ಕಠ್ಮಂಡು:ಭಾರತಕ್ಕೆ ಮೂರು ದಿನಗಳ ಭೇಟಿಗಾಗಿ ಆಗಮಿಸಿದ್ದ ನೇಪಾಳದ ಪ್ರಧಾನಿ ಶೇರ್ ಬಹದೂರ್ ದೇವುಬಾ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಉಭಯರಾಷ್ಟ್ರಗಳ ಸಂಬಂಧ ಕುರಿತು ಮಾತುಕತೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಭಾರತ-ನೇಪಾಳ ಮಧ್ಯೆ ರೈಲು ಸಂಚಾರಕ್ಕೂ ಚಾಲನೆ ನೀಡಲಾಗಿದೆ. ಭಾರತದ ಗಡಿ ಪ್ರದೇಶದಲ್ಲಿನ ಜಯನಗರ ಮತ್ತು ನೇಪಾಳದ ಬಿಜಾಲ್​ಪುರ್ ಮಧ್ಯೆ ಈ ರೈಲು ಸಂಚಾರ ಆರಂಭಗೊಂಡಿದೆ. ಇವೆರಡರ ಮಧ್ಯೆ ಈ ಹಿಂದೆಯೇ ರೈಲು ಸಂಚಾರ ಇದ್ದಿದ್ದರೂ ಅದು 21 ವರ್ಷಗಳ ಹಿಂದೆ ಅಂದರೆ 2001ರಲ್ಲಿ ಸಂಭವಿಸಿದ್ದ ಭಾರಿ ಭೂಕುಸಿತದಿಂದಾಗಿ ಸ್ಥಗಿತಗೊಂಡಿತ್ತು.
ಇನ್ನು ಇದೇ ಸಂದರ್ಭದಲ್ಲಿ ನೇಪಾಳದಲ್ಲಿನ ರುಪೇ ಸೇವೆಗೂ ಚಾಲನೆ ನೀಡಲಾಗಿದೆ. ಜತೆಗೆ ನೇಪಾಳದ ಸೋಲು ವಿದ್ಯುತ್ ಪ್ರಸರಣ ಮಾರ್ಗವನ್ನೂ ಉದ್ಘಾಟಿಸಲಾಯಿತು. ಅಲ್ಲದೆ ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಯಿತು.
ಮತ್ತೊಂದೆಡೆ ರೈಲ್ವೆ ಸಂಚಾರದಿಂದ ಮುಕ್ತಗೊಂಡಿರುವ ಭಾರತ-ನೇಪಾಳದ ಗಡಿ ಭಾಗ ಸಮಾಜಘಾತಕ ಶಕ್ತಿಗಳಿಂದ ದುರ್ಬಳಕೆ ಆಗಬಾರದು ಎಂಬುದಾಗಿಯೂ ಪ್ರಧಾನಿ ಮೋದಿ ತಾಕೀತು ಮಾಡಿದ್ದಾರೆ.
ಹಬ್ಬದಂದೇ ನವವಿವಾಹಿತೆಯ ಸಾವು; ವಿಷ ಕುಡಿಸಿ ಸಾಯಿಸಿದ್ರಾ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + twenty =
Remember me
