ನ್ಯೂಯಾರ್ಕ್​:ಟೀಂ ಇಂಡಿಯಾದ ಉಪನಾಯಕ ಮತ್ತು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಜೂನ್ 2 ರಂದು ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎಯಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2024 ಗಾಗಿ ನ್ಯೂಯಾರ್ಕ್‌ನಲ್ಲಿ ಭಾರತ ತಂಡವನ್ನು ಸೇರಿಕೊಂಡರು.
ಇದನ್ನೂ ಓದಿ:ಟಿ20 ವಿಶ್ವಕಪ್​ನಲ್ಲಿ ಈ ನಾಲ್ಕು ತಂಡಗಳು ಸೆಮಿಫೈನಲ್​ಗೇರುವುದು ಖಚಿತ: ಅಂಬಾಟಿ ರಾಯುಡು ಭವಿಷ್ಯ
ಪ್ರತಿಷ್ಠಿತ ಪಂದ್ಯಾವಳಿಗಾಗಿ ಭಾರತ ತಂಡದ ಮೊದಲ ಬ್ಯಾಚ್ ನ್ಯೂಯಾರ್ಕ್ ನಗರಕ್ಕೆ ಬಂದಿಳಿದಿದೆ. ಆದಾಗ್ಯೂ, ಹಾರ್ದಿಕ್ ಪಾಂಡ್ಯ ಮುಂಬೈ ವಿಮಾನ ನಿಲ್ದಾಣದಿಂದ ಯುಎಸ್ಎಗೆ ಹೊರಟ ಗುಂಪಿನಲ್ಲಿ ಇರಲಿಲ್ಲ. ಮುಂಬೈ ಇಂಡಿಯನ್ಸ್ ನಾಯಕ ಪಾಂಡ್ಯ ತನ್ನ ಪತ್ನಿ ನತಾಸಾ ಸ್ಟಾಂಕೋವಿಕ್ ಅವರೊಂದಿಗೆ ವಿಚ್ಛೇದನದ ವದಂತಿಗಳಿಂದಾಗಿ ಲಂಡನ್‌ನಲ್ಲಿದ್ದರು ಎಂದು ವರದಿಯಾಗಿದೆ.
ಸಂಜು ಸ್ಯಾಮ್ಸನ್ ಮತ್ತು ವಿರಾಟ್ ಕೊಹ್ಲಿ ನಂತರ ತಂಡಕ್ಕೆ ಸೇರಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾರ್ದಿಕ್ ಗೆ ಅನುಮತಿ ನೀಡಿತ್ತು. ಇದೀಗ, ಸ್ಟಾರ್ ಆಲ್‌ರೌಂಡರ್ ಅಂತಿಮವಾಗಿ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಮುಂಚಿತವಾಗಿ ತನ್ನ ಸಹ ಆಟಗಾರರೊಂದಿಗೆ ತರಬೇತಿಯನ್ನು ಪ್ರಾರಂಭಿಸಿದ್ದಾರೆ.
ಹಾರ್ದಿಕ್ ಪಾಂಡ್ಯ ತಮ್ಮ ಎಕ್ಸ್ (ಹಿಂದಿನ ಟ್ವಿಟರ್) ಖಾತೆಯಲಗಲಿ ನ್ಯೂಯಾರ್ಕ್‌ನಲ್ಲಿ ತಂಡದ ತರಬೇತಿ ಅವಧಿಯ ಕೆಲವು ಚಿತ್ರಗಳನ್ನು “ದೇಶ ಸೇವೆಯಲ್ಲಿ” ಶೀರ್ಷಿಕೆ ಹೊತ್ತ ಟ್ವೀಟ್‌ನೊಂದಿಗೆ ಹಂಚಿಕೊಂಡಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಐಪಿಎಲ್​ 2024 ರಲ್ಲಿ ಮುಂಬೈ ಇಂಡಿಯನ್ಸ್ ನಾಯಕನಾಗಿ ಹಾರ್ದಿಕ್ ಪಾಂಡ್ಯ ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾಗಿದ್ದರು. ಐದು ಬಾರಿಯ ಐಪಿಎಲ್​ ಚಾಂಪಿಯನ್ನರು ನಾಲ್ಕು ಗೆಲುವುಗಳೊಂದಿಗೆ ಕೇವಲ ಎಂಟು ಅಂಕ ಗಳಿಸಿ ಅಂಕಪಟ್ಟಿಯ ಕೆಳಭಾಗದಲ್ಲಿ ಕಾಣಿಸಿಕೊಂಡಿದ್ದರು. ನಂತರ ಪ್ಲೇಆಫ್‌ಗೆ ಅರ್ಹತೆ ಪಡೆಯಲು ವಿಫಲರಾದರು.
ಇನ್ನು ಆಲ್‌ರೌಂಡರ್‌ಪಾಂಡ್ಯಾಗೆ 14 ಪಂದ್ಯಗಳಲ್ಲಿ 18ರ ಸರಾಸರಿಯಲ್ಲಿ 216 ರನ್‌ಗಳನ್ನು ಮತ್ತು 143.05 ಸ್ಟ್ರೈಕ್ ರೇಟ್‌ನೊಂದಿಗೆ ಗೆ ನೀರಸ ಋತುಮಾನವಾಗಿತ್ತು. ಪಾಂಡ್ಯ 35.18 ರ ಸರಾಸರಿಯಲ್ಲಿ 11 ವಿಕೆಟ್​ಗಳನ್ನು ಮತ್ತು 10.75 ರ ಎಕಾನಮಿ ದರವನ್ನು ಪಡೆದಿದ್ದರು.
ಇದೆಲ್ಲದರ ಹಿನ್ನೆಲೆಯಲ್ಲಿ ಪಾಂಡ್ಯ ಮುಂಬರುವ ಟಿ20 ವಿಶ್ವ ಕಪ್ 2024 ರಲ್ಲಿ ಐಪಿಎಲ್​ನ ಕಳಪೆ ಪ್ರದರ್ಶನದಿಂದ ಹೊರಬರಲು ಪ್ರಯತ್ನಿಸುವುದು ಖಚಿತ ಎನ್ನುತ್ತಾರೆ ಕ್ರಿಕೆಟ್​ ಪಂಡಿತರು. ಪಾಂಡ್ಯ ಟೀಮ್ ಇಂಡಿಯಾಗೆ ಹೋಗುವ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಟಿ20 ವಿಶ್ವಕಪ್‌ನ ಕೊನೆಯ ಆವೃತ್ತಿಯಲ್ಲಿ, ಪಾಂಡ್ಯ 25.06 ಸರಾಸರಿಯಲ್ಲಿ ಅರ್ಧಶತಕ ಸೇರಿದಂತೆ 128 ರನ್ ಗಳಿಸಿದರು ಮತ್ತು ಆರು ಪಂದ್ಯಗಳಲ್ಲಿ 8 ವಿಕೆಟ್ ಪಡೆದರು.
ಜೂನ್ 1 ರಂದು ಹೊಸದಾಗಿ ನಿರ್ಮಿಸಲಾದ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ಐರ್ಲೆಂಡ್ ವಿರುದ್ಧ ಅಭಿಯಾನವನ್ನು ಪ್ರಾರಂಭಿಸಲಿದೆ.
ವಿಚ್ಛೇದನದ ವದಂತಿ: ಪಾಂಡ್ಯ ತನ್ನ ಪತ್ನಿ ನತಾಸಾ ಸ್ಟಾಂಕೋವಿಕ್ ಜೊತೆಗಿನ ವಿಚ್ಛೇದನದ ವದಂತಿಗಳಿಂದಾಗಿ ಸುದ್ದಿಯಲ್ಲಿದ್ದಾರೆ. ನತಾಸಾ ತನ್ನ ಇನ್‌ಸ್ಟಾಗ್ರಾಮ್‌ನಿಂದ ‘ಪಾಂಡ್ಯ’ ಉಪನಾಮವನ್ನು ತೆಗೆದುಹಾಕಿದ್ದಾರೆ. ಕಳೆದ ಒಂದು ವಾರದಿಂದ ಊಹಾಪೋಹಗಳು ಕಾಳ್ಗಿಚ್ಚಿನಂತೆ ಹರಡುತ್ತಿದ್ದರೂ, ಪಾಂಡ್ಯ ಅಥವಾ ನಟಾಸಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ವಿದ್ಯಾರ್ಥಿಗಳೇ ಗಮನಿಸಿ: ಬಿಎಂಟಿಸಿ ಬಸ್ ಪಾಸ್ ವಿತರಣೆ..ಎಲ್ಲಿ? ಯಾವಾಗ? ವಿವರ ಇಲ್ಲಿದೆ ನೋಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 18 =
Remember me
