ಹೈದರಾಬಾದ್: ತೆಲಂಗಾಣ ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಭರ್ಜರಿ ಉಡುಗೊರೆ ನೀಡಿದ್ದಾರೆ. ಶೇ 30 ರಷ್ಟು ವೇತನವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದಾರೆ.
ಅಲ್ಲದೇ ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 58 ರಿಂದ 61 ಕ್ಕೆ ಹೆಚ್ಚಳ ಮಾಡಿ ಆದೇಶ ಮಾಡಿದ್ದಾರೆ. 11 ನೇ ವೇತನ ಆಯೋಗದ ಶಿಫಾರಸಿನ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ತಿಳಿಸಿದ್ದಾರೆ. ಇದೇ ವರ್ಷ ಏಪ್ರಿಲ್​ನಿಂದ ವೇತನ ಹೆಚ್ಚಳ ಜಾರಿಗೆ ಬರಲಿದೆ. ವೇತನ ಹೆಚ್ಚಳ ಮಾಡುತ್ತಿರುವುದು ನನಗೆ ಅತೀವ ಸಂತಸ ನೀಡಿದೆ ಎಂದು ಅವರು ತಿಳಿಸಿದ್ದಾರೆ.
ತೆಲಂಗಾಣ ಸರ್ಕಾರಿ ನೌಕರರು ಕಳೆದ ಅನೇಕ ವರ್ಷಗಳಿಂದ ವೇತನ ಹೆಚ್ಚಳಕ್ಕೆ ಹೋರಾಟ ಮಾಡುತ್ತಾ ಬಂದಿದ್ದರು. ಕೇವಲ ಸರ್ಕಾರಿ ನೌಕರರಿಗೆ ಅಷ್ಟೇ ಅಲ್ಲದೇ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವರಿಗೆ, ಹೋಮ್​ ಗಾರ್ಡ್​​ಗಳಿಗೆ, ಆಶಾ, ಅಂಗನವಾಡಿ ಕಾರ್ಯಕರ್ತರಿಗೂ ವೇತನವನ್ನು ಹೆಚ್ಚಳ ಮಾಡಲಾಗಿದೆ.
ಕರೊನಾ ಬಿಕ್ಕಟ್ಟಿನಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿತ್ತು. ಹೀಗಾಗಿ ವೇತನ ಹೆಚ್ಚಳ ಮಾಡುವುದು ಒಂದು ವರ್ಷ ತಡವಾಯಿತು ಎಂದು ಮುಖ್ಯಮಂತ್ರಿ ಕೆಸಿಆರ್ ಹೇಳಿದ್ದಾರೆ.
ಸಿದ್ದು-ಡಿಕೆಶಿ ಜತೆ ಲಕ್ಷ್ಮೀ ಏಕಾಂತ ಮಾತುಕತೆ! ಸಿಎಂಗೆ ಲಕ್ಷ್ಮೀ ಬ್ಲಾಕ್​ಮೇಲ್​ ಮಾಡ್ತಾರಾ..?

ಕುಡಿದು ಸತ್ತರೆ ವಿಮೆ ಹಣ ಸಿಗಲ್ಲ: ಮಹತ್ವದ ತೀರ್ಪಿನಲ್ಲಿ ಸುಪ್ರೀಂಕೋರ್ಟ್‌ ಏನು ಹೇಳಿದೆ ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
