ಚೆನ್ನೈ:ತಮಿಳುನಾಡಿನ ಬಿಜೆಪಿ ನಾಯಕಿ, ನಟಿ ಗೌತಮಿ ತಡಿಮಲ್ಲಾ ಅವರು ಪಕ್ಷ ತೊರೆಯುವ ನಿರ್ಧಾರ ಮಾಡಿದ್ದಾರೆ.
ಇದನ್ನೂ ಓದಿ:ಒಂದೂವರೆ ಸಾವಿರ ರೂಪಾಯಿಗಾಗಿ ಅಪ್ಪನನ್ನೇ ಕೊಂದ ಮಗ
ಕಳೆದ 25 ವರ್ಷಗಳಿಂದ ಪಕ್ಷದ ಕಾರ್ಯಕರ್ತೆಯಾಗಿದ್ದೆ. ಪಕ್ಷದ ಬದ್ಧತೆಗೆ ಒಗ್ಗೂಡಿಕೊಂಡಿದ್ದೆ. ಆದರೆ ನನ್ನ ಆಸ್ತಿ ವಿವಾಧದಲ್ಲಿ ವಿರೋಧಿಗಳೊಂದಿಗೆ ನಮ್ಮ ಪಕ್ಷದವರೇ ಕೈಜೋಡಿಸಿ ಕಿರುಕುಳ ನೀಡುತ್ತಿರುವುದಕ್ಕೆ ಬೇಸತ್ತು ಈ ತೀರ್ಮಾನ ತೆಗೆದುಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಗೌತಮಿ, ನನ್ನ ಆಸ್ತಿಯನ್ನು ಕಬಳಿಸಲು ಯತ್ನಿಸುತ್ತಿರುವ ವ್ಯಕ್ತಿಗಳಿಗೆ ಪಕ್ಷದ ಹಿರಿಯ ನಾಯಕರು ಸಹಾಯ ಮಾಡುತ್ತಿದ್ದಾರೆ. ಇದರಿಂದ ನನ್ನ ಮನಸ್ಸಿಗೆ ನೋವಾಗಿದೆ ಎಂದು ಗೌತಮಿ ತಿಳಿಸಿದ್ದಾರೆ.
ಇಪ್ಪತ್ತು ವರ್ಷದ ಹಿಂದೆ ನನಗೆ ಸಿ.ಅಲಗಪ್ಪನ್ ಎಂಬುವವರ ಸ್ನೇಹ ಆಗಿತ್ತು. ನಂತರದ ದಿನಗಳಲ್ಲಿ ಅವರಿಗೆ ನಮ್ಮ ಆಸ್ತಿಯನ್ನು ನೋಡಿಕೊಳ್ಳುವ ಜವಾಬ್ದಾರಿ ವಹಿಸಲಾಗಿತ್ತು. ಇತ್ತೀಚೆಗೆ ಅವರಿಗೆ ನಮ್ಮ ಜಮೀನನ್ನು ಮಾರಾಟ ಮಾಡುವ ಜವಾಬ್ದಾರಿ ನೀಡಲಾಗಿತ್ತು. ಜಮೀನು ಮಾರಾಟದ ಹೆಸರಲ್ಲಿ ನಮಗೆ ಆತ ಮೋಸ ಮಾಡಿದ್ದಾನೆ. ಈ ವಿಚಾರದಲ್ಲಿ ಪಕ್ಷದ ನಾಯಕರು ನನಗೆ ಯಾವುದೇ ಸಹಾಯ ಮಾಡಿಲ್ಲ. ಆರೋಪಿ ಅಲಗಪ್ಪನ್ ಪರ ಪಕ್ಷದ ಹಿರಿಯ ನಾಯಕರು ನಿಂತಿದ್ದಾರೆ ಎಂದು ಗೌತಮಿ ಆರೋಪಿಸಿದ್ದಾರೆ.
ರಜನಿಕಾಂತ್​ ‘ತಲೈವರ್​ 171’ ಚಿತ್ರಕ್ಕೆ ಎಂಟ್ರಿ ಕೊಡಲಿದ್ದಾರೆ ‘ಸಲಾರ್’​ ವಿಲನ್​?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − eight =
Remember me
