ಶ್ರೀನಗರ:ಬುಧವಾರ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಎನ್​ಕೌಂಟರ್​ ಕಾರ್ಯಚರಣೆಯಲ್ಲಿ ಹತ್ಯೆಗೀಡಾದ ಇಬ್ಬರು ಭಯೋತ್ಪಾದಕರು ಪಾಕಿಸ್ತಾನದ ನಿವಾಸಿಗಳು ಮತ್ತು ನಿಷೇಧಿತ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಭಾರತೀಯ ಸೇನೆ ಗುರುವಾರ ತಿಳಿಸಿದೆ.
ಇದನ್ನೂ ಓದಿ:ಯುಜಿಸಿ ನೆಟ್​ ಪರೀಕ್ಷೆ ರದ್ದು: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಶಿಕ್ಷಣ ಸಚಿವಾಲಯ
ಬುಧವಾರ ಕಾಶ್ಮೀರ ಕಣಿವೆಯ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಹತ್ಯೆಗೀಡಾದ ಭಯೋತ್ಪಾದಕರನ್ನು ಉಸ್ಮಾನ್ ಮತ್ತು ಉಮರ್ ಎಂದು ಗುರುತಿಸಲಾಗಿದೆ. ಎನ್​ಕೌಂಟರ್​ ಹತ್ಯೆಗೀಡಾದ ಉಗ್ರರು ಪಾಕ್​ ಮೂಲದವರು ಮತ್ತು ಎಲ್‌ಇಟಿಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು 5 ಸೆಕ್ಟರ್ ರಾಷ್ಟ್ರೀಯ ರೈಫಲ್ಸ್ ಕಮಾಂಡರ್ ಬ್ರಿಗೇಡಿಯರ್ ದೀಪಕ್ ದೇವ್ ಮಾಹಿತಿ ನೀಡಿದ್ದಾರೆ.
ಈ ಎನ್‌ಕೌಂಟರ್‌ನಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಕೂಡ ಗಾಯಗೊಂಡಿದ್ದಾರೆ. ಉಸ್ಮಾನ್ 2020 ರಿಂದ ಕಾಶ್ಮೀರ ಕಣಿವೆಯಲ್ಲಿ ಸಕ್ರಿಯರಾಗಿದ್ದಾರೆ ಎಂದು ಬ್ರಿಗೇಡಿಯರ್ ದೀಪಕ್ ದೇವ್ ಹೇಳಿದ್ದಾರೆ. ಬಾರಾಮುಲ್ಲಾದ ವಾಟರ್‌ಗಾಮ್ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ ನಂತರ ಎನ್‌ಕೌಂಟರ್ ನಡೆಯಿತು.
ಈ ಕಾರ್ಯಾಚರಣೆಯ ನಂತರ ಸೇನಾ ಅಧಿಕಾರಿಗಳು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಪಡಿಸಿಕೊಂಡರು. ಕಳೆದ ಕೆಲವು ವಾರಗಳಿಂದ, ಬಾರಾಮುಲ್ಲಾ ಜಿಲ್ಲೆಯ ಸೋಪೋರ್-ರಫ್ಲಾಬಾದ್ ಪ್ರದೇಶದಲ್ಲಿ ಭಯೋತ್ಪಾದಕ ಗುಂಪಿನ ಚಲನವಲನದ ನಿರಂತರ ಮಾಹಿತಿ ಇದೆ ಎಂದು ಬ್ರಿಗೇಡಿಯರ್ ಹೇಳಿದರು.

ರಫಿಯಾಬಾದ್ ಪ್ರದೇಶದ ಹದಿಪುರ ಗ್ರಾಮದ ಮನೆಯೊಂದರಲ್ಲಿ ಇಬ್ಬರು ಭಯೋತ್ಪಾದಕರು ಅಡಗಿಕೊಂಡಿದ್ದಾರೆ ಎಂದು ಜಮ್ಮು ಮತ್ತು ಕಾಸ್ಮೀರ್ ಪೊಲೀಸರ ಮೂಲಕ ನಿರ್ದಿಷ್ಟ ಗುಪ್ತಚರ ಮಾಹಿತಿ ಪಡೆಯಿತು. ಇದರ ಪರಿಣಾಮವಾಗಿ, ಭಾರತೀಯ ಸೇನೆ, ಜೆಕೆಪಿ ಮತ್ತು ಸಿಆರ್‌ಪಿಎಫ್ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು, ತ್ವರಿತವಾಗಿ ಆ ಪ್ರದೇಶವನ್ನು ಸುತ್ತುವರಿದವು ಎಂದು ಬ್ರಿಗೇಡಿಯರ್ ದೇವ್ ಅವರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಈ ಕಾರ್ಯಾಚರಣೆಯ ಸಮಯದಲ್ಲಿ, ಪ್ರಮಾಣಿತ ಕಾರ್ಯವಿಧಾನಗಳನ್ನು ಅನುಸರಿಸಿ ಪಕ್ಕದ ಮನೆಗಳಿಂದ ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಮತ್ತು ಪ್ರದೇಶವನ್ನು ಸುರಕ್ಷಿತಗೊಳಿಸಲಾಯಿತು. ನಂತರ, ಸೇನಾ ಸಿಬ್ಬಂದಿ ಉದ್ದೇಶಿತ ಮನೆಯನ್ನು ಸುತ್ತುವರೆದರು ಮತ್ತು ಹುಡುಕಾಟವನ್ನು ಪ್ರಾರಂಭಿಸಿದಾಗ, ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು. ನಂತರದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ತಟಸ್ಥಗೊಳಿಸಲಾಯಿತು” ಎಂದು ದೀಪಕ್ ದೇವ್ ಹೇಳಿದರು.
ಈ ಎನ್​ಕೌಂಟರ್​ ಕಾರ್ಯಾಚರಣೆಯ ಯಶಸ್ಸಿಗೆ ಕಾಶ್ಮೀರಿ ಜನರ ಸಂಪೂರ್ಣ ಸಹಕಾರವೇ ಕಾರಣ ಎಂದು ಬ್ರಿಗೇಡಿಯರ್ ಹೇಳಿದ್ದಾರೆ. ಕಾಶ್ಮೀರದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಲು ಭದ್ರತಾ ಪಡೆಗಳು ನಿರಂತರ ಪ್ರಯತ್ನಗಳನ್ನು ಮುಂದುವರೆಸುತ್ತವೆ ಎಂದು ಅವರು ಹೇಳಿದರು.
ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಿದವರಿಗೆ ಪೇಪರ್ ಸೋರಿಕೆ ತಡೆಯಲು ಸಾಧ್ಯವಾಗಲಿಲ್ಲವೇ?; ರಾಹುಲ್ ಗಾಂಧಿ ವ್ಯಂಗ್ಯ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × four =
Remember me
