ತಮಿಳುನಾಡು:ಸರ್ಕಾರಿ ನೌಕರನಿಂದ 20 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಯನ್ನು ಇದೀಗ ಮಧುರೈ ಇಡಿ ಇಲಾಖೆ ಬಂಧಿಸಲಾಗಿದ್ದು, ಘಟನೆ ತಮಿಳುನಾಡಿನ ದಿಂಡಿಗಲ್‌ನಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಪ್ರೊ ಕಬಡ್ಡಿ 10ನೇ ಆವೃತ್ತಿ 12 ತಂಡಗಳ ನಾಯಕರು ಯಾರು ?: ಕಣದಲ್ಲಿದ್ದಾರೆ ಏಳು ಕನ್ನಡಿಗರು, ಪವನ್ ಶೆರಾವತ್‌ ದುಬಾರಿ
ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ವಿರೋಧಿ ನಿರ್ದೇಶನಾಲಯ (DVSC) ಡಿಸೆಂಬರ್ 1 ರಂದು ಜಾರಿ ನಿರ್ದೇಶನಾಲಯದ (ED) ಮಧುರೈ ಕಚೇರಿ ಮೇಲೆ ಏಕಾಏಕಿ ದಾಳಿ ನಡೆಸಿತು. ಈ ಕ್ರಮವು ದಿಂಡಿಗಲ್‌ನಲ್ಲಿ ಇಡಿ ಅಧಿಕಾರಿ ಅಂಕಿತ್ ತಿವಾರಿ ಬಂಧಿಸಲು ಕಾರಣವಾಗಿದ್ದು, ಇದರ ಬೆನ್ನಲ್ಲೇ ಡಿವಿಎಸಿ ದಿಂಡುಗಲ್‌ನಲ್ಲಿರುವ ಅಂಕಿತ್ ನಿವಾಸದಲ್ಲೂ ಕೂಡ ತೀವ್ರ ಶೋಧ ನಡೆಸಲಾಗಿದೆ ಎಂದು ವರದಿ ತಿಳಿಸಿದೆ.
20 ಲಕ್ಷ ಹಣವನ್ನು ಲಂಚವಾಗಿ ಸ್ವೀಕರಿಸುತ್ತಿದ್ದ ಅಂಕಿತ್ ಇದೀಗ ಇಡಿ ಅಧಿಕಾರಿಗಳ ವಶದಲ್ಲಿದ್ದು, ಹೆಚ್ಚಿನ ವಿಚಾರಣೆಗೆ ಒಳಗಾಗಿದ್ದಾರೆ. ಶುಕ್ರವಾರ ದಿಂಡಿಗಲ್‌ನಲ್ಲಿ ವೈದ್ಯರೊಬ್ಬರಿಂದ 20 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಅಂಕಿತ್‌ನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಪ್ರಸ್ತುತ ಜಾರಿ ನಿರ್ದೇಶನಾಲಯ ಅಧಿಕಾರಿಯಾಗಿ ಅಂಕಿತ್ ತಿವಾರಿ ಅವರ ಸ್ಥಾನಮಾನದ ಸತ್ಯಾಸತ್ಯತೆಯನ್ನು ತನಿಖೆ ನಡೆಸುತ್ತಿದೆ ಮತ್ತು ಆರೋಪಿಯ ರುಜುವಾತುಗಳನ್ನು ದೃಢೀಕರಿಸುವ ಅಧಿಕೃತ ಹೇಳಿಕೆಯನ್ನು ಸದ್ಯ ನಿರೀಕ್ಷಿಸಲಾಗಿದೆ.
ಇದನ್ನೂ ಓದಿ:ಇಂದಿನಿಂದ ಪ್ರೊ ಕಬಡ್ಡಿ 10ನೇ ಆವೃತ್ತಿ: ಕ್ಯಾರವಾನ್ ಮಾದರಿಯಲ್ಲಿ ಟೂರ್ನಿ ಆಯೋಜನೆ, ಗುಜರಾತ್ ಜೈಂಟ್ಸ್-ತೆಲುಗು ಟೈಟಾನ್ಸ್ ನಡುವೆ ಉದ್ಘಾಟನಾ ಪಂದ್ಯ
ಪೊಲೀಸರ ಪ್ರಕಾರ, ಅಂಕಿತ್ ಮತ್ತು ಆತನ ಸಹಚರರು ಬೆದರಿಕೆ ಮತ್ತು ಸುಲಿಗೆಯಲ್ಲಿ ತೊಡಗಿದ್ದರು, ಆರೋಪಿಗಳ ವಿರುದ್ಧದ ಪ್ರಕರಣಗಳನ್ನು ಮುಕ್ತಾಯಗೊಳಿಸುವ ಆಮಿಷವೊಡ್ಡಿ ಅವರಿಂದ ಲಂಚವನ್ನು ಕೇಳುತ್ತಿದ್ದರು. ಸುಳಿವಿನ ನಂತರ ಈಗ ಅಂಕಿತ್‌ನನ್ನು ಮಧುರೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ,(ಏಜೆನ್ಸೀಸ್).
ಈ ರಾಶಿಯವರಿಗಿಂದು ಧನಾಗಮನ, ಪಾಲುದಾರಿಕೆಯಲ್ಲಿ ಅನುಕೂಲ: ನಿತ್ಯಭವಿಷ್ಯ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen + 16 =
Remember me
