ಕೊಚ್ಚಿ:ಗ್ರಾಹಕರು ಮದ್ಯ ಖರೀದಿಸಲು ಅಗತ್ಯ ಜಾಗ ಸೇರಿದಂತೆ ಇತರ ಮೂಲ ಸೌಲಭ್ಯ ಇಲ್ಲದ ಮದ್ಯದ ಅಂಗಡಿಗಳನ್ನು ಮುಚ್ಚಿ ಇಲ್ಲ ಬೇರೆ ಕಡೆ ಸ್ಥಳಾಂತರಿಸಿ ಎಂದು ಕೇರಳ ಹೈಕೋರ್ಟ್​ ರಾಜ್ಯ ಪಾನೀಯ ನಿಗಮಕ್ಕೆ ಸೂಚಿಸಿದೆ.
ಕೇರಳದಲ್ಲಿರುವ ಮದ್ಯದ ಅಂಗಡಿಗಳಲ್ಲಿ ಮೂಲಸೌಲಭ್ಯ ಕೊರತೆ ಇದೆ. ಗ್ರಾಹಕರು ನಿಂತು ಮದ್ಯ ಖರೀದಿಸಲು ಸ್ಥಳ ಇಲ್ಲ. ಹೀಗಾಗಿ ಗ್ರಾಹಕರು ಮದ್ಯ ಖರೀದಿಸಲು ರಸ್ತೆಯಲ್ಲಿ ಸಾಲು ನಿಂತಿರುತ್ತಾರೆ. ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.
ಅಲ್ಲದೆ ಈಗ ಕೇರಳದಲ್ಲಿ ಕರೊನಾ ವೈರಸ್​ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮದ್ಯದ ಅಂಗಡಿಗಳ ಮುಂದೆ ಗ್ರಾಹಕರು ಸಾಲು ನಿಲ್ಲುವುದು ಅಪಾಯಕಾರಿ ಎಂದು ಕೋರ್ಟ್​ ಹೇಳಿದೆ.
ಗ್ರಾಹಕರು ಮದ್ಯ ಖರೀದಿಗೆ ಸ್ಥಳ ಸೇರಿದಂತೆ ಇತರೆ ಸೌಲಭ್ಯ ಇಲ್ಲದ ಮದ್ಯದ ಅಂಗಡಿಗಳ ಪರವಾನಗಿ ರದ್ದು ಮಾಡುವ ಅಥವಾ ಸ್ಥಳಾಂತರ ಮಾಡುವ ಸಂಪೂರ್ಣ ಅಧಿಕಾರ ರಾಜ್ಯ ಪಾನೀಯ ನಿಗಮಕ್ಕೆ ಇದೆ. ಕೂಡಲೇ ನಿಗಮದ ಅಧಿಕಾರಿಗಳು ಸ್ಥಳ ಇಲ್ಲದ ಮದ್ಯದ ಅಂಗಡಿಗಳನ್ನು ಗುರುತಿಸಿ ಕ್ರಮ ಜರುಗಿಸಿ ಎಂದು ಸೂಚಿಸಿದೆ. (ಏಜೆನ್ಸೀಸ್​)
ಇಂದು (ಮಾ.24) ರಾತ್ರಿ 12ಗಂಟೆಯಿಂದ ಇಡೀ ಭಾರತ ಲಾಕ್​ಡೌನ್​; ಕರೊನಾದಿಂದ ಪಾರಾಗಲು ಇದೊಂದೇ ಮಾರ್ಗವೆಂದ ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − five =
Remember me
