ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯ ಪ್ರಗತಿ ಮೈದಾನದ ಬಳಿ ಹಾಡಹಗಲೇ ನಡೆದಿದ್ದ, ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 1,500ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸುವ ಮೂಲಕ ಸುದ್ದಿಯಲ್ಲಿದ್ದಾರೆ.
ಪೊಲೀಸರು ಪ್ರಕರಣದ ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಉಳಿದವರನ್ನು ವಿಚಾರಣೆ ಬಳಿಕ ಬಿಟ್ಟು ಕಳುಹಿಸಿದ್ಧಾರೆ. ದೆಹಲಿ ಪೊಲೀಸರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.
ಇದನ್ನೂ ಓದಿ:VIDEO| ಲೇಡಿಸ್​ ಪಿಜಿ ಮುಂಭಾಗ ವ್ಯಕ್ತಿಯ ಅಸಭ್ಯ ವರ್ತನೆ; ಕಠಿಣ ಕ್ರಮಕ್ಕೆ ಆಗ್ರಹಿಸಿದ ಮಹಿಳಾ ಆಯೋಗ
ದೆಹಲಿ-ಸರೈ ಕಲೇ ಖಾನ್​- ನೊಯ್ಡಾ ಸಂಪರ್ಕಿಸುವ ಸುರಂಗದ ನಂತರ ಸಿಗುವ ಪ್ರಗತಿ ಮೈದಾನದ ಬಳಿ ಐವರು ಆರೋಪಿಗಳು ಹಾಡಹಗಲೇ ಕ್ಯಾಬ್​ನಲ್ಲಿ ತೆರಳುತ್ತಿದ್ದವರನ್ನು ತಡೆದು ಅವರ ಬಳಿ ಇದ್ದ 2 ಲಕ್ಷ ರೂಪಾಯಿ ಹಣ, ಮೊಬೈಲ್​ ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಿದ್ದರು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದ್ದಂತೆ ದೆಹಲಿಯಲ್ಲಿನ ಕಾನೂನು ಸುವ್ಯವಸ್ಥೆ ಕುರಿತು ಹಲವು ಪ್ರಶ್ನೆಗಳು ಎದ್ದಿದ್ದವು. ಈ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಹಾಗೂ ಲೆಫ್ಟಿನೆಂಟ್​ ಗವರ್ನರ್​ ವಿ.ಕೆ. ಸಕ್ಸೇನಾ ನಡುವೆ ಮಾತಿನ ಚಕಮಕಿಯೇ ನಡೆದಿತ್ತು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen − 14 =
Remember me
