ಮಲಪ್ಪುರಂ:ಶಾಲೆಗೆ ಲೆಗ್ಗಿನ್ಸ್​ ಧರಿಸಿಬಂದು ಪಾಠ ಮಾಡುತ್ತಿದ್ದ ಶಿಕ್ಷಕಿಯ ಜೊತೆ ಅನುಚಿತವಾಗಿ ನಡೆದುಕೊಂಡ ಮುಖ್ಯಶಿಕ್ಷಕಿಯ ವಿರುದ್ಧ ದೂರು ದಾಖಲಾಗಿದೆ.
ಮಲಪ್ಪುರಂ ಜಿಲ್ಲೆಯ ಎಡಪಟ್ಟದಲ್ಲಿರುವ ಸಿಕೆಎಚ್​ಎಂ ಸರ್ಕಾರಿ ಉನ್ನತ ಮಾಧ್ಯಮಿಕ ಶಾಲೆಯ ಶಿಕ್ಷಕಿ ಸರಿತಾ ರವೀಂದ್ರನಾಥ್​ ಎಂಬುವರು ಜಿಲ್ಲಾ ಶಿಕ್ಷಣಾಧಿಕಾರಿಗೆ ದೂರು ದಾಖಲಿಸಿದ್ದಾರೆ. ಅಂದಹಾಗೆ ಸರಿತಾ ಅವರು ಕೇವಲ ಶಿಕ್ಷಕಿ ಮಾತ್ರವಲ್ಲ, ಮಿಸಸ್​ ಕೇರಳ ವಿಜೇತೆಯು ಹೌದು.
ಶಾಲೆಯಲ್ಲಿ ಹಿಂದಿ ಶಿಕ್ಷಕಿಯಾಗಿ ಸರಿತಾ ಸೇವೆ ಸಲ್ಲಿಸುತ್ತಿದ್ದಾರೆ. ದೂರಿನಲ್ಲಿರುವ ಪ್ರಕಾರ ಲಗ್ಗಿನ್ಸ್​ ಧರಿಸಿ ಬಂದಿದ್ದ ಸರಿತಾ ಮುಖ್ಯಶಿಕ್ಷಕಿ ರಾಮಲತಾ ಕಚೇರಿಗೆ ಸಹಿ ಹಾಕಲು ತೆರಳಿದಾಗ ಕೆಟ್ಟ ಪದಗಳಿಂದ ನಿಂದಿಸಿದ್ದಾರೆ. ನೀವು ಲೆಗ್ಗಿನ್ಸ್​ ಧರಿಸಿ ಬರುವುದರಿಂದ ಶಾಲೆಯ ಹೆಣ್ಣು ಮಕ್ಕಳು ಕೂಡ ಸರಿಯಾಗಿ ಉಡುಗೆ ತೊಡುವುದಿಲ್ಲ ಸರಿತಾರ ವಿರುದ್ಧ ಕಿಡಿಕಾರಿದ್ದಾರೆ.
ಸರಿತಾ ಅವರು ಈ ರೀತಿಯ ಉಡುಗೆ ಧರಿಸಿ ಬರುವಾಗ ಸರಿಯಾಗಿ ಬಟ್ಟೆ ಧರಿಸುವಂತೆ ಮಕ್ಕಳಿಗೆ ಹೇಳುವುದಾದರೂ ಹೇಗೆ ಎಂದು ರಾಮಲತಾ ಅವರು ಎಲ್ಲರ ಮುಂದೆಯೇ ಹೇಳಿದ್ದಾರೆ. ಇದನ್ನು ತಮಾಷೆಯಾಗಿ ತೆಗೆದುಕೊಂಡ ಸರಿತಾ, ಶಿಕ್ಷಕರ ಬಳಿ ಸಮವಸ್ತ್ರವಿದೆಯೇ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ರಾಮಲತಾ, ಸಮಸ್ಯೆ ಇರುವುದು ಸರಿತಾ ಅವರ ಪ್ಯಾಂಟ್​ನಲ್ಲಿ ಮತ್ತು ಅದು ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಬಟ್ಟೆಯಿಂದ ವ್ಯಕ್ತಿತ್ವವನ್ನು ಅಳೆದಿರುವುದು ಸರಿತಾರ ಅಸಮಾಧಾನಕ್ಕೆ ಕಾರಣವಾಗಿದೆ.
ಹದಿಮೂರು ವರ್ಷಗಳಿಂದ ನಾನು ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ನನ್ನ ಬೋಧನೆಯ ವಿರುದ್ಧ ಅಥವಾ ಶಿಕ್ಷಣಕ್ಕೆ ಸಂಬಂಧಿಸಿದ ಯಾವುದೇ ದೂರುಗಳಿಲ್ಲ. ಮುಖ್ಯೋಪಾಧ್ಯಾಯರಿಗೂ ಅಂತಹ ಯಾವುದೇ ದೂರುಗಳು ಬಂದಿಲ್ಲ. ಸರ್ಕಾರ ಶಿಕ್ಷಕರಿಗೆ ಯಾವುದೇ ಸಮವಸ್ತ್ರವನ್ನು ನಿಗದಿಪಡಿಸಿಲ್ಲ. ಇಂತಹ ಸಂದರ್ಭದಲ್ಲಿ ಸಭ್ಯ ಉಡುಗೆ ತೊಟ್ಟವರ ವಿರುದ್ಧ ಮಾತನಾಡುವುದು ಅವಮಾನಕರ ಎಂದು ಸರಿತಾ ಬೇಸರ ಹೊರಹಾಕಿದ್ದಾರೆ.
ನಾನು ಸಭ್ಯವಾಗಿಯೇ ಡ್ರೆಸ್ ಹಾಕಿದ್ದೆ, ಅದಕ್ಕಾಗಿಯೇ ಆ ಡ್ರೆಸ್​ನಲ್ಲಿದ್ದ ಫೋಟೋ ತೆಗೆದು ತಾನು ನೀಡಿರುವ ದೂರಿನ ಜೊತೆಗೆ ಲಗತ್ತಿಸಿದ್ದೇನೆ ಎಂದು ಶಿಕ್ಷಕಿ ಹೇಳಿದ್ದಾರೆ. ಶಾಲೆಗೆ ಜೀನ್ಸ್ ಧರಿಸಿದ್ದಕ್ಕಾಗಿ ಯಾವುದೇ ಪುರುಷ ಶಿಕ್ಷಕರನ್ನು ನಿಂದಿಸುವುದನ್ನು ನಾನು ಇದುವರೆಗೂ ನೋಡಿಲ್ಲ ಎಂದು ಸರಿತಾ ಹೇಳಿದರು.
ಶಿಕ್ಷಕರು ಆರಾಮವಾಗಿ ಮತ್ತು ಸಭ್ಯ ಧಿರಿಸಿನಲ್ಲಿ ಶಾಲೆಗೆ ಬರಬಹುದು ಎಂಬ ಕಾನೂನು ಇದೆ. ಇದೀಗ ಈ ಘಟನೆ ನನ್ನನ್ನು ಸಾಕಷ್ಟು ಮಾನಸಿಕ ಯಾತನೆಗೆ ದೂಡಿದೆ. ದೂರಿನ ಬಗ್ಗೆ ಮುಖ್ಯಶಿಕ್ಷಕಿ ರಾಮಲತಾ ಅವರು ಇದುವರೆಗೂ ಸ್ಪಂದಿಸಿಲ್ಲ. ಅಧಿಕಾರಿಗಳು ಸಹ ನನ್ನಿಂದು ಯಾವುದೇ ವಿವರಣೆ ಕೇಳಿಲ್ಲ. ಸರಿಯಾದ ಕ್ರಮ ಕೈಗೊಂಡಿಲ್ಲ ಎಂದು ಸರಿತಾ ಅಸಮಾಧಾನ ಹೊರಹಾಕಿದ್ದಾರೆ.(ಏಜೆನ್ಸೀಸ್​)
ಮದ್ದೂರಿನಲ್ಲಿ ತಾಯಿ, ಮಕ್ಕಳು ಸಾವು ಪ್ರಕರಣ: ಗಂಡನ ಫೋನ್​ನಲ್ಲಿ ಬಯಲಾದ ರಹಸ್ಯವೇ ಈ ದುರಂತಕ್ಕೆ ಕಾರಣ

ಮುಂಬೈ ಘಟನೆಯಿಂದ ಭಾರತದ ಬಗ್ಗೆ ನಿಮ್ಮ ಗ್ರಹಿಕೆ ಬದಲಾಯಿತೇ? ವಿದೇಶಿ​ ಯುವತಿಯ ಉತ್ತರಕ್ಕೆ ಮೆಚ್ಚುಗೆ ಮಹಾಪೂರ

ದೇವತೆಯ ಮುಖಕ್ಕೆ ಸಿಸಿಟಿವಿ ಅಳವಡಿಕೆ: ಡಿಎಂಕೆ ಸರ್ಕಾರದ ವಿರುದ್ಧ ಗುಡುಗಿದ ಅಣ್ಣಾಮಲೈ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × four =
Remember me
