ಹೈದರಾಬಾದ್​:ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಸರ್ಕಾರ ರಚನೆಯತ್ತ ಹೆಜ್ಜೆ ಹಾಕಿದೆ. ಸೋಮವಾರ ರಾತ್ರಿಯೇ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಮಿಜೋರಾಂನಲ್ಲಿ ಜಡ್​ಪಿಎಂಗೆ ಪ್ರಚಂಡ ಗೆಲುವು – ಅಧಿಕಾರ ಕಳೆದುಕೊಂಡ ಸಿಎಂ ಝೋರಂತಂಗನೂತನ ಸಿಎಂ ಆಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಭಟ್ಟಿ ವಿಕ್ರಮಾರ್ಕ ಮತ್ತು ಸೀತಕ್ಕ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾತ್ರಿ 8:15ಕ್ಕೆ ರಾಜಭವನದಲ್ಲಿ ಅವರ ಪ್ರಮಾಣ ವಚನ ಸ್ವೀಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆಗೇರಿದ ಕಾಂಗ್ರೆಸ್ ಪಕ್ಷ ಸರ್ಕಾರ ರಚನೆಯ ಕಸರತ್ತನ್ನು ಚುರುಕುಗೊಳಿಸಿದ್ದುದು ತಿಳಿದ ಸಂಗತಿಯೇ. ಇದರ ಭಾಗವಾಗಿ ಸೋಮವಾರ ಬೆಳಗ್ಗೆ ಎಐಸಿಸಿ ವೀಕ್ಷಕರು ಸಿಎಲ್‌ಪಿ ನಾಯಕರ ಆಯ್ಕೆ ಕುರಿತು ಶಾಸಕರ ಅಭಿಪ್ರಾಯ ಪಡೆದರು. ಸಿಎಲ್‌ಪಿ ನಾಯಕರ ಆಯ್ಕೆಯ ನಿರ್ಧಾರವನ್ನು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಖರ್ಗೆ ಅವರಿಗೆ ವಹಿಸಿ ರೇವಂತ್ ರೆಡ್ಡಿ ಒಂದು ವಾಕ್ಯದ ನಿರ್ಣಯವನ್ನು ಮಂಡಿಸಿದರು.
ರೇವಂತ್ ಅವರು ಮಂಡಿಸಿದ ನಿರ್ಣಯವನ್ನು ಹಿರಿಯ ಮುಖಂಡರಾದ ಭಟ್ಟಿ ವಿಕ್ರಮಾರ್ಕ, ದಾಮೋದರ ರಾಜನರಸಿಂಹ, ಉತ್ತಮ್ ಕುಮಾರ್ ರೆಡ್ಡಿ ಮತ್ತು ತುಮ್ಮಲ ನಾಗೇಶ್ವರ ರಾವ್ ಸೇರಿದಂತೆ ಇತರ ಶಾಸಕರು ಬೆಂಬಲಿಸಿದರು.
ಸಿಎಲ್‌ಪಿ ಸಭೆಗೂ ಮುನ್ನ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈದರಾಬಾದ್‌ನ ಪಾರ್ಕ್ ಹಯಾತ್ ಹೋಟೆಲ್‌ನಲ್ಲಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದರು. ಭಟ್ಟಿ ವಿಕ್ರಮಾರ್ಕ, ಉತ್ತಮ್ ಕುಮಾರ್ ರೆಡ್ಡಿ, ಶ್ರೀಧರ್ ಬಾಬು, ದಾಮೋದರ ರಾಜನರಸಿಂಹ ಹಾಗೂ ಕೋಮಟಿ ರೆಡ್ಡಿ ಸಹೋದರರು ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.
“ಅವರ ಮನೆಯಲ್ಲಿ ನೋವಿದ್ದರೂ ತೋರಿಸಿಕೊಳ್ಳಲಿಲ್ಲ”: ಹೀಗೆಂದು ಪ್ರಧಾನಿ ಮೋದಿ ಪ್ರಶಂಸಿದ್ದು ಯಾರಿಗೆ?

ಇನ್ನೊಂದೆಡೆ ರಾಜ್ಯದಲ್ಲಿ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರಕ್ಕೆ ರಾಜಭವನ ಸಜ್ಜುಗೊಂಡಿದೆ. ಇದಕ್ಕಾಗಿ ರಾಜಭವನದ ಅಧಿಕಾರಿಗಳು ಹಾಗೂ ಸಿಬ್ಬಂದಿ ವ್ಯವಸ್ಥೆಯಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ, ಚುನಾವಣಾ ಆಯೋಗವು ಗೆದ್ದ ಶಾಸಕರ ಪಟ್ಟಿಯನ್ನು ರಾಜ್ಯಪಾಲರಿಗೆ ಸಲ್ಲಿಸಲಿದೆ.
ಹಾಲಿ ವಿಧಾನಸಭೆ ರದ್ದುಗೊಳಿಸಿ ರಾಜ್ಯಪಾಲರು ಅಧಿಸೂಚನೆ ಹೊರಡಿಸಿದ ಬಳಿಕ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಸಿಎಂ ಒಬ್ಬರೇ ಪ್ರಮಾಣ ವಚನ ಸ್ವೀಕರಿಸುತ್ತಾರೋ ಅಥವಾ ಬೇರೆಯವರು ಇರುತ್ತಾರೋ ಎಂಬುದು ಇನ್ನು ಕೆಲವೇ ಗಂಟೆಗಳಲ್ಲಿ ತಿಳಿಯಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
