ತೆಲಂಗಾಣ:ಬಿಸಿಲಿನ ಬೇಗೆಯಿಂದ ಹೆಚ್ಚುತ್ತಿರುವ ತಾಪಮಾನವನ್ನು ಗಮನದಲ್ಲಿಟ್ಟುಕೊಂಡು, ವಿದ್ಯಾರ್ಥಿಗಳಿಗೆ ಎದುರಾಗುವ ತೊಂದರೆಯನ್ನು ತಪ್ಪಿಸಲು ಇದೀಗ ತೆಲಂಗಾಣ ರಾಜ್ಯ ಶಿಕ್ಷಣ ಇಲಾಖೆ ಮಾರ್ಚ್ 15ರಿಂದ ಅರ್ಧ ದಿನ ಮಾತ್ರ ಶಾಲೆಯನ್ನು ನಡೆಸಲು ನಿರ್ಧರಿಸಿದೆ. ಈ ಕುರಿತು ಅಧಿಕೃತವಾಗಿ ಘೋಷಿಸಿರುವ ಸರ್ಕಾರ, ಎಲ್ಲಾ ಖಾಸಗಿ ಮತ್ತು ಸರ್ಕಾರಿ ಶಾಲೆಗಳು ಅರ್ಧ ದಿನ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದೆ.
ಇದನ್ನೂ ಓದಿ:ಪೋಲಿಯೋ ವ್ಯಾಕ್ಸಿನ್‌ನಿಂದ ವಂಚಿತರಾದರೆ ಅಂಗವೈಕಲ್ಯಕ್ಕೆ ಒಳಗಾಗುವ ಸಾಧ್ಯತೆ
ಈ ವೇಳಾಪಟ್ಟಿ ಹೊಂದಾಣಿಕೆಯು ಮಾರ್ಚ್ 15ರಿಂದ ಏಪ್ರಿಲ್ 23 ರವರೆಗೆ ಜಾರಿಯಲ್ಲಿರುತ್ತದೆ. ತರಗತಿಗಳು ಬೆಳಿಗ್ಗೆ 8ರಿಂದ ಮಧ್ಯಾಹ್ನ 12:30 ರವರೆಗೆ ಮಾತ್ರ ನಡೆಯುತ್ತವೆ ಎಂದು ಹೇಳಿದೆ. ಬಿಸಿಲ ಬೇಗೆಯಿಂದ ವಿದ್ಯಾರ್ಥಿಗಳಿಗೆ ಕಷ್ಟವಾಗಬಹುದು ಎಂದು ಮುಂದಾಲೋಚಿಸಿ, ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿ, ವಿದ್ಯಾರ್ಥಿಗಳ ಯೋಗಕ್ಷೇಮ ಮತ್ತು ಸೌಕರ್ಯಗಳಿಗೆ ಆದ್ಯತೆ ನೀಡುವುದು ಈ ನಿರ್ಧಾರದ ಉದ್ದೇಶವಾಗಿದೆ.
ಈ ನಿರ್ಧಾರವು ಹೆಚ್ಚುತ್ತಿರುವ ತಾಪಮಾನದ ಪರಿಣಾಮವನ್ನು ತಗ್ಗಿಸಲು ಮತ್ತು ಶಿಕ್ಷಣ ಕ್ಷೇತ್ರದ ಎಲ್ಲರಿಗೂ ಹೆಚ್ಚು ಅನುಕೂಲಕರವಾದ ಕಲಿಕೆಯ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸುತ್ತದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ,(ಏಜೆನ್ಸೀಸ್).
ಮದುವೆಗೂ ಮುನ್ನ ಆರೋಗ್ಯ ಸಮಸ್ಯೆ ತೋಡಿಕೊಂಡ ಅನಂತ್​; ಮಗನ ಮಾತಿಗೆ ಕಣ್ಣೀರಿಟ್ಟ ಮುಖೇಶ್ ಅಂಬಾನಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 1 =
Remember me
