ನವದೆಹಲಿ:ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆಗೆ ವೇದಿಕೆ ಸಜ್ಜುಗೊಂಡಿದ್ದು, ಸೋಮವಾರ ದೇಶಾದ್ಯಂತ ಮತದಾನ ನಡೆಯಲಿದೆ. ಬುಧವಾರ ಫಲಿತಾಂಶ ಪ್ರಕಟವಾಗಲಿದೆ. 137 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್​ನ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿರುವುದು ಇದು 6ನೇ ಬಾರಿಯಾಗಿದ್ದು, 24 ವರ್ಷಗಳ ನಂತರ ಗಾಂಧಿಯೇತರ ಕುಟುಂಬದ ನಾಯಕ ಚುಕ್ಕಾಣಿ ಹಿಡಿಯುವುದು ನಿಶ್ಚಿತವಾಗಿದೆ. ಕರ್ನಾಟಕದ ಹಿರಿಯ ನಾಯಕ ಎಂ. ಮಲ್ಲಿಕಾರ್ಜುನ ಖರ್ಗೆ ಮತ್ತು ಕೇರಳದ ಸಂಸದ ಶಶಿ ತರೂರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಆದರೆ ಖರ್ಗೆಗೆ ಹೆಚ್ಚಿನ ಬೆಂಬಲ ವ್ಯಕ್ತವಾಗಿದ್ದು, ಅವರು ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಹೀನಾಯ ಸೋಲನುಭವಿಸಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಸೋನಿಯಾ ಗಾಂಧಿ ಹಂಗಾಮಿ ಅಧ್ಯಕ್ಷೆಯಾದರು. ಪ್ರಜಾಸತ್ತಾತ್ಮಕವಾಗಿ ಅಧ್ಯಕ್ಷರ ಆಯ್ಕೆ ನಡೆಯಬೇಕೆಂಬ ಬೇಡಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆಯಾಗಿತ್ತು.
9,000 ಮತದಾರರು:ಪ್ರದೇಶ ಕಾಂಗ್ರೆಸ್ ಸಮಿತಿಗಳ 9,000ಕ್ಕೂ ಅಧಿಕ ಪ್ರತಿನಿಧಿಗಳು ಚುನಾವಣೆಯಲ್ಲಿ ಮತದಾರರಾಗಿದ್ದಾರೆ. ಮಧುಸೂದನ ಮಿಸ್ತ್ರಿ ಚುನಾವಣಾಧಿಕಾರಿಯಾಗಿದ್ದಾರೆ.
ಟಿಕ್ ಮಾರ್ಕ್​ಗೆ ಸೂಚನೆ:ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಮತಪತ್ರದಲ್ಲಿ ತಮ್ಮ ಆಯ್ಕೆಯ ಅಭ್ಯರ್ಥಿಗಳ ಹೆಸರಿನ ಮುಂದೆ ‘1’ ಬದಲು ಟಿಕ್ ಮಾರ್ಕ್ ಹಾಕಲು ಮತದಾರರಿಗೆ ಕೇಂದ್ರೀಯ ಚುನಾವಣಾ ಸಮಿತಿ ಅಧ್ಯಕ್ಷ ಮಧುಸೂದನ ಮಿಸ್ತ್ರಿ ಸೂಚನೆ ನೀಡಿದ್ದಾರೆ. ‘1’ ನಮೂದಿಸುವುದರಿಂದ ಗೊಂದಲ ಉಂಟಾಗಬಹುದು ಎಂದು ಅಭ್ಯರ್ಥಿ ಶಶಿ ತರೂರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಮತಪತ್ರದಲ್ಲಿ ಖರ್ಗೆ ಕ್ರಮ ಸಂಖ್ಯೆ ‘1’ ಹಾಗೂ ತರೂರ್ ಕ್ರಮ ಸಂಖ್ಯೆ ‘2’ ಆಗಿದೆ.
ಗೆಹ್ಲೋಟ್ ವಿಡಿಯೋಗೆ ತರೂರ್ ಆಕ್ಷೇಪ:ಮಲ್ಲಿಕಾರ್ಜುನ ಖರ್ಗೆ ಪರವಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿಡಿಯೋ ಪ್ರಚಾರ ಮಾಡಿರುವುದನ್ನು ಶಶಿ ತರೂರ್ ವಿರೋಧಿಸಿದ್ದಾರೆ. ಶಾಸಕಾಂಗ ಪಕ್ಷವೊಂದರ ನಾಯಕರು ಅಭ್ಯರ್ಥಿ ಪರ ಬಹಿರಂಗವಾಗಿ ಒಲವು ವ್ಯಕ್ತಪಡಿಸಿರುವುದು ಪಕ್ಷದ ಚುನಾವಣಾ ಮಾರ್ಗಸೂಚಿಯ ಉಲ್ಲಂಘನೆ ಎಂದು ಅವರು ಆರೋಪಿಸಿದ್ದಾರೆ.
ಪಕ್ಷದ ಹಿರಿಯ ನಾಯಕರು, ಪ್ರತಿನಿಧಿಗಳ ಒತ್ತಾಸೆಗೆ ಸ್ಪಂದಿಸಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಿದೆ. ಪ್ರತಿಸ್ಪರ್ಧಿ ಶಶಿ ತರೂರ್ ಬಗ್ಗೆ ಯಾವುದೇ ಹೇಳಿಕೆ ನೀಡಿ ವಿವಾದ ಸೃಷ್ಟಿಸಲು ಬಯಸುವುದಿಲ್ಲ. ಇದೊಂದು ಫ್ರೆಂಡ್ಲಿ ಫೈಟ್.
|ಮಲ್ಲಿಕಾರ್ಜುನ ಖರ್ಗೆಅಧ್ಯಕ್ಷ ಚುನಾವಣೆ ಸ್ಪರ್ಧಿ
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮತದಾನ ಕೇಂದ್ರ ಇರಲಿದೆ. ಭಾರತ್ ಜೋಡೋ ಕಾರಣಕ್ಕೆ ಯಾತ್ರಿಗಳ ಅನುಕೂಲಕ್ಕಾಗಿ ಬಳ್ಳಾರಿ ಗಡಿಯ ಸಂಗನಕಲ್ಲು ಬಳಿ ವಿಶೇಷ ಮತಗಟ್ಟೆ ಸ್ಥಾಪಿಸುತ್ತಿದ್ದು, 40 ಮಂದಿಗೆ ಮಾತ್ರ ಅಲ್ಲಿ ಮತದಾನ ಮಾಡಲು ಅವಕಾಶ ಇರಲಿದೆ.ರಾಜ್ಯದಿಂದ 503 ಮಂದಿ ಮತ ಚಲಾಯಿಸುವ ಅವಕಾಶ ಪಡೆದುಕೊಂಡಿದ್ದು, ಮೂವರು ಸಂಗನಕಲ್ಲು ಕ್ಯಾಂಪ್​ನಲ್ಲಿ ಮತಚಲಾಯಿಸುವರು.
ಪಿಸಿಸಿ ಪ್ರತಿನಿಧಿಗಳು, ಅಧ್ಯಕ್ಷರು, ಕಾರ್ಯಾಧ್ಯಕ್ಷರು, ವಿಧಾನಸಭೆ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರು, ಎಐಸಿಸಿ ಪ್ರಧಾನಕಾರ್ಯದರ್ಶಿಗಳು ಮತದಾನ ಮಾಡಲಿದ್ದಾರೆ. ಉಳಿದವರೆಲ್ಲ ಬೆಂಗಳೂರು ಮತಗಟ್ಟೆಗೆ ಬಂದು ಮತ ಚಲಾಯಿಸಲಿದ್ದಾರೆ. ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಕೂಡ ಬೆಂಗಳೂರಿನಲ್ಲೇ ಮತ ಚಲಾಯಿಸಲಿದ್ದಾರೆ. ಕೆಪಿಸಿಸಿ ಹೊಸ ಕಟ್ಟಡದಲ್ಲಿ ಮತದಾನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮತದಾರರಿಗೆ ಕ್ಯೂಆರ್ ಕೋಡ್ ಒಳಗೊಂಡ ಗುರುತಿನ ಚೀಟಿಯನ್ನು ಈಗಾಗಲೇ ವಿತರಿಸಲಾಗಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 5 =
Remember me
