ಡೆಹ್ರಾಡೂನ್​:ಕ್ಷುಲ್ಲಕ ಕಾರಣಕ್ಕೆ ಪ್ರವಾಸಿಗ ಹಾಗೂ ದೋಣಿ ನಡೆಸುವವರ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿರುವ ಘಟನೆ ಉತ್ತರಾಖಂಡದ ನೈನಿತಾಲ್​ನಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಉತ್ತರಪ್ರದೇಶ ಮೂಲದ ಪ್ರವಾಸಿಗ ಆಸಿಫ್​ ಎಂಬುವವರು ಹಂಭೀರವಾಗಿ ಗಾಯಗೊಂಡಿದ್ಧಾರೆ ಎಂದು ವರದಿಯಾಗಿದೆ.
ಉತ್ತರಪ್ರದೇಶ ಮೂಲದ ಆಸಿಫ್​ ಹಾಗೂ ಕುಟುಂಬಸ್ಥರು ಪ್ರವಾಸಕ್ಕೆಂದು ಉತ್ತರಾಖಂಡದ ನೈನಿತಾಲ್​ಗೆ ಬಂದಿದ್ದರು. ಈ ವೇಳೆ ಮಲ್ಲಿತಾಲ್​ ಸರೋವರವನ್ನು ವೀಕ್ಷಿಸಲು ಎರಡು ದೋಣಿಗಳನ್ನು ಬಾಡಿಗೆಗೆ ಪಡೆದಿದ್ದಾರೆ. ದೋಣಿಯಲ್ಲಿ ತೆರಳುವಾಗ ಮುಂಬದಿ ಇದ್ದ ದೋಣಿಯನ್ನು ಹಿಂಬದಿ ಬರುತ್ತಿದ್ದ ಮತ್ತೊಂದು ದೋಣಿ ಹಿಂದಿಕ್ಕಿದೆ.
ಇದನ್ನೂ ಓದಿ:ನಟಿ ಖುಷ್ಬೂ ಸುಂದರ್​ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು
ಇದರಿಂದ ಕೋಪಗೊಂಡ ಆಸಿಫ್​ ದೋಣಿ ನಡೆಸುವವರಿಗೆ ತಮ್ಮನ್ನು ಹಿಂಬಾಲಿಸುವಂತೆ ಹೇಳಿದ್ದಾರೆ. ಇದಾದ ಕೆಲ ಕ್ಷಣಗಳ ಬಳಿಕ ತಮ್ಮ ದೋಣಿಯನ್ನು ಹಿಂದಿಕ್ಕಿದ್ದಕ್ಕಾಗಿ ತೀವ್ರವಾಗಿ ಸಿಟ್ಟುಗೊಂಡ ಆಸಿಫ್​ ಅವಾಚ್ಯ ಶಬ್ದಗಳಿಂದ ನಿಂದಿಸಲು ಶುರು ಮಾಡಿದ್ಧಾರೆ. ಇದರಿಂದ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪ್ರವಾಸಿಗನ ಮೇಲೆ ದೋಣಿ ನಡೆಸುವವರು ಹಲ್ಲೆ ನಡೆಸಿದ್ಧಾರೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ದಡದಲ್ಲಿದ್ದ ಸ್ಥಳೀಯರು ಪರಿಸ್ಥಿತಿಯನ್ನು ತಿಳಿಸಿಗೊಳಿಸಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ಧಾರೆ ಎಂದು ವರದಿಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
