ಚೆನ್ನೈ:2024ರ ಲೋಕಸಭೆ ಚುನಾವಣೆಗಾಗಿ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) 21 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.
ಇದನ್ನೂ ಓದಿ:ಐಪಿಎಲ್​ ಆರಂಭಕ್ಕೂ ಮುನ್ನವೇ ಮನೀಶ್ ಪಾಂಡೆ ವಿರುದ್ಧ ರಸೆಲ್‍ ಶಾಕಿಂಗ್​ ಕಾಮೆಂಟ್​: ಕಾರಣ ಹೀಗಿದೆ!
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಇದು ಡಿಎಂಕೆ ಪ್ರಣಾಳಿಕೆ ಮಾತ್ರವಲ್ಲ, ಜನರ ಪ್ರಣಾಳಿಕೆ. 2014 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಭಾರತ ಅಭಿವೃದ್ಧಿ ಕ್ಷೀಣಿಸಿದೆ ಎಂದು ಹೇಳಿದರು. ಬಿಜೆಪಿ ತನ್ನ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಭರವಸೆಗಳಲ್ಲಿ ಯಾವುದನ್ನೂ ಈಡೇರಿಸಲಿಲ್ಲ. ನಾವು ಭಾರತ ಮೈತ್ರಿಕೂಟವನ್ನು ರಚಿಸಿದ್ದೇವೆ ಮತ್ತು 2024 ರಲ್ಲಿ ನಾವು ನಮ್ಮ ಸರ್ಕಾರವನ್ನು ರಚಿಸುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.
ತಮಿಳುನಾಡಿನಲ್ಲಿ ಸಿಎಎ ಜಾರಿಗೆ ಇಲ್ಲ:ಇಂದು ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ತಮಿಳುನಾಡಿಗೆ ವಿಶೇಷ ಯೋಜನೆಗಳನ್ನು ಘೋಷಿಸಿದ್ದೇವೆ. ಪ್ರತಿ ಜಿಲ್ಲೆಯ ಅಬಿವೃದ್ಧಿ ದೃಷ್ಟಿಯಿಂದ ಹಲವು ಯೋಜನೆಗಳನ್ನು ಈ ಪ್ರಣಾಳಿಕೆಯಲ್ಲಿ ನೀಡಲಾಗಿದೆ. ಚುನಾವಣೆಗೂ ಮುನ್ನ ಡಿಎಂಕೆ ಪ್ರಕಟಿಸಿದ ಪ್ರಣಾಳಿಕೆಗಳನ್ನು ನಾವು ಈಡೇರಿಸುತ್ತೇವೆ ಎಂದು ಹೇಳಿದರು. ತಮಿಳುನಾಡಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ನೀಟ್ ಅನ್ನು ಜಾರಿಗೆ ತರುವುದಿಲ್ಲ. ಹಾಗೂ ಪ್ರಮುಖವಾಗಿ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಯುಸಿಸಿ ಜಾರಿಯಾಗುವುದಿಲ್ಲ ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ ಎಂದು ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆಗೆ 12 ಹೊಸ ಅಭ್ಯರ್ಥಿಗಳು ಸೇರಿದಂತೆ 21 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಡಿಎಂಕೆ ಬಿಡುಗಡೆ ಮಾಡಿದೆ. ಹಾಲಿ ಸಂಸದರಾದ ಕನ್ನಿಮೊಳಿ ತೂತುಕುಡಿಯಿಂದ ಸ್ಪರ್ಧಿಸಲಿದ್ದಾರೆ. ಉತ್ತರ ಚೆನ್ನೈನಿಂದ ಕಲಾನಿಧಿ ವೀರಸಾಮಿ, ದಕ್ಷಿಣ ಚೆನ್ನೈನಿಂದ ತಮಿಳಚಿ ತಂಗಪಾಂಡಿಯನ್, ಸೆಂಟ್ರಲ್ ಚೆನ್ನೈನಿಂದ ದಯಾನಿಧಿ ಮಾರನ್, ಶ್ರೀಪೆರುಂಬತ್ತೂರಿನಿಂದ ಟಿಆರ್ ಬಾಲು, ಅರಕೋಣಂನಿಂದ ಜಗತ್ರಾಚಾಹನ್ ಮತ್ತು ವೆಲ್ಲೂರಿನಿಂದ ಕಂಧೀರ್ ಅವರನ್ನು ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ ಎಂದು ಹೇಳಿದರು.
21 ಅಭ್ಯರ್ಥಿಗಳ ಪೈಕಿ 11 ಹೊಸ ಮುಖಗಳಿಗೆ ಡಿಎಂಕೆ ಅವಕಾಶ ಕಲ್ಪಿಸಿದೆ. ಇದೇ ವೇಳೆ ಚುನಾವಣೆಗಾಗಿ ಡಿಎಂಕೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತು. ತಮಿಳುನಾಡಿನಲ್ಲಿ 9 ಸ್ಥಾನಗಳಲ್ಲಿ ಸ್ಪರ್ಧಿಸಲಿರುವ ಕಾಂಗ್ರೆಸ್ ಜೊತೆ ಡಿಎಂಕೆ ಮೈತ್ರಿ ಮಾಡಿಕೊಂಡಿದೆ. ಇದರ ಇತರ ಮಿತ್ರಪಕ್ಷಗಳಾದ ವಿಸಿಕೆ, ಸಿಪಿಎಂ, ಸಿಪಿಐ ತಲಾ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಲಿವೆ. ಐಯುಎಂಎಲ್, ಕೆಎಂಡಿಕೆ, ಎಂಡಿಎಂಕೆ ತಲಾ ಒಂದು ಸ್ಥಾನದಲ್ಲಿ ಸ್ಪರ್ಧಿಸಲಿವೆ.
ಮುಕೇಶ್ ಅಂಬಾನಿ ಮಗನ ಪ್ರೀ ವೆಡ್ಡಿಂಗ್ ಸಮಾರಂಭದಲ್ಲಿ ಶಾರುಖ್-ಸಲ್ಮಾನ್ ಕಿತ್ತಾಟ: ಅಮೀರ್ ಖಾನ್ ಬಿಚ್ಚಿಟ್ಟ ರಹಸ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
