ನವದೆಹಲಿ: ಭಾರತದಲ್ಲ ಬ್ಯಾಂಕುಗಳಿಗೆ ಸಾಲ ಮರುಪಾವತಿಸದೇ ಬ್ರಿಟನ್​ನಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ ಅವರ ಗಡಿಪಾರು ಯಾವುದೇ ಹೊತ್ತಿನಲ್ಲೂ ಆಗಬಹುದು. ಇದಕ್ಕೆ ಸಂಬಂಧಿಸಿದ ಎಲ್ಲ ರೀತಿಯ ಕಾನೂನು ಪ್ರಕ್ರಿಯೆಗಳು ಪೂರ್ಣಗೊಂಡಿವೆ ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ಬುಧವಾರ ತಿಳಿಸಿವೆ.
ಇದನ್ನೂ ಓದಿ:ಕೇಸ್ ಕ್ಲೋಸ್ ಮಾಡಿ, ಸಾಲ ಮರುಪಾವತಿಸ್ತೇನೆ- ಅಂಗಾಲಾಚುತ್ತಿದ್ದಾರೆ ವಿಜಯ್ ಮಲ್ಯ!
ತನ್ನನ್ನು ಭಾರತಕ್ಕೆ ಗಡಿಪಾರು ಮಾಡದಂತೆ ವಿಜಯ್ ಮಲ್ಯ ಮಾಡಿದ್ದ ಮನವಿಯನ್ನು ಬ್ರಿಟನ್​ನ ಕೋರ್ಟ್​ ಮೇ 14ರಂದು ತಿರಸ್ಕರಿಸಿತ್ತು. ಇದರೊಂದಿಗೆ ಕಾನೂನು ಹೋರಾಟದ ಮೇಲಿನ ಹಿಡಿತವನ್ನು ಮಲ್ಯ ಕಳೆದುಕೊಳ್ಳುತ್ತ ಬಂದಿದ್ದು, ಇದೀಗ ಅವರ ಗಡಿಪಾರು ಹತ್ತಿರದಲ್ಲೇ ಇದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೀಡಿದ ಮಾಹಿತಿಯನ್ನು ಉಲ್ಲೇಖಿಸಿ ಐಎಎನ್​ಎಸ್​ ವರದಿ ಮಾಡಿದೆ. ಮೇ 14ರಂದು ಮಲ್ಯ ಮೇಲ್ಮನವಿ ತಿರಸ್ಕೃತಗೊಂಡ ಕಾರಣ ಮುಂದಿನ 28 ದಿನಗಳೊಳಗೆ ಗಡಿಪಾರು ನಡೆಯಲಿದೆ ಎಂದು ಹೇಳಲಾಗಿತ್ತು. ಈ ಲೆಕ್ಕಾಚಾರ ಪ್ರಕಾರ ನೋಡಿದರೆ ಈಗಾಗಲೇ 20 ದಿನಗಳ ಕಳೆದಿವೆ. ಹೀಗಾಗಿ ಶೀಘ್ರವೇ ಭಾರತಕ್ಕೆ ವಿಜಯ್ ಮಲ್ಯ ಅವರನ್ನು ಕರೆತರುವುದನ್ನು ನಿರೀಕ್ಷಿಸಲಾಗುತ್ತಿದೆ.
ಇದನ್ನೂ ಓದಿ:ಇನ್ನು ಕೆಲವೇ ದಿನಗಳಲ್ಲಿ ಭಾರತದ ಜೈಲು ಸೇರಲಿದ್ದಾರೆ ವಿಜಯ್​ ಮಲ್ಯ
ಆದಾಗ್ಯೂ, ಗಡಿಪಾರಿನ ಕುರಿತ ದಿನಾಂಕದ ಬಗ್ಗೆ ಯಾವುದೇ ಮಾಹಿತಿಯನ್ನು ಬಹಿರಂಗ ಮಾಡಿಲ್ಲ. ಯುಕೆ ಸುಪ್ರೀಂ ಕೋರ್ಟ್​ನಲ್ಲಿ ಮಲ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ. ಹೀಗಾಗಿ ಗಡಿಪಾರಿಗೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳನ್ನು ಭಾರತ ಸರ್ಕಾರ ಪೂರ್ಣಗೊಳಿಸಿದೆ. ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ತಂಡ ಈ ಪ್ರಕ್ರಿಯೆಗೆ ಸಂಬಂಧಿಸಿದ ಕೆಲಸಗಳನ್ನು ಮಾಡುತ್ತಿವೆ. ಗಡಿಪಾರು ಆಗುತ್ತಿದ್ದಂತೆಯೇ ಮೊದಲು ಪ್ರಕರಣ ದಾಖಲಿಸಿಕೊಂಡ ತನಿಖಾ ಸಂಸ್ಥೆ ಎಂಬ ನೆಲೆಯಲ್ಲಿ ಸಿಬಿಐ ಮಲ್ಯನನ್ನು ವಶಕ್ಕೆ ತೆಗೆದುಕೊಳ್ಳಲು ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. (ಏಜೆನ್ಸೀಸ್)
17ರಂದು ವಿಶ್ವಸಂಸ್ಥೆ ಭದ್ರತಾ ಸಮಿತಿ ಸದಸ್ಯತ್ವಕ್ಕೆ ಚುನಾವಣೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × 5 =
Remember me
