ನವದೆಹಲಿ:ಪ್ಲಾಸ್ಟಿಕ್ ಚೀಲದಲ್ಲಿ ಸುಮಾರು 55 ವರ್ಷ ಪ್ರಾಯದ ಮಹಿಳೆಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಬೈನ ಲಾಲ್‌ಬಾಗ್ ಪ್ರದೇಶದಲ್ಲಿ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹವನ್ನು ಕಬೋರ್ಡ್​ನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಸಂತ್ರಸ್ತ ಮಹಿಳೆಯೆ ಮಗಳೇ ಕೊಲೆ ಮಾಡಿ, ಮೃತದೇಹವನ್ನು ಬಚ್ಚಿಟ್ಟಿರುವ ಸಾಧ್ಯತೆ ಇದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಮೃತ ಮಹಿಳೆಯನ್ನು ವೀಣಾ ಪ್ರಕಾಶ್ ಜೈನ್ ಎಂದು ಗುರುತಿಸಲಾಗಿದೆ. ಸದ್ಯ ಆಕೆಯ ಮಗಳನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಡಿಸಿಪಿ ಪ್ರವೀಣ್ ಮುಂಡೆ ತಿಳಿಸಿದ್ದಾರೆ.
Mumbai | The decomposed body of a 53-year-old woman was found in a plastic bag in Lalbhaug area. The 22-year-old daughter of the deceased woman was taken into custody by the police for questioning. Police took the body into custody and sent it for postmortem: DCP Pravin Mundhepic.twitter.com/2AlVS225XV— ANI (@ANI)March 15, 2023
Mumbai | The decomposed body of a 53-year-old woman was found in a plastic bag in Lalbhaug area. The 22-year-old daughter of the deceased woman was taken into custody by the police for questioning. Police took the body into custody and sent it for postmortem: DCP Pravin Mundhepic.twitter.com/2AlVS225XV
ಕಾಣೆಯಾದ ಬಗ್ಗೆ ಮೃತಳ ಸಹೋದರ ನೀಡಿದ ದೂರಿನಂತೆ ಪೊಲೀಸರು ವೀಣಾ ಪ್ರಕಾಶ್​ಳನ್ನು ಹುಡುಕಾಡಿದ್ದಾರೆ. ಇದಕ್ಕಾಗಿ ಆಕೆ ವಾಸವಿದ್ದ ಮನೆಯ ವಠಾರದಲ್ಲಿ ನೆರೆಹೊರೆಯ ಮಂದಿಯನ್ನು ವಿಚಾರಿಸಿದ್ದಾರೆ. ಈ ವೇಳೆ ಸುಮಾರು ಎರಡು ತಿಂಗಳಿನಿಂದ ವೀಣಾ ಪ್ರಕಾಶ್​ಳನ್ನು ನೋಡಿಲ್ಲ ಎಂದು ಹೇಳಿದ್ದಾರೆ. ಹೇಳಿಕೆಗಳನ್ನು ದಾಖಲಿಸಿಕೊಂಡ ಪೊಲೀಸರು ಪತ್ತೆಕಾರ್ಯ ಚುರುಕುಗೊಳಿಸಿದ್ದಾರೆ.
ಇದನ್ನೂ ಓದಿ:ವಜ್ರದ ವ್ಯಾಪಾರಿಯ ಮಗಳೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ಗೌತಮ್ ಅದಾನಿ ಪುತ್ರ
ಈ ವೇಳೆ ಕಳೆದ ಮಂಗಳವಾರ ಸಂಜೆ ಕಪಾಟಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಇರುವುದು ಪತ್ತೆಯಾಗಿದೆ. ಕೂಡಲೇ ಪೊಲೀಸರು ಬಂದು ವಿಚಾರಣೆ ನಡೆಸಿದ್ದಾರೆ. ಮೃತದೇಹ ಕೊಳೆತ ಸ್ಥಿತಿಯಲ್ಲಿದ್ದರೂ ಯಾವುದೇ ರೀತಿಯ ದುರ್ವಾಸನೆ ಪೊಲೀಸರಿಗಾಗಲಿ, ಅಕ್ಕಪಕ್ಕದವರ ಗಮನಕ್ಕೆ ಬಂದಿಲ್ಲ ಎನ್ನಲಾಗಿದೆ.
ಮೃತದೇಹವನ್ನು ಪರಿಶೀಲಿಸಿದ ಪೊಲೀಸರು, ಆಕೆಯನ್ನು ಹರಿತವಾದ ಆಯುಧಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಬಳಿಕ ದೇಹವನ್ನು ಹರಿತವಾದ ಆಯುಧದಿಂದ ಕೈಕಾಲು ಸೇರಿದಂತೆ ತುಂಡರಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 2 =
Remember me
