ನವದೆಹಲಿ:ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ರಿಲೀಫ್ ಸಿಕ್ಕಿದೆ. ಅವರ ವಿರುದ್ಧ ದಾಖಲಾದ ಎಫ್‌ಐಆರ್ ಅನ್ನು ಗೋವಾ ಕೋರ್ಟ್ ತಿರಸ್ಕರಿಸಿದೆ.
ಇದನ್ನೂ ಓದಿ:‘ನಾನು ಕೋಳಿಮರಿಯಲ್ಲ’: ಒವೈಸಿ ಹೀಗೆ ಹೇಳಿದ್ದೇಕೆ?
2017ರಲ್ಲಿ ಗೋವಾ ಚುನಾವಣೆ ವೇಳೆ ಈ ಪ್ರಕರಣ ದಾಖಲಾಗಿತ್ತು. ಪ್ರಚಾರದ ವೇಳೆ, ಸಾರ್ವಜನಿಕ ಸಭೆಯೊಂದರಲ್ಲಿ ಕೇಜ್ರಿವಾಲ್ ಹೇಳಿಕೆಗಳು ಚರ್ಚೆಯ ವಿಷಯವಾಯಿತು. ಎಲ್ಲರಿಂದ ಹಣ ತೆಗೆದುಕೊಳ್ಳಿ, ಆದರೆ ಪೊರಕೆಗೆ ಮತ ಹಾಕುವಂತೆ ಸಲಹೆ ನೀಡಿದ್ದರು. ಆಗ ಅವರ ಹೇಳಿಕೆಗೆ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಈ ಭಾಷಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ವಿರುದ್ಧ ಗೋವಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಪ್ರಜಾಪ್ರತಿನಿಧಿ ಕಾಯ್ದೆ, ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 171 (ಇ) ಅಡಿಯಲ್ಲಿ ಲಂಚದ ಪ್ರಕರಣವನ್ನು ದಾಖಲಿಸಲಾಗಿತ್ತು. ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಕಳೆದ ನವೆಂಬರ್‌ನಲ್ಲಿ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದರು. ಎಎಪಿ 2017 ಮತ್ತು 2022 ರಲ್ಲಿ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿತ್ತು. ಆದರೆ 2017 ರಲ್ಲಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ವಿಫಲವಾಯಿತು. 2022 ರಲ್ಲಿ ಎರಡು ಸ್ಥಾನಗಳನ್ನು ಗೆದ್ದಿತ್ತು. ಈ ಪ್ರಕರಣದ ವಿಚಾರಣೆ ಸುಮಾರು 7 ವರ್ಷ ನಡೆದಿದ್ದು, ಕೊನೆಗೆ ಶನಿವಾರದಂದು ತೀರ್ಪು ಪ್ರಕಟಿಸುವ ಮೂಲಕ ಎಫ್ ಐಆರ್ ತಿರಸ್ಕೃತಗೊಂಡಿದೆ.
ಅರವಿಂದ್ ಕೇಜ್ರಿವಾಲ್ ಸದ್ಯ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಇಡಿ ಅವರನ್ನು ಮಾರ್ಚ್‌ನಲ್ಲಿ ಅವರ ನಿವಾಸದಲ್ಲಿ ಬಂಧಿಸಿತ್ತು. ಮದ್ಯ ಹಗರಣದಲ್ಲಿ ಕೇಜ್ರಿವಾಲ್ ಕೂಡ ಭಾಗಿಯಾಗಿದ್ದಾರೆ ಎಂದು ಇಡಿ ಹೇಳುತ್ತದೆ.
ಭಾರತೀಯ ನೌಕಾಪಡೆಯಲ್ಲಿ 4ಸಾವಿರ ಉದ್ಯೋಗ: 85 ಸಾವಿರ ಸಂಬಳ..10ನೇ ತರಗತಿ ತೇರ್ಗಡೆ ಸಾಕು!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:one × one =
Remember me
