ಅಮರಾವತಿ:ತಿರುಪತಿ ಇನ್ನು ಜಿಲ್ಲಾ ಕೇಂದ್ರವಾಗಲಿದ್ದು ಅದಕ್ಕೆ ಶ್ರೀ ಬಾಲಾಜಿ ಜಿಲ್ಲೆ ಎಂದು ಹೆಸರಿಡಲು ಆಂಧ್ರ ಪ್ರದೇಶ ಸರ್ಕಾರ ನಿರ್ಧರಿಸಿದೆ. ಸರ್ಕಾರದ ಈ ಕ್ರಮಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲಾ ಕೇಂದ್ರ ಮಾಡುವುದಕ್ಕೆ ಜನರಲ್ಲಿ ಖುಷಿ ಮನೆ ಮಾಡಿದ್ದರೂ ಬಾಲಾಜಿ ಜಿಲ್ಲೆ ಎಂದು ನಾಮಕರಣ ಮಾಡುವುದಕ್ಕೆ ಅತೃಪ್ತಿ ಸೂಚಿಸಿದ್ದಾರೆ.
ಶ್ರೀ ಬಾಲಾಜಿ ಎನ್ನುವುದು ವಿಶೇಷವಾಗಿ ಉತ್ತರ ಭಾರತದಲ್ಲಿ ಮಾತ್ರ ಪ್ರಚಲಿತದಲ್ಲಿರುವ ಹೆಸರು ಎನ್ನುವುದು ಅವರ ವಾದವಾಗಿದೆ. ‘ಸರಳವಾಗಿ ತಿರುಪತಿ ಎಂದು ಹೆಸರಿಸಿದರೆ ಉತ್ತಮ. ಇಲ್ಲವೇ ಶ್ರೀ ವೆಂಕಟೇಶ್ವರ ಅಥವಾ ಶ್ರೀ ಶ್ರೀನಿವಾಸ ಎಂದು ನಾಮಕರಣ ಮಾಡಿದರೆ ಸಾಕಿತ್ತು’ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.
ವಿಜಯವಾಡ ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗು ದೇಶಂ ಪಕ್ಷದ ಸಂಸ್ಥಾಪಕ ಎನ್.ಟಿ. ರಾಮರಾವ್ ಜಿಲ್ಲೆ ಎಂದು ಮರುನಾಮಕರಣ ಮಾಡಲು ವೈಎಸ್​ಆರ್ ಕಾಂಗ್ರೆಸ್ ಪಕ್ಷದ ಸರ್ಕಾರ ನಿರ್ಧರಿಸಿದೆ. ಇದೊಂದು ಮಹತ್ವದ ರಾಜಕೀಯ ನಡೆಯೆಂದು ಭಾವಿಸಲಾಗಿದೆ. ಯಾವುದಾದರೊಂದು ಜಿಲ್ಲೆಗೆ ಎನ್​ಟಿಆರ್ ಹೆಸರಿಡುವುದಾಗಿ ಕಳೆದ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಮುಖ್ಯಮಂತ್ರಿ ವೈ.ಎಸ್. ಜಗನ್​ವೋಹನ್ ರೆಡ್ಡಿ ಆಶ್ವಾಸನೆ ನೀಡಿದ್ದರು.
ಮತ್ತೆ ಬರಲಿದೆ ಡಬಲ್ ಡೆಕರ್ ಬಸ್​: ಇನ್ನು ಇದೇ ‘ಬೆಸ್ಟ್’​ ಎಂದರು ಮಿನಿಸ್ಟರ್​

ಹೃದಯಾಘಾತಕ್ಕೀಡಾಗಿ 24 ವರ್ಷದ ಪೈಲ್ವಾನ್ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 13 =
Remember me
