ಲಖನೌ:ಉತ್ತರಪ್ರದೇಶದ ಮೌ ಜಿಲ್ಲೆಯ ಘೋಸಿ ವಿಧಾನಸಭಾ ಕ್ಷೇತ್ರದಲ್ಲಿ ಇಂಡಿಯಾ ಒಕ್ಕೂಟದ (ಸಮಾಜವಾದಿ ಪಕ್ಷ) ಅಭ್ಯರ್ಥಿ​ ಬಿಜೆಪಿ ವಿರುದ್ಧ 42 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಸಮಾಜವಾದಿ ಪಕ್ಷದಿಂದ ಕಣಕ್ಕಿಳಿದಿದ್ದ ಸುಧಾಕರ್​ ಸಿಂಗ್​ ಬಿಜೆಪಿಯ ಧಾರಾ ಸಿಂಗ್​ ಚೌಹಾಣ್​ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಉತ್ತರಪ್ರದೇಶ ಹಾಗೂ ರಾಷ್ಟ್ರ ರಾಜಕಾರಣಕ್ಕೆ ಹೊಸ ಸಂದೇಶವನ್ನು ರವಾನೆ ಮಾಡಿದ್ದಾರೆ.
ತಮ್ಮ ಪಕ್ಷದ ಅಭ್ಯರ್ಥಿ ಗೆಲುವಿನ ಕುರಿತು ಮಾತನಾಡಿದ ಸಮಾಜವಾದಿ ಪಕ್ಷದ ಮುಖ್ಯಸ್ಥ, ಉತ್ತರಪ್ರದೇಶ ವಿಧಾನಸಭೆ ವಿಪಕ್ಷ ನಾಯಕ ಅಖಿಲೇಶ್​ ಯಾದವ್​ ಇದು ದುರಹಂಕಾರ ಹಾಗೂ ದ್ವೇಷದ ಸೋಲು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ತತ್ತರಿಸಿರುವ ರಾಜ್ಯದ ಜನತೆ ಇಂಡಿಯಾ ಒಕ್ಕೂಟದ ಅಭ್ಯರ್ಥಿಗೆ ಮತ ಹಾಕುವ ಮೂಲಕ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತಮ್ಮಲ್ಲಿದ್ದ ಆಕ್ರೋಶವನ್ನು ಹೊರಹಾಕಿದ್ದಾರೆ.
ಇದನ್ನೂ ಓದಿ:ಜೆಡಿಎಸ್​ ಕೋಮುವಾದಿ ಬಿಜೆಪಿ ಜೊತೆ ಕೈಜೋಡಿಸಿರುವುದು ಅಚ್ಚರಿ ಮೂಡಿಸಿದೆ: ಸಂಸದ ಬಚ್ಚೇಗೌಡ ವಾಗ್ದಾಳಿ
ವಿಪಕ್ಷಗಳ ಒಕ್ಕೂಟ ಇಂಡಿಯಾದ ತಂತ್ರಗಾರಿಕೆ ಫಲಿಸಿದ್ದು, ಈ ಉಪಚುನಾವಣೆಯ ಗೆಲುವಿನ ಸಂದೇಶ ಇಡೀ ರಾಷ್ಟ್ರ ರಾಜಕಾರಣಕ್ಕೆ ಹೊಸ ದಿಕ್ಸೂಚಿಯಾಗಿ ಪರಿಣಮಿಸಲಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಪತನವಾಗುವುದು ನಿಶ್ಚಿತ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ, ಉತ್ತರಪ್ರದೇಶ ವಿಧಾನಸಭೆ ವಿಪಕ್ಷ ನಾಯಕ ಅಖಿಲೇಶ್​ ಯಾದವ್​ ತಿಳಿಸಿದ್ದಾರೆ.
ಇತ್ತ ಘೋಸಿ ವಿಧಾನಸಭೆ ಉಪಚುನಾವಣೆ ಸೋಲು ಬಿಜೆಪಿಗೆ ತೀವ್ರ ಹಿನ್ನಡೆಯನ್ನುಂಟು ಮಾಡಿದ್ದು, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​, ಡಿಸಿಎಂ ಕೇಶವ್​ ಪ್ರಸಾದ್​ ಮೌರ್ಯ ಸೇರಿದಂತೆ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದ ಸಚಿವ ಸಂಪುಟದ ಸದಸ್ಯರಿಗೆ ತೀವ್ರ ಮುಖಭಂಗವನ್ನುಂಟು ಮಾಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 13 =
Remember me
