ಅಮರಾವತಿ:ಗುಂಟೂರು ಜಿಲ್ಲೆಯ ತಾಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ವೈಎಸ್‌ಆರ್‌ಸಿಪಿ ಪಕ್ಷದ ಕಚೇರಿಯನ್ನು ನೀರಾವರಿ ಇಲಾಖೆಯ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದರಿಂದ ಅದನ್ನು ಕೆಡವಲಾಗಿದೆ ಎಂದು ತೆಲುಗು ದೇಶಂ ಪಕ್ಷ (ಟಿಡಿಪಿ) ಹೇಳಿದೆ.
ಇದನ್ನು ಓದಿ:ಚಂದ್ರಬಾಬು ನಾಯ್ಡು ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ ಎಂದಿದ್ದೇಕೆ ಜಗನ್​ ಮೋಹನ್​ ರೆಡ್ಡಿ
ಟಿಡಿಪಿ ಮುಖಂಡರೊಬ್ಬರ ದೂರಿನ ಆಧಾರದ ಮೇಲೆ ಈ ಕ್ರಮಕೈಗೊಳ್ಳಲಾಗಿದೆ. ನೀರಾವರಿ ಇಲಾಖೆಯ ಎರಡು ಎಕರೆ ಜಾಗದಲ್ಲಿ ವಿರೋಧ ಪಕ್ಷದ ಕಚೇರಿಯನ್ನು ಅಕ್ರಮವಾಗಿ ನಿರ್ಮಿಸಲಾಗುತ್ತಿದೆ ಎಂದು ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಸಿಆರ್‌ಡಿಎ) ಮತ್ತು ಮಂಗಳಗಿರಿ ತಾಡೆಪಲ್ಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಟಿಎಂಸಿ) ಪೌರಾಯುಕ್ತರಿಗೆ ದೂರು ನೀಡಲಾಗಿತ್ತು ಎಂದು ಟಿಡಿಪಿ ತಿಳಿಸಿದೆ. ಆ ದೂರನ್ನು ಅನುಸರಿಸಿ, ವೈಎಸ್‌ಆರ್‌ಸಿಪಿ ನಾಯಕರ ಈ ಅಕ್ರಮ ಕಟ್ಟಡದ ತೆರವುಗೊಳಿಸುವಿಕೆಯನ್ನು ಎಂಟಿಎಂಸಿ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಪ್ರಾರಂಭಿಸಲಾಗಿದೆ ಎಂದು ವಿವರಿಸಿದೆ.
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ತಮ್ಮ ಪಕ್ಷದ ಕಚೇರಿ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಲು ಸಿಎಂ ಆಗಿ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿದ್ದಾರೆ ಎಂದು ಟಿಡಿಪಿ ಆರೋಪಿಸಿದೆ. ಈ ಎರಡು ಎಕರೆಯಲ್ಲಿ ಕಚೇರಿ ನಿರ್ಮಿಸುವ ಮೂಲಕ ನೆರೆಯ 15 ಎಕರೆಯನ್ನು ಆಕ್ರಮಿಸಲು ಯೋಜಿಸಿದ್ದರು. ಈ ಎರಡು ಎಕರೆಯನ್ನು ವೈಎಸ್‌ಆರ್‌ಸಿಪಿಗೆ ಹಸ್ತಾಂತರಿಸಲು ನೀರಾವರಿ ಇಲಾಖೆ ಅನುಮತಿ ನೀಡಿಲ್ಲ ಎಂದು ಈಗ ಸ್ಪಷ್ಟಪಡಿಸಲಾಗಿದೆ ಎಂದು ಹೇಳಿದೆ.
ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಸೇಡು ರಾಜಕೀಯವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುತ್ತಿದ್ದಾರೆ ಮತ್ತು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ವೈಎಸ್ ಜಗನ್ ಮೋಹನ್ ರೆಡ್ಡಿ ಆರೋಪಿಸಿದರು.(ಏಜೆನ್ಸೀಸ್​​)
ನೀಟ್ ವಿವಾದದ ನಡುವೆ ಶಿಕ್ಷಣ ಇಲಾಖೆಯಿಂದ ಉನ್ನತ ಮಟ್ಟದ ಸಮಿತಿ ರಚನೆ; ಈ ಕಮಿಟಿ ಕಾರ್ಯ ಏನು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − two =
Remember me
