ನವದೆಹಲಿ:ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಆಪ್ತರಾಗಿದ್ದ ತಜೇಂದರ್ ಸಿಂಗ್ ಬಿಟ್ಟು ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲೇ ಪಕ್ಷದ ಹಿರಿಯ ನಾಯಕರ ನಿರ್ಗಮನದಿಂದ ಕಾಂಗ್ರೆಸ್‍ಗೆ ಭಾರೀ ಹಿನ್ನಡೆ ಉಂಟಾಗಿದೆ.
ಇದನ್ನೂ ಓದಿ:ರಾಹುಲ್-ಡಿ ಕಾಕ್ ಶತಕದ ಜೊತೆಯಾಟ: ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್‌ಗಳ ಭರ್ಜರಿ ಜಯ
ಹಿಮಾಚಲಪ್ರದೇಶದ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿಯಾಗಿದ್ದ ತೇಜೇಂದರ್ ಸಿಂಗ್‍ಬಿಟ್ಟು, ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದಕ್ಕೂ ಮುನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ, ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಎಐಸಿಸಿ, ಹಿಮಾಚಲ ಪ್ರದೇಶದ ಸಹ-ಪ್ರಭಾರಿ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಭಾರವಾದ ಹೃದಯದಿಂದ, 35 ವರ್ಷಗಳ ನಂತರ ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತೇನೆ ಎಂಬ ಶೀರ್ಷಿಕೆಯೊಂದಿಗೆ ತೇಜೆಂದರ್ ತನ್ನ ರಾಜೀನಾಮೆ ಪತ್ರವನ್ನು ಫೇಸ್‍ಬುಕ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ.
ಮಾರ್ಚ್‍ನಲ್ಲಿ ಕಾಂಗ್ರೆಸ್ ವಕ್ತಾರ ರೋಹನ್ ಗುಪ್ತಾ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದ ಕೆಲವು ನಾಯಕರಿಂದ ಕಿರುಕುಳ ಮತ್ತು ಚಾರಿತ್ರ್ಯ ವಧೆಯಾಗುತ್ತಿದೆ ಎಂದು ಕಾರಣ ನೀಡಿದ್ದರು. ಅಹಮದಾಬಾದ್ ಪೂರ್ವ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿಯಾಗಿ ರೋಹನ್ ಗುಪ್ತಾ ಅವರನ್ನು ಹೆಸರಿಸಲಾಯಿತು. ಆದರೆ ಅವರು ಕಣದಿಂದ ಹೊರಗುಳಿದಿದ್ದಾರೆ.
ಈ ಹಿಂದೆ, ವಕ್ತಾರ ಗೌರವ್ ವಲ್ಲಭ್ ಮತ್ತು ಒಲಿಂಪಿಕ್ ಪದಕ ವಿಜೇತ ಮತ್ತು ಬಾಕ್ಸರ್ ವಿಜೇಂದರ್ ಸಿಂಗ್ ಕಾಂಗ್ರೆಸ್ ತೊರೆದಿದ್ದರು. ಮುಂಬೈನ ಹಿರಿಯ ನಾಯಕ ಸಂಜಯ್ ನಿರುಪಮ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಉಚ್ಚಾಟಿಸಲಾಗಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದ್ದರೂ ಸಹ ರಾಜೀನಾಮೆ ನೀಡಿದ್ದರು. ಕಳೆದ ವರ್ಷ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ವೇಳೆ ಪತಿ ಸಂತೋಖ್ ಸಿಂಗ್ ಚೌಧರಿ ಸಾವನ್ನಪ್ಪಿದ ಕರಮ್‌ಜಿತ್ ಕೌರ್, ಕಾಂಗ್ರೆಸ್ ಅವರ ಪರಂಪರೆಯನ್ನು ಅಗೌರವಿಸಿದೆ ಎಂದು ಆರೋಪಿಸಿದ್ದಾರೆ.
ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಮಾಜಿ ಶಾಸಕ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬಿಜೆಪಿ ಸೇರಿದ್ದರು. ಭೋಪಾಲ್‌ನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಸಮ್ಮುಖದಲ್ಲಿ ಮಾಜಿ ಕಾಂಗ್ರೆಸ್ ಶಾಸಕ ಹರಿವಲ್ಲಭ ಶುಕ್ಲಾ ಅವರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು.
ಹುಬ್ಬಳ್ಳಿಯ ನೇಹಾ ಹತ್ಯೆ ಕೇಸ್​: ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 + 16 =
Remember me
