ಗೋರಖ​ಪುರ:ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ತಾವೇ ಮುಖ್ಯಸ್ಥರಾಗಿರುವ ಗೋರಖಪುರದ ಗೋರಖನಾಥ್​ ದೇಗುಲದ ಗಡಿ ಗೋಡೆಯನ್ನು ಧ್ವಂಸಗೊಳಿಸಲು ಆದೇಶಿಸಿದ್ದಾರೆ. ಆ ಮೂಲಕ ಸಮಾಜಕ್ಕೆ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.ಸಿಎಂ ಆದೇಶದ ಮೇರೆಗೆ ದೇಗುಲಕ್ಕೆ ಸಂಬಂಧಿಸಿದ ಗೋಡೆ ಹಾಗೂ ಕೆಲ ಅಂಗಡಿಗಳನ್ನು ತೆರವುಗೊಳಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಇಷ್ಟಕ್ಕೂ ದೇಗುಲದ ಆಸ್ತಿಯನ್ನು ಧ್ವಂಸ ಮಾಡಿದ್ದೇಕೆ ಅಂತೀರಾ…? ಗೋರಖಪುರದಲ್ಲಿ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ವಿಸ್ತರಣೆ ಕಾರ್ಯ ನಡೆಸಲಾಗುತ್ತಿದೆ. ಇದಕ್ಕಾಗಿ ಗೋರಖನಾಥ್ ದೇಗುಲ, ಧರ್ಮಶಾಲಾ, ಮೊಹ್ದಿಪುರ, ಖೂಡಾ ಘಾಟ್​, ನಂದನಗರ ಪ್ರದೇಶದಲ್ಲಿ ರಸ್ತೆ ಅಗಲ ಮಾಡಲಾಗುತ್ತಿದೆ. ಇದಲ್ಲದೇ, ದೇಗುಲದ ಎದುರು ಭಾರಿ ವಾಹನ ದಟ್ಟಣೆ ಉಂಟಾಗುತ್ತಿತ್ತು. ಈ ಕಾರಣಕ್ಕಾಗಿ ರಸ್ತೆ ಅಗಲೀಕರಣ ಅನಿವಾರ್ಯವಾಗಿತ್ತು. ಹೀಗಾಗಿ ಸಿಎಂ ದೇಗುಲದ ಗಡಿ ಗೋಡೆಯನ್ನು ಕೆಡವಲು ಅನುಮತಿ ನೀಡಿದ್ದಾರೆ.
ಇದನ್ನೂ ಓದಿ;ಕಂಟೇನ್​ಮೆಂಟ್​ ಜೋನ್​ನಲ್ಲಿ ಮನೆ ಮನೆಗೆ ತೆರಳುತ್ತಿರುವ ಆರ್​ಎಸ್​ಎಸ್​ ಕಾರ್ಯಕರ್ತರು ಮಾಡುತ್ತಿರೋದೇನು?
ಸಾರ್ವಜನಿಕ ಹಿತ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಬಿದ್ದರೆ ಯಾವುದೇ ಕಟ್ಟಡ, ಅಂಗಡಿ, ಮನೆ, ಅಥವಾ ಧಾರ್ಮಿಕ ತಾಣಗಳ ಜಾಗವೇ ಆಗಿದ್ದರೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತದೆ ಎಂಬ ಸಂದೇಶವನ್ನು ನೀಡಿದ್ದಾರೆ ಎಂದು ದೇಗುಲದ ಹಿರಿಯ ಸಿಬ್ಬಂದಿ ವಿನಯ್​ ಗೌತಮ್​ ತಿಳಿಸಿದ್ದಾರೆ.
ದೇಗುಲದ ಮುಖ್ಯ ಗೇಟ್​ನಿಂದ ಇನ್ನೊಂದು ಗೇಟ್​ವರೆಗಿನ ಆವರಣ ಗೋಡೆ, ಹಾಗೂ ಅದಕ್ಕೆ ಹೊಂದಿಕೊಂಡಿದ್ದ 50ಕ್ಕೂ ಅಂಗಡಿಗಳನ್ನು ತೆರವುಗೊಳಿಸಲಾಗುತ್ತಿದೆ. ಒಟ್ಟು 17 ಕಿ.ಮೀ. ಚತುಷ್ಪಥ ರಸ್ತೆಯ ಶೇ.30 ಕಾಮಗಾರಿ ಪೂರ್ಣವಾಗಿದ್ದು, 2021ರಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮತ್ತೊಂದು ಸುತ್ತಿನ ಸೀಲ್​ ​ಡೌನ್​ ಬರುತ್ತಾ? ವಿಶ್ವ ಆರೋಗ್ಯ ಸಂಸ್ಥೆ ಸೂಚನೆ ಪಾಲಿಸಿದರೆ ಏಳು ರಾಜ್ಯಗಳು ಸಂಪೂರ್ಣ ಬಂದ್​?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + ten =
Remember me
