ಮುಂಬೈ:ಹಾಸ್ಟೆಲ್ ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಸೇವಿಸಿದ್ದಕ್ಕಾಗಿ ವಿದ್ಯಾರ್ಥಿಯೊಬ್ಬನಿಗೆ ಮತ್ತೊಬ್ಬ ವಿದ್ಯಾರ್ಥಿ ಅಪಮಾನ ಮಾಡಿದ ನಂತರ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆಯಲ್ಲಿ ಗಲಾಟೆ ಭುಗಿಲೆದ್ದಿದೆ. ಕಳೆದ ವಾರ ಹಾಸ್ಟೆಲ್ 12ರ ಕ್ಯಾಂಟೀನ್‌ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಐಐಟಿ ಪೊವಾಯಿಯಲ್ಲಿ ಓದುತ್ತಿರುವ ವಿದ್ಯಾರ್ಥಿಯೊಬ್ಬರು ಅನಾಮಧೇಯತೆಯ ಷರತ್ತಿನ ಮೇಲೆ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
ಕೆಲವು ವಿದ್ಯಾರ್ಥಿಗಳು ಕ್ಯಾಂಟೀನ್ ಗೋಡೆಗಳ ಮೇಲೆ “ಸಸ್ಯಾಹಾರಿಗಳಿಗೆ ಮಾತ್ರ ಇಲ್ಲಿ ಕುಳಿತುಕೊಳ್ಳಲು ಅವಕಾಶ” ಎಂದು ಘೋಷಿಸುವ ಪೋಸ್ಟರ್‌ಗಳನ್ನು ಹಾಕಿದ್ದು ಮಾಂಸಾಹಾರಿ ಆಹಾರವನ್ನು ಇಷ್ಟಪಡುವವರು ಸ್ಥಳ ಖಾಲಿ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದರು.
ಇದನ್ನೂ ಓದಿ:ನಾನು ಶುದ್ಧ ಸಸ್ಯಾಹಾರಿ, ವಿದೇಶಕ್ಕೆ ಹೋಗುವಾಗ ಸ್ಪೂನ್‌ ಕೂಡ ಹಿಡ್ಕೋತೀನಿ; ಟ್ರೋಲ್​​ ಆದ ಸುಧಾಮೂರ್ತಿ
“ಮೂರು ತಿಂಗಳ ಹಿಂದೆ, ವಿದ್ಯಾರ್ಥಿಗಳು ಸಲ್ಲಿಸಿದ ಆರ್‌ಟಿಐ ಪ್ರಶ್ನೆಯು ಸಂಸ್ಥೆಯು ಆಹಾರದ ವಿಚಾರವಾಗಿ ಪ್ರತ್ಯೇಕ ಅಧಿಕೃತ ನೀತಿಯನ್ನು ಹೊಂದಿಲ್ಲ ಎಂದು ಬಹಿರಂಗಪಡಿಸಿತು. ಆದಾಗ್ಯೂ, ವಿದ್ಯಾರ್ಥಿಗಳ ಆಹಾರದ ಆಯ್ಕೆಯ ಆಧಾರದ ಮೇಲೆ ಭಿನ್ನ ಆಸನ ವ್ಯವಸ್ಥೆಗಳನ್ನು ಸಂಸ್ಥೆಯಲ್ಲಿ ಇನ್ನೂ ಜಾರಿಯಲ್ಲಿ ಇಡಲಾಗಿದೆ ” ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.
ಕೆಲವು ವಿದ್ಯಾರ್ಥಿಗಳು ಟ್ವಿಟರ್‌ನಲ್ಲಿ ಇದು ಅವಮಾನಕರ ಎಂದು ದೂರಿದ್ದಾರೆ. ಈ ಬಗ್ಗೆ ಸಂಸ್ಥೆಯ ಅನೌಪಚಾರಿಕ ವಿದ್ಯಾರ್ಥಿಗಳ ಸಂಘವಾದ ಅಂಬೇಡ್ಕರ್ ಪೆರಿಯಾರ್ ಫುಲೆ ಸ್ಟಡಿ ಸರ್ಕಲ್ (APPSC) ಟ್ವೀಟ್ ಮಾಡಿ “ಹಾಸ್ಟೆಲ್ GSec ಗಾಗಿ RTI ಗಳು ಮತ್ತು ಮೇಲ್​ಗಳು ಆಹಾರ ಪ್ರತ್ಯೇಕತೆಗೆ ಯಾವುದೇ ಸಂಸ್ಥೆ ನೀತಿಯಿಲ್ಲ ಎಂದು ತೋರಿಸಿದರೂ, ಕೆಲವು ವ್ಯಕ್ತಿಗಳು ಮಾತ್ರ ಸಸ್ಯಾಹಾರಿಗಳು ಮಾತ್ರವೇ ನಿರ್ದಿಷ್ಟ ಸ್ಥಳದಲ್ಲಿ ಕುಳಿತುಕೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಈ ಮೂಲಕ ಮತ್ತು ಇತರ ವಿದ್ಯಾರ್ಥಿಗಳನ್ನು ಆ ಪ್ರದೇಶವನ್ನು ತೊರೆಯುವಂತೆ ಒತ್ತಾಯಿಸುತ್ತಿದ್ದಾರೆ” ಎಂದು ದೂರಿದ್ದಾರೆ.
ಇದನ್ನೂ ಓದಿ:ಬದಲಾಯಿತು ಪಾಕ್​ ಮಹಿಳೆಯ ಜೀವನ ಶೈಲಿ: ಮಾಂಸಾಹಾರಿ ಸೀಮಾ ಈಗ ಸಸ್ಯಾಹಾರಿ, ನಿತ್ಯವೂ ದೇವರ ಸೇವೆ!
Even though RTIs and mails for hostel GSec shows that there is no institute policy for food segregation, some individuals have taken it upon themselves to designate certain mess areas as "Vegetarians Only" and forcing other students to leave that area.#casteism#Discriminationpic.twitter.com/uFlB4FnHqi— APPSC IIT Bombay (@AppscIITb)July 29, 2023
Even though RTIs and mails for hostel GSec shows that there is no institute policy for food segregation, some individuals have taken it upon themselves to designate certain mess areas as "Vegetarians Only" and forcing other students to leave that area.#casteism#Discriminationpic.twitter.com/uFlB4FnHqi
ಘಟನೆಯನ್ನು ಖಂಡಿಸಿ, APPSC ಪೋಸ್ಟರ್‌ಗಳನ್ನು ಹರಿದು ಹಾಕಿದ್ದು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಅಭಿಯಾನವನ್ನು ಪ್ರಾರಂಭಿಸಿತು. “ಈ ಕಾಯ್ದೆಯು ಕ್ಯಾಂಪಸ್‌ನಲ್ಲಿರುವ ಕೆಲವು ಗುಂಪುಗಳಲ್ಲಿ ಶ್ರೇಷ್ಠತೆಯ ಕಲ್ಪನೆಯನ್ನು ಬಲಪಡಿಸುತ್ತದೆ. ಈ ಮೂಲಕ ಕೆಲ ವರ್ಗಗಳ ವಿದ್ಯಾರ್ಥಿಗಳ ವಿರುದ್ಧ ತಾರತಮ್ಯವನ್ನು ಶಾಶ್ವತಗೊಳಿಸುತ್ತದೆ” ಎನ್ನುವುದು ಈ ಸಂಘದ ವಾದ!.
2018 ರಲ್ಲಿ, ಐಐಟಿ-ಬಾಂಬೆ ಹಾಸ್ಟೆಲ್ ಮಾಂಸಾಹಾರಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪ್ಲೇಟ್‌ಗಳನ್ನು ಬಳಸಬೇಕೆಂದು ಸುತ್ತೋಲೆ ಹೊರಡಿಸಿದ್ದು ವಿವಾದವನ್ನು ಹುಟ್ಟುಹಾಕಿತ್ತು.
ಇದನ್ನೂ ಓದಿ:ಜಿಮ್​ಗೆ ಹೋಗುವ ಸಸ್ಯಾಹಾರಿಗಳು ವಿಟಮಿನ್​ಗಾಗಿ ಈ 5 ಪ್ರೋಟೀನ್ ಭರಿತ ಆಹಾರ ಸೇವಿಸಿ…
ಹಾಸ್ಟೆಲ್‌ನ ಮೆಸ್ ಕೌನ್ಸಿಲ್ ಕಳುಹಿಸಿರುವ ಇಮೇಲ್‌ನಲ್ಲಿ ಮಾಂಸಾಹಾರ ಸೇವಿಸುವವರು ಪ್ರತ್ಯೇಕ ಪ್ಲೇಟ್‌ಗಳನ್ನು ಬಳಸಬೇಕೆಂದು ಹಲವು ವಿದ್ಯಾರ್ಥಿಗಳಿಂದ ಬೇಡಿಕೆಗಳಿವೆ ಎಂದು ತಿಳಿಸಲಾಗಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − three =
Remember me
