ನವದೆಹಲಿ: ಬಾಲಿವುಡ್​ನ ಪ್ರತಿಭಾವಂತ ನಟ ಸುಶಾಂತ್ ಸಿಂಗ್ ರಜಪೂತ್ ಅವರ ನಿಧನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದ್ದು, ಮಹಾರಾಷ್ಟ್ರ ಸರ್ಕಾರಕ್ಕೆ ಮತ್ತು ಆತ್ಮಹತ್ಯೆ ಎಂದು ಬಿಂಬಿಸುತ್ತಿದ್ದವರಿಗೆ ಭಾರಿ ಹಿನ್ನಡೆಯಾಗಿದೆ. ಸಿಬಿಐ ತನಿಖೆಯನ್ನು ಆಗ್ರಹಿಸುತ್ತ ಬಂದಿದ್ದ ಸುಶಾಂತ್ ಕುಟುಂಬದವರ ಆಗ್ರಹಕ್ಕೆ ಮನ್ನಣೆ ಸಿಕ್ಕಂತಾಗಿದೆ.
ಪ್ರಕರಣದ ವಿಚಾರಣೆಯನ್ನು ಪಟನಾದಿಂದ ಮುಂಬೈಗೆ ವರ್ಗಾಯಿಸಬೇಕು ಎಂದು ಆಗ್ರಹಿಸಿ ನಟಿ ರಿಯಾ ಚಕ್ರವರ್ತಿ ಸಲ್ಲಿಸಿದ್ದ ಪಿಟಿಷನ್ ನಲ್ಲಿ ಇದ್ದ ಅಂಶವನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್​, ಸಿಬಿಐ ತನಿಖೆಗೆ ಪ್ರಕರಣವನ್ನು ವಹಿಸುವ ಎಲ್ಲ ಅಧಿಕಾರವೂ ಬಿಹಾರ ಸರ್ಕಾರಕ್ಕೆ ಇದೆ. ತನಿಖೆಯ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಸಿಬಿಐಗೆ ಸಹಕಾರ ನೀಡಬೇಕು ಎಂದು ಆದೇಶಿಸಿದೆ.
ಇದನ್ನೂ ಓದಿ:PHOTOS: ಮನಸೂರೆಗೊಳ್ಳುವ ಫೋಟೋಗಳಲ್ಲಿ ನಗ್ನದೇಹಿ ಮಾಡೆಲ್ ಎಲ್ಲಿದ್ದಾಳೆ! – ಪತ್ತೆ ಹಚ್ಚೋಕೆ ಸಾಧ್ಯಾನಾ ನೋಡಿ…
ನ್ಯಾಯಮೂರ್ತಿ ಹೃಷಿಕೇಶ್ ರಾಯ್ ಅವರ ಏಕ ಸದಸ್ಯ ಪೀಠ ಈ ಪಿಟಿಷನ್ ಅನ್ನು ವಿಚಾರಣೆಗೆ ಎತ್ತಿಕೊಂಡಿದೆ. ಮುಂಬೈ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದರೂ, ಪಟನಾ ಪೊಲೀಸರು ಎಫ್ಐಆರ್ ದಾಖಲಿಸಿರುವುದನ್ನು ದೂರಿನಲ್ಲಿವ ಅಂಶಗಳು ಬಹಿರಂಗಪಡಿಸಿವೆ ಎಂದು ಹೇಳಿದ ನ್ಯಾಯಪೀಠ, ರಿಯಾ ಸಲ್ಲಿಸಿದ್ದ ಪಿಟಿಷನ್ ಅನ್ನು ತಿರಸ್ಕರಿಸಿತು. ಇದಕ್ಕೂ ಮುನ್ನ ಆಗಸ್ಟ್ 11ರ ವಿಚಾರಣೆ ವೇಳೆ ಪಿಟಿಷನ್ ಕುರಿತ ತೀರ್ಪನ್ನು ಕಾಯ್ದಿರಿಸಿದ್ದಾಗಿ ಹೇಳಿತ್ತು.
ಇದನ್ನೂ ಓದಿ:ದಾರಿ ತಪ್ಪಿದ ಕ್ಸಿ ಜಿನ್​ಪಿಂಗ್​ಗೆ ಪಾಠ ಕಲಿಸಲು ಹೊರಟಿದ್ದಾರೆ ಲೇಡಿ ಪ್ರೊಫೆಸರ್​!
ಸುಶಾಂತ್ ಸಿಂಘ್ ಅವರ ತಂದೆ ಕೆಕೆ ಸಿಂಗ್ ಅವರು ರಿಯಾ ಚಕ್ರವರ್ತಿ ವಿರುದ್ಧ ಪಟನಾ ಪೊಲೀಸ್ ಠಾಣೆಯಲ್ಲಿ ಜುಲೈ 25ರಂದು ಕೇಸ್ ದಾಖಲಿಸಿದ್ದರು. ಮಗನ ಆತ್ಮಹತ್ಯೆ ಪ್ರಚೋದನೆ ನೀಡಿದ್ದಾಗಿ ಆಕೆಯ ವಿರುದ್ಧ ಆರೋಪ ಮಾಡಿದ್ದರು. ಅಲ್ಲದೆ, ಸುಶಾಂತ್ ಖಾತೆಯಿಂದ 15 ಕೋಟಿ ರೂಪಾಯಿಯನ್ನು ತನ್ನ ಖಾತೆಗೆ ಆಕೆ ವರ್ಗಾಯಿಸಿಕೊಂಡಿದ್ದಾಳೆ ಎಂದೂ ಆರೋಪಿಸಿದ್ದರು. ಜೂನ್ 14ರಂದು ಸುಶಾಂತ್​ ಸಿಂಗ್ ರಜಪೂತ್​ (34) ಸಂದೇಹಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. (ಏಜೆನ್ಸೀಸ್)
ಬಾಲಿವುಡ್​ ಕಾಮಕಾಂಡದಲ್ಲಿ ನಾನಿಲ್ಲ; ಮಹೇಶ್​ ಭಟ್​ ಕೊಟ್ಟ ಸ್ಪಷ್ಟನೆ ಇದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 2 =
Remember me
