ಕೊಲ್ಕತ್ತ:ಪಶ್ಚಿಮ ಬಂಗಾಳದಲ್ಲಿ ಜುಲೈ 8ರಂದು ನಡೆಯಲಿರುವ ಪಂಚಾಯತ್​ ಚುನಾವಣೆ ತೀವ್ರ ಕಾವು ಪಡೆದಿದ್ದು, ನಾಮಪತ್ರ ಸಲ್ಲಿಸುವ ಮೊದಲ ದಿನವೇ ಹಿಂಸಾಚಾರ ನಡೆದಿದೆ.
ಹಲವಾರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಆಗಮಿಸಿದ ವೇಳೆ ಕೆಲವೆಡೆ ಘರ್ಷಣೆ ಉಂಟಾದ ಕಾರಣ BDO ಕಚೇರಿಗಳಿಗೆ ಘೇರಾವ್​ ಹಾಕಿದ ಪ್ರಸಂಗವು ನಡೆದಿದೆ.
ಮುರ್ಷಿದಾಬಾದ್​ ಜಿಲ್ಲೆಯಲ್ಲಿ ಟಿಎಂಸಿ, ಸಿಪಿಎಂ, ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದು, ಡೊಮ್​ಕಲ್​ನಲ್ಲಿ ತೃಣಮೂಲ ಪಕ್ಷದ ಮುಖಂಡರ ಮೇಲೆ ಹಲ್ಲೆ ನಡೆದಿದೆ. ಟಿಎಂಸಿ ಕಾರ್ಯಕರ್ತರ ಮೇಲೆ ಹಲ್ಲೆ ಬೆನ್ನಲ್ಲೇ ಸ್ಥಳೀಯ ಕಾಂಗ್ರೆಸ್​ ಮುಖಂಡ ಫೂಲ್​ಚಂದ್​ ಶೇಖ್(45) ಎಂಬುವವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಇದನ್ನೂ ಓದಿ:ಪೊಲೀಸ್​ ಅಧಿಕಾರಿಗಳ ಸೋಗಿನಲ್ಲಿ ಚಿನ್ನಾಭರಣ ದೋಚಿದ ಖದೀಮರು; ತನಿಖೆ ವೇಳೆ ಪ್ರಕರಣಕ್ಕೆ ಸಿಕ್ತು ರೋಚಕ ಟ್ವಿಸ್ಟ್​
ಫೂಲ್​ಚಂದ್ ಅವರ ಹತ್ಯೆ ಹಿಂದೆ ಟಿಎಂಸಿಯ ಕೈವಾಡ ಇದೆ ಎಂದು ಕಾಂಗ್ರೆಸ್​ ಆರೋಪಿಸಿದೆ. ಪ್ರಕರಣ ಸಂಬಂಧ ಸ್ಥಳೀಯ ತೃಣಮೂಲ ಪಕ್ಷದ ಮುಖಂಡ ಬಶೀರ್​ ಮೊಲ್ಲಾ ಎಂಬಾತನನ್ನು ಬಂಧಿಸಿದ್ದು, ಆತನ ಬಳಿ ಇದ್ದ ಗನ್​ಅನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ.
ಕಾಂಗ್ರೆಸ್​, ಸಿಪಿಎಂ ಪಕ್ಷದ ಕಾರ್ಯಕರ್ತರು ನಾಮಪತ್ರ ಸಲ್ಲಿಸಲು ಜಂಟಿಯಾಗಿ ಆಗಮಿಸಿದ ವೇಳೆ ಟಿಎಂಸಿ ಕಾರ್ಯಕರ್ತರ ಜೊತೆ ವಾಗ್ವಾದ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು, ರಸ್ತೆ ಬದಿ ನಿಂತಿದ್ದ ವಾಹನಗಳು ಜಖಂಗೊಂಡಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 6 =
Remember me
