪಚೌರಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಶಿವರಾಜ್ ಸಿಂಗ್ ಚೌಹಾಣ್, “ಕಾಂಗ್ರೆಸ್‌ನ ಎಲ್ಲಾ ಉತ್ತಮ ನಾಯಕರು ಪಕ್ಷದ ದಿಕ್ಕಿಲ್ಲದ ನಾಯಕತ್ವದಿಂದ ಬೇಸತ್ತಿದ್ದಾರೆ” ಎಂದು ಹೇಳಿದರು.
#WATCH| Bhopal: BJP leader Shivraj Singh Chouhan says, "…Rahul Gandhi will breathe only after finishing the Congress completely as suggested by Mahatma Gandhi. All good leaders of the Congress are tired of the party's leadership which is directionless…Congress is on the…pic.twitter.com/rDhbLdHCJu
— ANI (@ANI)March 9, 2024

ಮಧ್ಯಪ್ರದೇಶ ಬಿಜೆಪಿ ಅಧ್ಯಕ್ಷ ವಿಡಿ ಶರ್ಮಾ ಮಾತನಾಡಿ, ”ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ನಾಯಕ ಸುರೇಶ್ ಪಚೌರಿ ಮಧ್ಯಪ್ರದೇಶ ಕಾಂಗ್ರೆಸ್‌ನಲ್ಲಿ ಪ್ರಬಲ ನಾಯಕರಾಗಿದ್ದಾರೆ. ಕಾಂಗ್ರೆಸ್‌ನಲ್ಲಿ ಅಂತಹ ನಾಯಕನಿಗೆ ಸ್ಥಾನವಿಲ್ಲ, ಆದ್ದರಿಂದ ಅವರು ಬಿಜೆಪಿಗೆ ಸೇರಲು ನಿರ್ಧರಿಸಿದ್ದಾರೆ ಮತ್ತು ಪ್ರಧಾನಿ ಮೋದಿ ನಾಯಕತ್ವದಲ್ಲಿ ಕೆಲಸ ಮಾಡಲು ನಿರ್ಧರಿಸಿದ್ದಾರೆ” ಎಂದು ತಿಳಿಸಿದರು.
ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯರ ಮುಂದೆ ಬೆತ್ತಲೆಯಾಗಿ ತಿರುಗಾಡಿದ ವ್ಯಕ್ತಿ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:7 + 9 =
Remember me
