ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ (ಜುಲೈ 27) ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ಓರ್ವ ಪಾಕಿಸ್ತಾನಿ ವ್ಯಕ್ತಿ ಮೃತಪಟ್ಟಿದ್ದಾರೆ. ಗಾಯಗೊಂಡ ಸೈನಿಕರನ್ನು ಸ್ಥಳಾಂತರಿಸಲಾಗಿದ್ದು ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.
ಇದನ್ನು ಓದಿ:ಕಾರ್ಗಿಲ್​ ವಿಜಯದಿವಸ್​; ತನ್ನ ತಪ್ಪುಗಳಿಂದ ಪಾಕಿಸ್ತಾನ ಇನ್ನೂ ಪಾಠ ಕಲಿತಿಲ್ಲ ಪ್ರಧಾನಿ ವಾಗ್ದಾಳಿ
ಉತ್ತರ ಕಾಶ್ಮೀರ ಜಿಲ್ಲೆಯ ಮಚ್ಚಲ್ ಸೆಕ್ಟರ್‌ನ ಕಮ್ಕಾರಿ ಪೋಸ್ಟ್ ಬಳಿ ಈ ಘಟನೆ ನಡೆದಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮವನ್ನು ಕಡಿಮೆ ಮಾಡುವ ಮೊದಲು ಅನೇಕ ದಾಳಿಗಳಲ್ಲಿ ಭಾಗಿಯಾಗಿರುವ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಮ್ (ಬಿಎಟಿ)ನಿಂದ ಈ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸುತ್ತಿವೆ. ಇದು ಆಕ್ರಮಣಕಾರಿ ಕ್ರಮವಾಗಿದ್ದು ಎಲ್​ಒಸಿ ಉದ್ದಕ್ಕೂ ಉಲ್ಬಣವಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಿಯಂತ್ರಣ ರೇಖೆಯಲ್ಲಿರುವ ಮಚ್ಚಲ್ ಸೆಕ್ಟರ್‌ನ ಕಮ್ಕಾರಿ ಫಾರ್ವರ್ಡ್​​​​ ಪೋಸ್ಟ್​​​ನಲ್ಲಿ ಅಪರಿಚಿತ ಸಿಬ್ಬಂದಿಯೊಂದಿಗೆ ಗುಂಡಿನ ಚಕಮಕಿ ನಡೆದಿದೆ. ಒಬ್ಬ ಪಾಕಿಸ್ತಾನಿ ವ್ಯಕ್ತಿ ಮೃತಪಟ್ಟಿದ್ದು, ನಮ್ಮ ಸೈನಿಕರು ಗಾಯಗೊಂಡಿದ್ದಾರೆ ಮತ್ತು ಅವರನ್ನು ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಭಾರತೀಯ ಸೇನೆಯು ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಮಾಡಿರುವ ಪೋಸ್ಟ್​ನಲ್ಲಿ ಹೇಳಿದೆ.
Firing in Macchal SectThere has been exchange of fire with unidentified personnel on a forward post in Kamkari, Macchal Sector on the line of control. One Pakistani person has been killed while two of our soldiers have suffered injuries and have been evacuated.Operations are…pic.twitter.com/DAOCpovrYT
ಕಳೆದ ಒಂದು ತಿಂಗಳಲ್ಲಿ ಕುಪ್ವಾರದಲ್ಲಿ ಇದು ನಾಲ್ಕನೇ ಎನ್‌ಕೌಂಟರ್ ಆಗಿದೆ. ಮಂಗಳವಾರ (ಜುಲೈ 23) ಕುಪ್ವಾರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿತ್ತು. ಇದರಲ್ಲಿ ಓರ್ವ ಸೇನಾ ಯೋಧ ಹುತಾತ್ಮರಾಗಿದ್ದರು. ಆದರೆ ಭದ್ರತಾ ಪಡೆಗಳು ಅಲ್ಲಿ ಒಬ್ಬ ಭಯೋತ್ಪಾದಕನನ್ನು ಕೊಂದಿದ್ದರು. ಜಮ್ಮು ಮತ್ತು ಕಾಶ್ಮೀರದ ಗುಡ್ಡಗಾಡು ಜಿಲ್ಲೆಗಳ ಮೇಲಿನ ಪ್ರದೇಶಗಳಲ್ಲಿ 40 ರಿಂದ 50 ಪಾಕಿಸ್ತಾನಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮಾಹಿತಿ ಬೆಳಕಿಗೆ ಬಂದಿದೆ. ಅಂದಿನಿಂದ ಅವರನ್ನು ಬಂಧಿಸಲು ಭದ್ರತಾ ಪಡೆ ಕಾರ್ಯಾಚರಣೆ ನಡೆಸುತ್ತಿದೆ. (ಏಜೆನ್ಸೀಸ್​​)
ಸರ್ಕಾರಕ್ಕೆ ಹಣಬೇಕೆಂದು ತೆರಿಗೆ ಹೆಚ್ಚಿಸಿಲ್ಲ; ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
