ಬೆಂಗಳೂರು:ಭೂಗತ ಪಾತಕಿ ರವಿ ಪೂಜಾರಿಯ ಪಾತಕ ಕೃತ್ಯಗಳಲ್ಲಿ ಕರ್ನಾಟಕದ ಕೆಲ ಪೊಲೀಸರೂ ಶಾಮೀಲಾಗಿದ್ದರೆಂಬ ವಿಚಾರ ಸಿಸಿಬಿ ವಿಚಾರಣೆಯಲ್ಲಿ ಬಹಿರಂಗವಾಗಿದೆ. ರಾಜ್ಯದ ಪೊಲೀಸ್ ಅಧಿಕಾರಿ ಜತೆ ನಿಕಟ ಸಂಪರ್ಕ ಇತ್ತಲ್ಲದೆ ಅವರಿಗೆ ಹಫ್ತಾ ವಸೂಲಿ ದುಡ್ಡಲ್ಲೂ ಪಾಲು ಕೊಡುತ್ತಿದ್ದೆ ಎಂದು 25 ವರ್ಷಗಳ ಬಳಿಕ ಸೆರೆಸಿಕ್ಕಿರುವ ರವಿ ಪೂಜಾರಿ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ.
ಮಂಗಳೂರಿಂದ ಮುಂಬೈ ಅಂಡರ್​ವರ್ಲ್ಡ್​ಗೆ ಕಾಲಿಟ್ಟ ರವಿ ಪೂಜಾರಿ, 1994ರಲ್ಲೇ ಮಹಾರಾಷ್ಟ್ರದಲ್ಲಿ ಕೊಲೆ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ. ನಂತರ ನೇಪಾಳದ ಮೂಲಕ ಉಗಾಂಡಾಗೆ ಹೋಗಿ ಅಲ್ಲಿಂದ ದಕ್ಷಿಣ ಆಫ್ರಿಕಾ ತಲುಪಿದ್ದ. ಅಲ್ಲಿದ್ದುಕೊಂಡೇ ತನ್ನ ಸಹಚರರ ನೆರವಿನಿಂದ ಭಾರತದ ಉದ್ಯಮಿಗಳು, ಸಿನಿಮಾ ರಂಗ, ಬಿಲ್ಡರ್ಸ್, ರಿಯಲ್ ಎಸ್ಟೇಟ್, ರಾಜಕಾರಣಿಗಳು ಸೇರಿ ಗಣ್ಯರಿಗೆ ಕರೆ ಮಾಡಿ ಬೆದರಿಕೆ ಒಡ್ಡಿ ಹಫ್ತಾ ವಸೂಲಿ ಮಾಡಿಸುತ್ತಿದ್ದ. ಕರ್ನಾಟಕದಲ್ಲೇ ರವಿ ಪೂಜಾರಿ ವಿರುದ್ಧ 97 ಕೇಸ್ ದಾಖಲಾಗಿವೆ.
ರವಿ ಪೂಜಾರಿಯ ಬೆದರಿಕೆ ಹಾಗೂ ಆತನ ಸಹಚರರು ನಡೆಸುತ್ತಿದ್ದ ಹಫ್ತಾ ವಸೂಲಿ ದಂಧೆಗೆ ಪೊಲೀಸ್ ಅಧಿಕಾರಿಯೊಬ್ಬರು ಸಹಕಾರ ಕೊಡುತ್ತಿದ್ದರು. ‘ನನ್ನ ಸಹಚರರು ಹಫ್ತಾ ವಸೂಲಿಯಿಂದ ಬಂದ ಹಣದಲ್ಲಿ ಅಧಿಕಾರಿಗೆ ಕಮಿಷನ್ ಕೊಟ್ಟು ಉಳಿದ ಹಣವನ್ನು ನನಗೆ ಕಳುಹಿಸುತ್ತಿದ್ದರು. ಆ ಅಧಿಕಾರಿ ಜತೆಗೆ ಹಲವು ಬಾರಿ ಇಂಟರ್​ನೆಟ್ ಕರೆಗಳ ಮೂಲಕ ಸಂಭಾಷಣೆ ನಡೆಸಿದ್ದೇನೆ. ತನ್ನ ಸಹಚರರ ಜತೆಗೂ ಪೊಲೀಸ್ ಅಧಿಕಾರಿ ಸಂಪರ್ಕದಲ್ಲಿ ಇದ್ದರು ಎಂದು ರವಿ ಪೂಜಾರಿ ಸಿಸಿಬಿ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸೆನೆಗಲ್​ನಿಂದ ಫೆ.22ಕ್ಕೆ ರವಿ ಪೂಜಾರಿಯನ್ನು ರಾಜ್ಯಕ್ಕೆ ಕರೆತಂದಿದ್ದ ಪೊಲೀಸರು, ವಿವೇಕನಗರ ಮತ್ತು ವೈಯಾಲಿಕಾವಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಡಿಜಿಪಿಗೆ ವರದಿ ಸಲ್ಲಿಕೆ:ರವಿ ಪೂಜಾರಿ ಜತೆ ನಂಟು ಹೊಂದಿದ್ದ ಆರೋಪದ ಹೊತ್ತಿರುವ ಎಸಿಪಿ ವಿರುದ್ಧ ಡಿಜಿಪಿ ಪ್ರವೀಣ್ ಸೂದ್​ಗೆ ನಗರ ಪೊಲೀಸ್ ಆಯುಕ್ತ ಎಸ್.ಭಾಸ್ಕರ್ ರಾವ್ ವರದಿ ನೀಡಿದ್ದಾರೆ. ರವಿ ಪೂಜಾರಿ ವಿಚಾರಣೆ ವೇಳೆ ಎಸಿಪಿ ಜತೆ ಸಂಪರ್ಕ ಇದ್ದ ವಿಚಾರ ಹೇಳಿದ್ದಾನೆ. ಈ ಆಪಾದನೆ ಹಿನ್ನೆಲೆಯಲ್ಲಿ ಎಸಿಪಿಯನ್ನು ವಿವಿಐಪಿ ವಿಭಾಗಕ್ಕೆ ಬುಧವಾರ ವರ್ಗಾವಣೆ ಮಾಡಲಾಗಿದೆ. ಕ್ರಮ ತೆಗೆದುಕೊಳ್ಳುವ ಬಗ್ಗೆ ನಿರ್ಧರಿಸಬೇಕೆಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. 1994ರಲ್ಲಿ ಪೊಲೀಸ್ ಸೇವೆ ಆರಂಭಿಸಿದ್ದು,, 2003ರಲ್ಲಿ ಮಂಗಳೂರಲ್ಲಿ ಇನ್​ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾಗ ರವಿ ಪೂಜಾರಿ ಮತ್ತು ಆತನ ಸಹಚರ ಕಲಿ ಯೋಗೇಶ್ ಸೇರಿ ಕರಾವಳಿ ಭಾಗದಲ್ಲಿ ಕೆಲವು ಭೂಗತ ಪಾತಕಿಗಳ ಹಾವಳಿ ಹೆಚ್ಚಾಗಿತ್ತು. ಆಗ ಅಧಿಕಾರಿ ಸಹ ಭೂಗತ ಜಗತ್ತಿನ ಜತೆ ನಂಟು ಸಾಧಿಸಿದ್ದರು. 2015ರವರೆಗೆ ಮಂಗಳೂರಿನಲ್ಲಿ ಸೇವೆ ಸಲ್ಲಿಸಿ ಆ ನಂತರ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದರು. ಭೂಗತ ಪಾತಕಿ ಬನ್ನಂಜೆ ರಾಜಾ ಬಂಧನ ಕಾರ್ಯಾಚರಣೆ ಹಾಗೂ ಉಗ್ರರ ಬಂಧನ ಕೇಸ್​ಗಳಲ್ಲೂ ಎಸಿಪಿ ಪ್ರಮುಖ ಪಾತ್ರವಹಿಸಿದ್ದರು.
ಕ್ರಿಮಿನಲ್ ಕೇಸ್ ಬೀಳುತ್ತಾ?
ಭೂಗತ ಪಾತಕಿ ಜತೆ ಸಂಪರ್ಕ ಹೊಂದಿದ್ದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಎಸಿಪಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ವಿಚಾರಣೆ ನಡೆಸಬೇಕಿದೆ. ಆದರೆ ಪೊಲೀಸರು ಪ್ರಕರಣ ದಾಖಲಿಸುತ್ತಾರಾ? ಇಲ್ಲವಾ? ಎಂಬುದನ್ನು ಕಾದು ನೋಡಬೇಕಿದೆ. ಒಂದು ವೇಳೆ ಪೊಲೀಸರು ಕೇಸ್ ದಾಖಲಿಸದಿದ್ದರೂ ರವಿ ಪೂಜಾರಿ ಕೋರ್ಟ್​ನಲ್ಲಿ ಹೇಳಿಕೆ ನೀಡಿದರೆ ತನಿಖಾಧಿಕಾರಿಗಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿವೆ.
ಅಧಿಕಾರಿ ಯಾರು?
ಎಸಿಪಿ ಹುದ್ದೆಯಲ್ಲಿರುವ ಆ ಅಧಿಕಾರಿ ಬೆಂಗಳೂರು ಕಮಿಷನರೇಟ್​ನಲ್ಲಿ ಪ್ರಮುಖ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಂಗಳೂರಿನಲ್ಲಿ ಇನ್​ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾಗಿಂದಲೂ ರವಿ ಪೂಜಾರಿ ಜತೆ ಸಂಪರ್ಕ ಇಟ್ಟುಕೊಂಡಿದ್ದರು ಎನ್ನಲಾಗಿದೆ. ರವಿ ಪೂಜಾರಿ ಜತೆ ನಂಟಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸದ್ಯ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ.
ಕರೊನಾ ಭೀತಿ: ವಿದೇಶದಲ್ಲಿರುವ ಕನ್ನಡಿಗರನ್ನು ವಾಪಸ್ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾರ್ಯೋನ್ಮುಖ

ಶಂಕಿತ ಕರೊನಾ ಸೋಂಕಿತ ವೃದ್ಧ ಕಲಬುರಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂಬುದು ಸುಳ್ಳೇಸುಳ್ಳು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + five =
Remember me
