ಹರಿಯಾಣ:ರೇವಾರಿ ಜಿಲ್ಲೆಯ ಹನುಮಾನ್ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದ ನಂತರ, ಪೊಲೀಸರು ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಹನುಮಾನ್ ಚಾಲೀಸಾವನ್ನು ಪಠಿಸುತ್ತಾ 10 ರೂಪಾಯಿಯನ್ನು ದೇವರ ಪಾದಕ್ಕೆ ಅರ್ಪಿಸಿದ ಕಳ್ಳನು ಕಾಣಿಕೆ ಹುಂಡಿಯನ್ನು ಮುರಿದು 5,000 ರೂಪಾಯಿ ದೋಚಿ ಪರಾರಿಯಾಗಿದ್ದಾನೆ.
ಇದನ್ನೂ ಓದಿ:ಆನೇಕಲ್ ಗಡಿ ಭಾಗಕ್ಕೆ ಬಂದ ಕಾಡಾನೆಗಳು: ಕಾಡಿಗಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಪರದಾಟ
ಭಕ್ತರು ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದಂತೆ, ಕಳ್ಳನು ಕುಳಿತು ಸುಮಾರು 10 ನಿಮಿಷಗಳ ಕಾಲ ಹನುಮಾನ್ ಚಾಲೀಸಾವನ್ನು ಪಠಿಸಲು ಪ್ರಾರಂಭಿಸುತ್ತಾನೆ. ಅರ್ಚಕರ ಸಮ್ಮುಖದಲ್ಲಿ ದೇವರ ಪಾದಗಳಿಗೆ 10 ರೂಪಾಯಿಗಳನ್ನು ಕಳ್ಳ ಅರ್ಪಿಸುತ್ತಾನೆ. ಗರ್ಭಗುಡಿಯಲ್ಲಿ ಆಸುಪಾಸಿನಲ್ಲಿ ಯಾರೂ ಇಲ್ಲದ ವೇಳೆ ಸಿಕ್ಕ ಅವಕಾಶವನ್ನು ಪಡೆದುಕೊಂಡ ಕಳ್ಳನು ಕಾಣಿಕೆ ಡಬ್ಬಿ ಒಡೆದು 5 ಸಾವಿರ ರೂ.ಗಳೊಂದಿಗೆ ಪರಾರಿಯಾಗಿದ್ದಾನೆ.
ಇದನ್ನೂ ಓದಿ:ಮಹಿಳೆಯ ಹೊಟ್ಟೆ ಸ್ಕ್ಯಾನ್​ ಮಾಡಿದಾಗ ವೈದ್ಯರಿಗೆ ಕಾದಿತ್ತು ಶಾಕ್! ಪತ್ತೆಯಾಯ್ತು 11.5 ಕೆ.ಜಿ. ಗಡ್ಡೆ…ಕಳ್ಳತನ ನಡೆದಿರುವುದು ಅರಿಯದ ಅರ್ಚಕರು ರಾತ್ರಿ ದೇವಸ್ಥಾನದ ಬಾಗಿಲು ಮುಚ್ಚಿ ಮನೆಗೆ ತೆರಳಿದ್ದರು. ಮರುದಿನ ಬೆಳಗ್ಗೆ ಹಿಂತಿರುಗಿ ನೋಡಿದಾಗ ಕಾಣಿಕೆ ಡಬ್ಬಿಯ ಬೀಗ ಮುರಿದಿರುವುದು ಕಂಡು ಬಂದಿದೆ.
ಇದನ್ನೂ ಓದಿ:ಬಿಬಿಎಂಪಿಯಲ್ಲಿ ಮೇಜರ್ ಸರ್ಜರಿಗೆ ಮುಂದಾದ ಡಿಸಿಎಂ; ಆರ್​​​ಆರ್ ನಗರ ವಲಯಕ್ಕೆ ನೂತನ ಅಧಿಕಾರಿಗಳ ನೇಮಕಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಕಳ್ಳತನ ಮಾಡುವ ಮೊದಲು ಹನುಮಾನ್ ಚಾಲೀಸಾವನ್ನು ಪಠಿಸುತ್ತಾ ದೇವರ ಪಾದಗಳಿಗೆ ಹಣೆಗಳನ್ನು ಅರ್ಪಿಸುತ್ತಿರುವುದು ಕಂಡುಬಂದಿದೆ. ಪೊಲೀಸರು ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆತನ ಪತ್ತೆಗೆ ಶೋಧ ನಡೆಸಿದ್ದಾರೆ.
ಗಂಡನ ಕುಡಿತದ ಚಟಕ್ಕೆ ಬೇಸತ್ತ ಪತ್ನಿ; ತಾನೂ ವಿಷ ಕುಡಿದು ಮಕ್ಕಳಿಗೂ ವಿಷ ಉಣಿಸಿದಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 7 =
Remember me
