ತೆಲಂಗಾಣ:ಲಗ್ನ ಪತ್ರಿಕೆ ಹಂಚಲು ಹೋದ ವರ ನಾಪತ್ತೆಯಾಗಿದ್ದು, ಮದುವೆ ದಿನ ಆತನ ಮೃತ ದೇಹ ಪತ್ತೆಯಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ರಾಜೇಂದರ್ (29) ಮೃತ. ಸದಾಶಿವನಗರ ಮಂಡಲದ ಅಡ್ಲೂರು ಎಲ್ಲರೆಡ್ಡಿ ಗ್ರಾಮದ ನಿವಾಸಿಯಾಗಿದ್ದಾನೆ. ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೆಲ ದಿನಗಳ ಹಿಂದೆ ರಾಂಪುರ ಗ್ರಾಮದ ಯುವತಿಯೊಂದಿಗೆ ರಾಜೇಂದರ್​ನ ಮದುವೆ ನಿಶ್ಚಯವಾಗಿತ್ತು. ಇದೇ 3ರಂದು ಸಂಬಂಧಿಕರಿಗೆ ಮದುವೆ ಕಾರ್ಡ್ ಹಂಚುವ ವೇಳೆ ಮನೆಯಿಂದ ಹೊರ ಹೋದ ರಾಜೇಂದರ್ ಮನೆಗೆ ಬಾರದೆ, ಸಂಬಂಧಿಕರು, ಸ್ನೇಹಿತರ ಮನೆಗಳಲ್ಲಿ ಎಷ್ಟು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಮದುವೆಯ ದಿನವಾದ ನಿನ್ನೆ ಲಿಂಗಂಪೇಟ ಮಂಡಲದ ಬಳಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ರಾಜೇಂದರ್ ಶವವನ್ನು ಸಂಬಂಧಿಕರು ಪತ್ತೆ ಮಾಡಿದ್ದಾರೆ. ಕುಟುಂಬಸ್ಥರ ದೂರಿನ ಮೇರೆಗೆ ಲಿಂಗಂಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮದುವೆಯ ದಿನವೇ ವರನ ಸಾವಿನಿಂದ ಕುಟುಂಬಸ್ಥರು ಹಾಗೂ ಊರಿನವರು ದುಃಖತಪ್ತರಾಗಿದ್ದರು. ಆತ್ಮಹತ್ಯೆಯ ಹಿಂದಿನ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಲಿಂಗಂಪೇಟ ಠಾಣೆ ಪೊಲೀಸರು ತಿಳಿಸಿದ್ದಾರೆ.
ಚಂದ್ರನಲ್ಲಿ ಎಕರೆಗಟ್ಟಲೆ ಜಮೀನು ಖರೀದಿಸಿ ಪತ್ನಿಗೆ ಉಡುಗೊರೆ ನೀಡಿದ ಪತಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:8 − 1 =
Remember me
