ತಿರುವನಂತಪುರಂ:ಕೇರಳದ ವಯನಾಡು ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ನೂರಾರು ಜನರು ಮೃತಪಟ್ಟಿದ್ದಾರೆ. ಸಾವಿರಾರು ಮಂದಿಗೆ ಗಾಯಗಳಾಗಿದ್ದು, ಜನರ ಜೀವನ ಅಸ್ತವ್ಯಸ್ತಗೊಂಡಿದೆ. ವಯನಾಡಿನ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಯು ಮುಂದುವರಿದಿದ್ದು, ಈ ನಡುವೆ ಹಲವಾರು ದಕ್ಷಿಣ ಭಾರತದ ಸೆಲಿಬ್ರಿಟಿಗಳು ಸಂತ್ರಸ್ತರಿಗೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ನೆರವಾಗಲು ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಲು ಮುಂದಾಗಿದ್ದಾರೆ.
ಇದನ್ನು ಓದಿ:ಪೌರಾಣಿಕ ಕಥೆಗಳನ್ನು ಸಿನಿಮಾ ಮಾಡುವುದು ಅಪಾಯಕಾರಿ; ರಾಮ್​ಗೋಪಾಲ್​ ವರ್ಮಾ
ರಾಜ್ಯದಲ್ಲಿನ ಪರಿಹಾರ ಕಾರ್ಯಗಳಿಗೆ ಸಹಾಯ ಮಾಡಲು ಟಾಲಿವುಡ್​​ನ ಮೆಗಾಸ್ಟಾರ್​​ ಚಿರಂಜೀವಿ ಹಾಗೂ ಅವರ ಮಗ ಮೆಗಾಪವರ್​ಸ್ಟಾರ್​​ ರಾಮ್​ಚರಣ್​​ ಕೇರಳ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ಪ್ರಕೃತಿಯ ವಿಕೋಪದಿಂದಾಗಿ ಕೇರಳದಲ್ಲಿ ನೂರಾರು ಅಮೂಲ್ಯ ಜೀವಗಳ ವಿನಾಶ ಮತ್ತು ನಷ್ಟದಿಂದ ದುಃಖಿತರಾಗಿದ್ದೇವೆ. ವಯನಾಡು ದುರಂತದ ಸಂತ್ರಸ್ತರ ದುಃಖದ ಜತೆ ನಾವು ಇದ್ದೇವೆ. ರಾಮಚರಣ್ ಮತ್ತು ನಾನು ಜಂಟಿಯಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂಪಾಯಿ ನೀಡುತ್ತಿದ್ದೇವೆ. ನೊಂದವರೆಲ್ಲರೂ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ನಟ ಚಿರಂಜೀವಿ ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಮಾಡಿರುವ ಪೋಸ್ಟ್​ನಲ್ಲಿ ಬರೆದಿದ್ದಾರೆ.
Deeply distressed by the devastation and loss of hundreds of precious lives in Kerala due to nature’s fury in the last few days.My heart goes out to the victims of the Wayanad tragedy. Charan and I together are contributing Rs 1 Crore to the Kerala CM Relief Fund as a token of…
ನಟರಾದ ಸೂರ್ಯ ಮತ್ತು ವಿಕ್ರಮ್, ಮಮ್ಮುಟ್ಟಿ , ದುಲ್ಕರ್ ಸಲ್ಮಾನ್, ಫಹದ್ ಫಾಸಿಲ್, ನಜ್ರಿಯಾ, ನಯನತಾರಾ ಮತ್ತು ವಿಘ್ನೇಶ್ ಶಿವನ್ ದಂಪತಿ, ಮೋಹನ್‌ಲಾಲ್, ಅಲ್ಲು ಅರ್ಜುನ್​​​ ಕೇರಳ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.(ಏಜೆನ್ಸೀಸ್​​)
ವಕ್ಫ್ ಕಾಯ್ದೆ ತಿದ್ದುಪಡಿ ಧಾರ್ಮಿಕ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ; ಅಸಾದುದ್ದೀನ್ ಓವೈಸಿ
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × 3 =
Remember me
