ತಮಿಳುನಾಡು:ತಮಿಳುನಾಡಿನ ವಿಲವಂಕೋಡ್ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್ ವಿಜಯಧರಣಿ ಅವರು ಶನಿವಾರ ನವದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.
ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ, ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್‌.ಸಿ.ಮುರುಗನ್, ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಅರವಿಂದ್ ಮೆನನ್ ಮತ್ತು ಬಿಜೆಪಿ ತಮಿಳುನಾಡು ರಾಜ್ಯ ಬಿಜೆಪಿ ರಾಷ್ಟ್ರೀಯ ಸಹ-ಪ್ರಭಾರಿ ಪೊಂಗುಲೇಟಿ ಸುಧಾಕರ್ ರೆಡ್ಡಿ ಅವರ ಸಮ್ಮುಖದಲ್ಲಿ ಅವರು ಕೇಸರಿ ಪಕ್ಷಕ್ಕೆ ಸೇರಿದರು.
ತಮಿಳುನಾಡು ಕಾಂಗ್ರೆಸ್‌ನ ಪ್ರಮುಖ ಮುಖ, ವಿಜಯಧರಣಿ ಅವರು 2021 ರಲ್ಲಿ ಕನ್ಯಾಕುಮಾರಿ ಜಿಲ್ಲೆಯ ವಿಲ್ವಂಕೋಡ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ಕಳೆದ ಕೆಲವು ದಿನಗಳಿಂದ, ಪಕ್ಷದ ಆಂತರಿಕ ಭಿನ್ನಾಭಿಪ್ರಾಯದಿಂದಾಗಿ ಅವರು ಪಕ್ಷ ಬದಲಾಯಿಸುವ ಬಗ್ಗೆ ಊಹಾಪೋಹಗಳನ್ನು ಮಾಡಲಾಗಿತ್ತು.
ಕಾಂಗ್ರೆಸ್ ನಾಯಕತ್ವದ ವಿರುದ್ಧ ವಿಜಯಧರಣಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಗ್ಗೆ ಕೇಳಿದಾಗ, ‘ಪಕ್ಷದ ಆಂತರಿಕ ರಾಜಕೀಯವು ಕಾಂಗ್ರೆಸ್ ಪಕ್ಷದ ಪ್ರಮುಖ ದೌರ್ಬಲ್ಯಗಳಲ್ಲಿ ಒಂದಾಗಿದೆ. ಪಕ್ಷದೊಳಗೆ ಪ್ರತಿಯೊಬ್ಬ ನಾಯಕರೂ ತಮ್ಮದೇ ಆದ ಪ್ರತ್ಯೇಕ ಬೆಂಬಲಿಗರ ಗುಂಪು ಮಾಡಿಕೊಂಡು ಸ್ಪರ್ಧಿಸಿ, ಪಕ್ಷದ ಏಳಿಗೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯಧರಣಿ, ನಾನು ಬಾಲ್ಯದಿಂದಲೂ ಕಾಂಗ್ರೆಸ್‌ನ ಭಾಗವಾಗಿದ್ದೆ. ಈಗ ಬಿಜೆಪಿ ಸೇರುವ ಪರಿಸ್ಥಿತಿ ಎದುರಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಚಟುವಟಿಕೆ ಮತ್ತು ಕಾರ್ಯಕ್ರಮಗಳಿಂದಾಗಿ ನಾನು ಕೂಡ ಬಿಜೆಪಿ ಸೇರಿದ್ದೇನೆ ಎಂದಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen + one =
Remember me
