ತೆಲಂಗಾಣ:ತೆಲಂಗಾಣ ಉಪ ಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ಅವರು ನೆಲದ ಮೇಲೆ ಕುಳಿತಿದ್ದಾರೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ಇತರ ಸಚಿವರೊಂದಿಗೆ ಸ್ಟೂಲ್ ಮೇಲೆ ಕುಳಿತಿದ್ದರು. ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಫೇಸ್‌ಬುಕ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, ಇದು ವಿಕ್ರಮಾರ್ಕ ಅವರಿಗೆ ಮಾಡಿದ ಅವಮಾನ ಎಂದು ಬಣ್ಣಿಸಿದೆ.
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಉಪ ಮುಖ್ಯಮಂತ್ರಿಗಳು ನಲ್ಗೊಂಡ ಜಿಲ್ಲೆಯ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದರು. ವಿಡಿಯೋದಲ್ಲಿ ಕೆಲವು ಸಚಿವರು ಸ್ಟೂಲ್ ಮೇಲೆ ಕುಳಿತಿದ್ದಾರೆ. ಎಲ್ಲರೂ ದೇವರ ಮುಖಾಮುಖಿಯಾಗಿ ಕುಳಿತಿದ್ದಾರೆ ಮತ್ತು ಅರ್ಚಕರು ಮಂತ್ರಗಳನ್ನು ಪಠಿಸುತ್ತಿದ್ದಾರೆ. ಆದರೆ, ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ನೆಲದ ಮೇಲೆಯೇ ಕುಳಿತಿದ್ದರು.
ಯಾದಾದ್ರಿ ದೇವಸ್ಥಾನಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಅವರನ್ನು ಮುಖ್ಯಮಂತ್ರಿ ರೇವಂತ್ ರೆಡ್ಡಿ ಮತ್ತು ಅವರ ಸಚಿವರು ಕ್ರೂರವಾಗಿ ಅವಮಾನಿಸಿದ್ದಾರೆ ಎಂದು ಬಿಆರ್‌ಎಸ್ ಹೇಳಿದೆ. ರೇವಂತ್ ರೆಡ್ಡಿ, ಸಚಿವರಾದ ಕೋಮಟಿರೆಡ್ಡಿ ವೆಂಕಟ ರೆಡ್ಡಿ ಮತ್ತು ನಲಮಾಡ ಉತ್ತಮ್ ಕುಮಾರ್ ರೆಡ್ಡಿ ಜೊತೆ ಕುರ್ಚಿ ಮೇಲೆ ಕುಳಿತುಕೊಂಡಿದ್ದು ಭಟ್ಟಿ ವಿಕ್ರಮಾರ್ಕ ಅವರನ್ನು ನಿಂದಿಸಿದ್ದಾರೆ ಎಂದು ಬಿಆರ್​​ಎಸ್ ತಿಳಿಸಿದೆ.
యాదాద్రి దేవాలయం సాక్షిగా దళితుడైన ఉప ముఖ్యమంత్రి భట్టి విక్రమార్కని, బహుజన బిడ్డ కొండా సురేఖను ఘోరంగా అవమానించిన సీఎం రేవంత్ రెడ్డి & కో
వారు పైన కూర్చొని భట్టి విక్రమార్కను, కొండా సురేఖను కింద కూర్చోపెట్టి అవమానించిన రేవంత్ రెడ్డి, సహచర మంత్రులు కోమటిరెడ్డి వెంకట్ రెడ్డి,…pic.twitter.com/hKv2JyEX22
— BRS Party (@BRSparty)March 11, 2024

ಭಟ್ಟಿ ವಿಕ್ರಮಾರ್ಕ ಯಾರು?ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೆ.ಚಂದ್ರಶೇಖರ ರಾವ್ ನೇತೃತ್ವದ ಬಿಆರ್‌ಎಸ್ ಪಕ್ಷವನ್ನು ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿಸಿತು. ರೇವಂತ್ ರೆಡ್ಡಿಯನ್ನು ಸಿಎಂ ಮಾಡಿದಾಗ ಮಲ್ಲು ಭಟ್ಟಿ ವಿಕ್ರಮಾರ್ಕ ತೆಲಂಗಾಣದ ಮೊದಲ ದಲಿತ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಮಧಿರಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿದ್ದ ಭಟ್ಟಿ ತೆಲಂಗಾಣದಲ್ಲಿ ಸಿಎಂ ಮುಖವಾಗಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು 1365 ಕಿ.ಮೀ ಉದ್ದದ ಪಾದಯಾತ್ರೆಗೆ ಜನತಾ ಯಾತ್ರೆ ಕೈಗೊಂಡಿದ್ದರು. ತೆಲಂಗಾಣದಲ್ಲಿ ಕಾಂಗ್ರೆಸ್ 119 ಸ್ಥಾನಗಳ ಪೈಕಿ 64 ಸ್ಥಾನಗಳನ್ನು ಗೆದ್ದಿತ್ತು. ಬಿಆರ್‌ಎಸ್‌ಗೆ 39 ಸ್ಥಾನಗಳು ಲಭಿಸಿವೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಂಕಿತ ಬಾಂಬರ್ ಯಾರೆಂಬುದು ಬಹುತೇಕ ಪತ್ತೆಯಾಗಿದೆ ಎಂದ ಗೃಹಸಚಿವ ಪರಮೇಶ್ವರ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three + 16 =
Remember me
