ಅಮರಾವತಿ:ಪ್ರಸ್ತುತ ನಡೆಯುತ್ತಿರುವ ಏಕದಿನ ವಿಶ್ವಕಪ್​​ ಟೂರ್ನಿಯಲ್ಲಿ ಭಾರತ ತಂಡ ಮೊದಲ ಸೆಮಿಫಿನಾಲೆಯಲ್ಲಿ ನ್ಯೂಜಿಲೆಂಡ್​ ತಂಡವನ್ನು ಮಣಿಸಿ ಫೈನಲ್​ಗೆ ಲಗ್ಗೆ ಇಟ್ಟಿದೆ. ಇತ್ತ ರೋಹಿತ್​ ಶರ್ಮಾ ಪಡೆಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದ್ದು, ಫೈನಲ್​ನಲ್ಲೂ ಗೆದ್ದು ಬೀಗಲಿ ಎಂದು ಹಲವರು ಆಶಿಸಿದ್ದಾರೆ.
ಇದೀಗ ತೆಲುಗಿನ ಖ್ಯಾತ ನಟಿಯೊಬ್ಬರು ಭಾರತ ವಿಶ್ವಕಪ್ ಗೆದ್ದರೆ ತಾವು ಬೆತ್ತಲಾಗಿ ವಿಶಾಖಪಟ್ಟಣದ ಬೀಚ್​ನಲ್ಲಿ ಓಡಾಡುವುದಾಗಿ ಹೇಳಿದ್ದಾರೆ. ಈ ಕುರಿತು ನಟಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಮಾಡಿದ್ದು, ಚರ್ಚೆಗೆ ಗ್ರಾಸವಾಗಿದೆ.
ತೆಲುಗು ನಟಿ ರೇಖಾ ಬೋಜ್, ಈ ಬಾರಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ಚಾಂಪಿಯನ್ ಆದರೆ ನಾನು ವಿಶಾಖಪಟ್ಟಣದ ಬೀಚ್​ನಲ್ಲಿ ಬೆತ್ತಲೆಯಾಗಿ ಓಡಾಡುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನಟಿಯ ಪೋಸ್ಟ್​ಗೆ ಹಲವಾರು ಪ್ರತಿಕ್ರಿಯೆಗಳು ಬಂದಿದ್ದು, ಹಲವರು ಪೋಸ್ಟ್ ಅನ್ನು ಖಂಡಿಸಿದ್ದಾರೆ. ಇನ್ನು ಕೆಲವರು ಫೈನಲ್ ಪಂದ್ಯವನ್ನು ವೈಜಾಗ್​ ಬೀಚ್​ನಲ್ಲಿಯೇ ನಿಂತು ವೀಕ್ಷಿಸುತ್ತೇವೆ ಎಂದು ಟೀಕಿಸಿದ್ದಾರೆ.
If India wins the World Cup,I will streak on Visakhapatnam beach.India World Cup కొడితే, వైజాగ్ బీచ్ లో streaking చేస్తా…
ಇದನ್ನೂ ಓದಿ:ಏಕದಿನ ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ; ನಾಯಕತ್ವದಿಂದ ಕೆಳಗಿಳಿದ ಬಾಬರ್ ಅಜಂ
ಮಾಂಗಲ್ಯಂ’, ‘ಸ್ವಾತಿ ಚಿನುಕು’, ‘ರಂಗೀಲಾ’, ‘ಕಾಲಾಯ ತಸ್ಮಾಯ ನಾಮಃ’ ಸೇರಿದಂತೆ ತೆಲುಗಿನ ಕೆಲ ಸಿನಿಮಾಗಳಲ್ಲಿ ನಟಿಸಿರುವ ರೇಖಾ ಬೋಜ್ ಸಾಮಾಜಿಕ ಜಾಲತಾಣಗಳಲ್ಲಿ ಆಗಿಂದಾಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ನೆಟ್ಟಿಗರ ಗಮನ ಸೆಳೆಯುತ್ತಿರುತ್ತಾರೆ.
ವಿಶ್ವಕಪ್ ಗೆದ್ದರೆ ಬೆತ್ತಲಾಗುತ್ತೇನೆ ಎಂದು ನಟಿಯರು ಹೇಳುವುದು ಇದು ಹೊಸತೇನೂ ಅಲ್ಲ. ಗ್ಲಾಮರಸ್ ಪಾತ್ರಗಳ ಮೂಲಕವೇ ಜನಪ್ರಿಯತೆ ಗಳಿಸಿರುವ ನಟಿ ಪೂನಂ ಪಾಂಡೆ ಮೊದಲ ಬಾರಿ ಹೀಗೊಂದು ಹೇಳಿಕೆ ನೀಡಿದ್ದರು. ಭಾರತ 2011ರ ವಿಶ್ವಕಪ್ ಆಡುವ ಸಮಯದಲ್ಲಿ, ‘ಭಾರತ ವಿಶ್ವಕಪ್ ಗೆದ್ದರೆ ಬೆತ್ತಲಾಗುವೆ’ ಎಂದು ಹೇಳಿಕೆ ನೀಡಿದ್ದರು. ಪೂನಂರ ಈ ಹೇಳಿಗೆ ತೀವ್ರ ವಿರೋಧ ಆಗ ವ್ಯಕ್ತವಾಗಿತ್ತು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × two =
Remember me
